ತೆಲಂಗಾಣ ಗೆಲ್ಲಲು ಕಾಂಗ್ರೆಸ್ನಿಂದ ಮಾಸ್ಟರ್ ಪ್ಲಾನ್
ವೈ.ಎಸ್ ಶರ್ಮಿಳಾಗೆ ಗಾಳ ಹಾಕಿದ ಕಾಂಗ್ರೆಸ್ ಪಾರ್ಟಿ
ಸಿಎಂ ಜಗನ್ಗೂ ಸೆಡ್ಡು ಹೊಡೆಯುತ್ತಾರಾ ಶರ್ಮಿಳಾ?
ಹೈದರಾಬಾದ್: ಮುಂದಿನ ಮೂರು ತಿಂಗಳಲ್ಲಿ ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಡಿಸೆಂಬರ್ ತಿಂಗಳಲ್ಲಿ ನಡೆಯಲಿರೋ ಈ ಚುನಾವಣೆ ಗೆಲ್ಲಲು ಸಿಎಂ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ, ವೈ.ಎಸ್ ಶರ್ಮಿಳಾ ನೇತೃತ್ವದ ವೈಎಸ್ಆರ್ ತೆಲಂಗಾಣ ಪಕ್ಷ ಸೇರಿದಂತೆ ಕಾಂಗ್ರೆಸ್ ಕೂ ಭಾರೀ ತಯಾರಿ ನಡೆಸಿಕೊಂಡಿದೆ. ಇನ್ನೊಂದೆಡೆ ಜನಸೇನಾ, ಟಿಡಿಪಿ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿವೆ. ಹೀಗಿರುವಾಗ ಸಿಎಂ ಕೆಸಿಆರ್ಗೆ ಸೆಡ್ಡು ಹೊಡೆಯಲು, ವೈ.ಎಸ್ ಶರ್ಮಿಳಾ ಮತ್ತು ಕಾಂಗ್ರೆಸ್ಸಿಗರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಹೌದು, ಕಾಂಗ್ರೆಸ್ನೊಂದಿಗೆ ವೈ.ಎಸ್ ಶರ್ಮಿಳಾ ನೇತೃತ್ವದ ವೈಎಸ್ಆರ್ ತೆಲಂಗಾಣ ಪಕ್ಷ ವಿಲೀನ ಆಗಲಿದೆ ಎಂದು ತಿಳಿದು ಬಂದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಜತೆ ಮಾತುಕತೆ ನಡೆಸಿರುವ ವೈ.ಎಸ್ ಶರ್ಮಿಳಾ ಈ ಬಗ್ಗೆ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಹೀಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಜತೆ ತನ್ನ ಪಕ್ಷವನ್ನು ವಿಲೀನ ಮಾಡಲಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿ ಬಂದಿವೆ.
ಇತ್ತೀಚೆಗೆ ಹೈದರಾಬಾದ್ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ಕಾಂಗ್ರೆಸ್ ನಾಯಕ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ಶರ್ಮಿಳಾ ಅವರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಗೆ ಬರುವಂತೆ ಆಹ್ವಾನ ನೀಡಿದ್ದರು. ಇದಾದ ಬಳಿಕ ಈ ರಾಜಕೀಯ ಬೆಳವಣಿಗೆ ಆಗಿದೆ.
ಶರ್ಮಿಳಾ ಮುಂದಿನ ನಡೆಯೇನು..?
ಅಣ್ಣ ವೈ.ಎಸ್ ಜಗನ್ ಮೋಹನ್ ರೆಡ್ಡಿ ಆಂಧ್ರ ಪ್ರದೇಶದಲ್ಲಿ ರಾಜಕೀಯ ಮಾಡಿದ್ರೆ, ತಂಗಿ ವೈ.ಎಸ್ ಶರ್ಮಿಳಾ ತೆಲಂಗಾಣದಲ್ಲಿ ರಾಜಕೀಯ ಮಾಡಲಿದ್ದಾರೆ. ಶರ್ಮಿಳಾ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪರ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ತೆಲಂಗಾಣ ಗೆಲ್ಲಲು ಕಾಂಗ್ರೆಸ್ನಿಂದ ಮಾಸ್ಟರ್ ಪ್ಲಾನ್
ವೈ.ಎಸ್ ಶರ್ಮಿಳಾಗೆ ಗಾಳ ಹಾಕಿದ ಕಾಂಗ್ರೆಸ್ ಪಾರ್ಟಿ
ಸಿಎಂ ಜಗನ್ಗೂ ಸೆಡ್ಡು ಹೊಡೆಯುತ್ತಾರಾ ಶರ್ಮಿಳಾ?
ಹೈದರಾಬಾದ್: ಮುಂದಿನ ಮೂರು ತಿಂಗಳಲ್ಲಿ ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಡಿಸೆಂಬರ್ ತಿಂಗಳಲ್ಲಿ ನಡೆಯಲಿರೋ ಈ ಚುನಾವಣೆ ಗೆಲ್ಲಲು ಸಿಎಂ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ, ವೈ.ಎಸ್ ಶರ್ಮಿಳಾ ನೇತೃತ್ವದ ವೈಎಸ್ಆರ್ ತೆಲಂಗಾಣ ಪಕ್ಷ ಸೇರಿದಂತೆ ಕಾಂಗ್ರೆಸ್ ಕೂ ಭಾರೀ ತಯಾರಿ ನಡೆಸಿಕೊಂಡಿದೆ. ಇನ್ನೊಂದೆಡೆ ಜನಸೇನಾ, ಟಿಡಿಪಿ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿವೆ. ಹೀಗಿರುವಾಗ ಸಿಎಂ ಕೆಸಿಆರ್ಗೆ ಸೆಡ್ಡು ಹೊಡೆಯಲು, ವೈ.ಎಸ್ ಶರ್ಮಿಳಾ ಮತ್ತು ಕಾಂಗ್ರೆಸ್ಸಿಗರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಹೌದು, ಕಾಂಗ್ರೆಸ್ನೊಂದಿಗೆ ವೈ.ಎಸ್ ಶರ್ಮಿಳಾ ನೇತೃತ್ವದ ವೈಎಸ್ಆರ್ ತೆಲಂಗಾಣ ಪಕ್ಷ ವಿಲೀನ ಆಗಲಿದೆ ಎಂದು ತಿಳಿದು ಬಂದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಜತೆ ಮಾತುಕತೆ ನಡೆಸಿರುವ ವೈ.ಎಸ್ ಶರ್ಮಿಳಾ ಈ ಬಗ್ಗೆ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಹೀಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಜತೆ ತನ್ನ ಪಕ್ಷವನ್ನು ವಿಲೀನ ಮಾಡಲಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿ ಬಂದಿವೆ.
ಇತ್ತೀಚೆಗೆ ಹೈದರಾಬಾದ್ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ಕಾಂಗ್ರೆಸ್ ನಾಯಕ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ಶರ್ಮಿಳಾ ಅವರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಗೆ ಬರುವಂತೆ ಆಹ್ವಾನ ನೀಡಿದ್ದರು. ಇದಾದ ಬಳಿಕ ಈ ರಾಜಕೀಯ ಬೆಳವಣಿಗೆ ಆಗಿದೆ.
ಶರ್ಮಿಳಾ ಮುಂದಿನ ನಡೆಯೇನು..?
ಅಣ್ಣ ವೈ.ಎಸ್ ಜಗನ್ ಮೋಹನ್ ರೆಡ್ಡಿ ಆಂಧ್ರ ಪ್ರದೇಶದಲ್ಲಿ ರಾಜಕೀಯ ಮಾಡಿದ್ರೆ, ತಂಗಿ ವೈ.ಎಸ್ ಶರ್ಮಿಳಾ ತೆಲಂಗಾಣದಲ್ಲಿ ರಾಜಕೀಯ ಮಾಡಲಿದ್ದಾರೆ. ಶರ್ಮಿಳಾ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪರ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ