ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನಿಂದ ಹೊಸ ಅಭ್ಯರ್ಥಿಗಳ ಪ್ರಕಟ
2019ರ ಲೋಕಸಭೆ ಚುನಾವಣೆಯಲ್ಲಿ ಬೆಗುಸರೈ ಕ್ಷೇತ್ರದಿಂದ ಕನ್ಹಯ್ಯ ಸ್ಪರ್ಧೆ
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಕಣಕ್ಕೆ ಇಳಿದಿದ್ದ ಕನ್ಹಯ್ಯ
ಕಾಂಗ್ರೆಸ್ ನಿನ್ನೆ ಲೋಕಸಭೆ ಚುನಾವಣೆಗೆ ಹೊಸ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ವಿಶೇಷ ಅಂದರೆ ಕನ್ಹಯ್ಯ ಕುಮಾರ್ ಹಾಗೂ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿಗೆ ಟಿಕೆಟ್ ಘೋಷಣೆ ಮಾಡಿದೆ.
37 ವರ್ಷದ ಕನ್ಹಯ್ಯ ಕುಮರ್ಗೆ ನಾರ್ತ್ ಈಸ್ಟ್ ದೆಹಲಿ ಕ್ಷೇತ್ರದ ಟಿಕೆಟ್ ನೀಡಿದೆ. ಜೆಎನ್ಯು ವಿವಿಯ ಸ್ಟೂಡೆಂಟ್ ಯೂನಿಯನ್ನ ಮಾಜಿ ಅಧ್ಯಕ್ಷರಾಗಿದ್ದ ಕನ್ಹಯ್ಯಗೆ, ಎದುರಾಳಿಯಾಗಿ ಬಿಜೆಪಿಯಿಂದ ಸಂಸದ ಮನೋತ್ ತಿವಾರಿ ನಿಂತಿದ್ದಾರೆ. ಮೇ 25 ರಂದು ದೆಹಲಿಯಲ್ಲಿ ಮತದಾನ ನಡೆಯಲಿದೆ.
2019ರ ಲೋಕಸಭೆ ಚುನಾವಣೆ ವೇಳೆ ಕನ್ಹಯ್ಯ ಕುಮಾರ್ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಬಿಹಾರದ ಬೆಗುಸರೈ ಲೋಕಸಭೆ ಕ್ಷೇತ್ರದಿಂದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ನಿಂತು ಸೋಲನ್ನು ಅನುಭವಿಸಿದ್ದರು. ನಂತರದ ದಿನಗಳಲ್ಲಿ ಅಂದರೆ 2021ರಲ್ಲಿ ಕನ್ಹಯ್ಯ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದರು.
ಈಶಾನ್ಯ ದೆಹಲಿ ಕ್ಷೇತ್ರದಿಂದ ಕನ್ಹಯ್ಯ ಕುಮಾರ್ಗೆ ಗೆಲುವು ಸಿಗೋದು ಅಷ್ಟು ಸುಲಭ ಇಲ್ಲ. ಸದ್ಯ ಈ ಕ್ಷೇತ್ರವು ಬಿಜೆಪಿ ಭದ್ರ ಕೋಟೆಯಾಗಿದೆ. 2014, 2019ರ ಲೋಕಸಭೆ ಚುನಾವಣೆಗಳಲ್ಲಿ ಮನೋಜ್ ತಿವಾರಿ ಗೆದ್ದು, ಎರಡು ಬಾರಿ ಸಂಸದರಾಗಿದ್ದಾರೆ. 2014ರ ಚುನಾವಣೆಯಲ್ಲಿ ಶೀಲಾ ದೀಕ್ಷಿತ್ ಅವರನ್ನು ಸೋಲಿಸಿ ಸಂಸದರಾಗಿದ್ದಾರೆ.
ಇದನ್ನೂ ಓದಿ:ಧೋನಿ ಸಿಕ್ಸ್ ಹೊಡೆಯಲಿ ಅಂತಾ ಕೆಟ್ಟ ಬೌಲಿಂಗ್ -ಹಾರ್ದಿಕ್ ಪಾಂಡ್ಯ ಸುತ್ತ ಮತ್ತೊಂದು ವಿವಾದ
ಇನ್ನು ಚಾಂದಿನಿ ಚೌಕ್ನಿಂದ ಜೈ ಪ್ರಕಾಶ್ ಅಗರ್ವಾಲ್ರನ್ನು ಕಣಕ್ಕೆ ಇಳಿಸಲಾಗಿದೆ. ಇಲ್ಲಿ ಆಲ್ ಇಂಡಿಯಾ ಸೆಕ್ರೆಟರಿ ಪ್ರವೀಣ್ ಕುಮಾರ್ ಬಿಜೆಪಿ ಟೆಕೆಟ್ ಪಡೆದು ಸ್ಪರ್ಧ ಮಾಡುತ್ತಿದ್ದಾರೆ. ಮಾಜಿ ಕೇಂದ್ರ ಸಚಿವ ಹರ್ಷ ವರ್ಧನ್ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು, ಈ ಬಾರಿ ಅವರಿಗೆ ಟಿಕೆಟ್ ನೀಡಿಲ್ಲ. ವಾಯುವ್ಯ ದೆಹಲಿ ಲೋಕಸಭಾ ಕ್ಷೇತ್ರದಿಂದ ಉದಿತ್ ರಾಜ್ಗೆ ಟಿಕೆಟ್ ನೀಡಿದೆ. ಅದೇ ರೀತಿ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಅವರಿಗೂ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಜಲಂಧರ್ನಿಂದ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನಿಂದ ಹೊಸ ಅಭ್ಯರ್ಥಿಗಳ ಪ್ರಕಟ
2019ರ ಲೋಕಸಭೆ ಚುನಾವಣೆಯಲ್ಲಿ ಬೆಗುಸರೈ ಕ್ಷೇತ್ರದಿಂದ ಕನ್ಹಯ್ಯ ಸ್ಪರ್ಧೆ
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಕಣಕ್ಕೆ ಇಳಿದಿದ್ದ ಕನ್ಹಯ್ಯ
ಕಾಂಗ್ರೆಸ್ ನಿನ್ನೆ ಲೋಕಸಭೆ ಚುನಾವಣೆಗೆ ಹೊಸ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ವಿಶೇಷ ಅಂದರೆ ಕನ್ಹಯ್ಯ ಕುಮಾರ್ ಹಾಗೂ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿಗೆ ಟಿಕೆಟ್ ಘೋಷಣೆ ಮಾಡಿದೆ.
37 ವರ್ಷದ ಕನ್ಹಯ್ಯ ಕುಮರ್ಗೆ ನಾರ್ತ್ ಈಸ್ಟ್ ದೆಹಲಿ ಕ್ಷೇತ್ರದ ಟಿಕೆಟ್ ನೀಡಿದೆ. ಜೆಎನ್ಯು ವಿವಿಯ ಸ್ಟೂಡೆಂಟ್ ಯೂನಿಯನ್ನ ಮಾಜಿ ಅಧ್ಯಕ್ಷರಾಗಿದ್ದ ಕನ್ಹಯ್ಯಗೆ, ಎದುರಾಳಿಯಾಗಿ ಬಿಜೆಪಿಯಿಂದ ಸಂಸದ ಮನೋತ್ ತಿವಾರಿ ನಿಂತಿದ್ದಾರೆ. ಮೇ 25 ರಂದು ದೆಹಲಿಯಲ್ಲಿ ಮತದಾನ ನಡೆಯಲಿದೆ.
2019ರ ಲೋಕಸಭೆ ಚುನಾವಣೆ ವೇಳೆ ಕನ್ಹಯ್ಯ ಕುಮಾರ್ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಬಿಹಾರದ ಬೆಗುಸರೈ ಲೋಕಸಭೆ ಕ್ಷೇತ್ರದಿಂದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ನಿಂತು ಸೋಲನ್ನು ಅನುಭವಿಸಿದ್ದರು. ನಂತರದ ದಿನಗಳಲ್ಲಿ ಅಂದರೆ 2021ರಲ್ಲಿ ಕನ್ಹಯ್ಯ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದರು.
ಈಶಾನ್ಯ ದೆಹಲಿ ಕ್ಷೇತ್ರದಿಂದ ಕನ್ಹಯ್ಯ ಕುಮಾರ್ಗೆ ಗೆಲುವು ಸಿಗೋದು ಅಷ್ಟು ಸುಲಭ ಇಲ್ಲ. ಸದ್ಯ ಈ ಕ್ಷೇತ್ರವು ಬಿಜೆಪಿ ಭದ್ರ ಕೋಟೆಯಾಗಿದೆ. 2014, 2019ರ ಲೋಕಸಭೆ ಚುನಾವಣೆಗಳಲ್ಲಿ ಮನೋಜ್ ತಿವಾರಿ ಗೆದ್ದು, ಎರಡು ಬಾರಿ ಸಂಸದರಾಗಿದ್ದಾರೆ. 2014ರ ಚುನಾವಣೆಯಲ್ಲಿ ಶೀಲಾ ದೀಕ್ಷಿತ್ ಅವರನ್ನು ಸೋಲಿಸಿ ಸಂಸದರಾಗಿದ್ದಾರೆ.
ಇದನ್ನೂ ಓದಿ:ಧೋನಿ ಸಿಕ್ಸ್ ಹೊಡೆಯಲಿ ಅಂತಾ ಕೆಟ್ಟ ಬೌಲಿಂಗ್ -ಹಾರ್ದಿಕ್ ಪಾಂಡ್ಯ ಸುತ್ತ ಮತ್ತೊಂದು ವಿವಾದ
ಇನ್ನು ಚಾಂದಿನಿ ಚೌಕ್ನಿಂದ ಜೈ ಪ್ರಕಾಶ್ ಅಗರ್ವಾಲ್ರನ್ನು ಕಣಕ್ಕೆ ಇಳಿಸಲಾಗಿದೆ. ಇಲ್ಲಿ ಆಲ್ ಇಂಡಿಯಾ ಸೆಕ್ರೆಟರಿ ಪ್ರವೀಣ್ ಕುಮಾರ್ ಬಿಜೆಪಿ ಟೆಕೆಟ್ ಪಡೆದು ಸ್ಪರ್ಧ ಮಾಡುತ್ತಿದ್ದಾರೆ. ಮಾಜಿ ಕೇಂದ್ರ ಸಚಿವ ಹರ್ಷ ವರ್ಧನ್ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು, ಈ ಬಾರಿ ಅವರಿಗೆ ಟಿಕೆಟ್ ನೀಡಿಲ್ಲ. ವಾಯುವ್ಯ ದೆಹಲಿ ಲೋಕಸಭಾ ಕ್ಷೇತ್ರದಿಂದ ಉದಿತ್ ರಾಜ್ಗೆ ಟಿಕೆಟ್ ನೀಡಿದೆ. ಅದೇ ರೀತಿ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಅವರಿಗೂ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಜಲಂಧರ್ನಿಂದ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ