ಕಾಂಗ್ರೆಸ್ನಿಂದ ನಿನ್ನೆ ತೆಲಂಗಾಣದಲ್ಲಿ ಬೃಹತ್ ಸಮಾವೇಶ
ತೆಲಂಗಾಣ ಕಾಂಗ್ರೆಸ್ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡ
ಬಿಜೆಪಿ ನಾಯಕರಿಂದ ಖಂಡನೆ, ಕ್ಷಮೆ ಕೇಳಲು ಆಗ್ರಹ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ‘ಭಾರತ ಮಾತೆ’ಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ.
ಆಗಿದ್ದೇನು..?
ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸಿತ್ತು. ಈ ವೇಳೆ ಕರ್ನಾಟಕ ಚುನಾವಣೆಯಲ್ಲಿ ಗ್ಯಾರಂಟಿ ಅಸ್ತ್ರಗಳನ್ನು ಪ್ರಯೋಗಿಸಿದಂತೆ, ಪ್ರಮುಖ 6 ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಪ್ರಮುಖರು ಭಾಗಿಯಾಗಿದ್ದರು.
ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್ ನಾಯಕರು ತಮ್ಮ ಫೋಟೋಗಳ ಜೊತೆಗೆ ರಾಷ್ಟ್ರೀಯ ನಾಯಕರ ಕಟೌಟ್ ಮತ್ತು ಬ್ಯಾನರ್ಗಳನ್ನು ಹಾಕಿದ್ದರು. ಅದರ ಒಂದು ಕಟೌಟ್ನಲ್ಲಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿದ್ದಾರೆ. ರಾಷ್ಟ್ರಧ್ವಜ ಬಣ್ಣದ ಸೀರೆಯನ್ನು ಸೋನಿಯಾ ಗಾಂಧಿಗೆ ತೊಡಿಸಿ, ಆಭರಣಗಳನ್ನು ಹಾಕಿ ಭಾರತ ಮಾತೆಯ ರೀತಿಯಲ್ಲಿ ಕಟೌಟ್ ನಿಲ್ಲಿಸಲಾಗಿದೆ.
ಈ ಕಟೌಟ್ ದೇಶಭಕ್ತರನ್ನು, ಬಿಜೆಪಿಗರ ಕಣ್ಣು ಕೆಂಪಾಗುವಂತೆ ಮಾಡಿದೆ. ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ, ಜಾಮೀನಿನ ಮೇಲೆ ಹೊರಗಿರುವ ಸೋನಿಯಾ ಗಾಂಧಿಯನ್ನು ಹೋಲಿಸಿ ಭಾರತ ಮಾತೆಗೆ ಕಾಂಗ್ರೆಸ್ ಅವಮಾನಿಸಿದೆ. ಸೋನಿಯಾ ಕಾಂಗ್ರೆಸ್ನ ಹಗರಣಗಳ ಆರೋಪಿ ಮತ್ತು ಪಕ್ಷದ ರಾಜಮಾತೆ ಆಗಿರಬಹುದು. ಆದರೆ ಅವರು ಎಂದಿಗೂ ಸ್ಪಿರಿಟ್ ಆಫ್ ಭಾರತವನ್ನು ಪ್ರತಿನಿಧಿಸುವುದಿಲ್ಲ. ದೇಶದ ಕಲ್ಪನೆಗೆ ಸೋನಿಯಾಗಿಂತ ಹೆಚ್ಚಿನ ಹಾನಿಯನ್ನು ಯಾರೂ ಮಾಡಿಲ್ಲ. ಈ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಇಡೀ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
Congress yet again humiliates Bharat Mata by comparing with ‘out-on-bail’ Smt. Sonia Gandhi.
The Scam-Accused Queen of Congress could be Congress's Raja Mata, but will never represent the spirit of Bharat.
No one has inflicted more harm to the Idea of India than Sonia Gandhi.… pic.twitter.com/LCvDnaPJPv
— BJP Karnataka (@BJP4Karnataka) September 18, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾಂಗ್ರೆಸ್ನಿಂದ ನಿನ್ನೆ ತೆಲಂಗಾಣದಲ್ಲಿ ಬೃಹತ್ ಸಮಾವೇಶ
ತೆಲಂಗಾಣ ಕಾಂಗ್ರೆಸ್ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡ
ಬಿಜೆಪಿ ನಾಯಕರಿಂದ ಖಂಡನೆ, ಕ್ಷಮೆ ಕೇಳಲು ಆಗ್ರಹ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ‘ಭಾರತ ಮಾತೆ’ಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ.
ಆಗಿದ್ದೇನು..?
ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸಿತ್ತು. ಈ ವೇಳೆ ಕರ್ನಾಟಕ ಚುನಾವಣೆಯಲ್ಲಿ ಗ್ಯಾರಂಟಿ ಅಸ್ತ್ರಗಳನ್ನು ಪ್ರಯೋಗಿಸಿದಂತೆ, ಪ್ರಮುಖ 6 ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಪ್ರಮುಖರು ಭಾಗಿಯಾಗಿದ್ದರು.
ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್ ನಾಯಕರು ತಮ್ಮ ಫೋಟೋಗಳ ಜೊತೆಗೆ ರಾಷ್ಟ್ರೀಯ ನಾಯಕರ ಕಟೌಟ್ ಮತ್ತು ಬ್ಯಾನರ್ಗಳನ್ನು ಹಾಕಿದ್ದರು. ಅದರ ಒಂದು ಕಟೌಟ್ನಲ್ಲಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿದ್ದಾರೆ. ರಾಷ್ಟ್ರಧ್ವಜ ಬಣ್ಣದ ಸೀರೆಯನ್ನು ಸೋನಿಯಾ ಗಾಂಧಿಗೆ ತೊಡಿಸಿ, ಆಭರಣಗಳನ್ನು ಹಾಕಿ ಭಾರತ ಮಾತೆಯ ರೀತಿಯಲ್ಲಿ ಕಟೌಟ್ ನಿಲ್ಲಿಸಲಾಗಿದೆ.
ಈ ಕಟೌಟ್ ದೇಶಭಕ್ತರನ್ನು, ಬಿಜೆಪಿಗರ ಕಣ್ಣು ಕೆಂಪಾಗುವಂತೆ ಮಾಡಿದೆ. ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ, ಜಾಮೀನಿನ ಮೇಲೆ ಹೊರಗಿರುವ ಸೋನಿಯಾ ಗಾಂಧಿಯನ್ನು ಹೋಲಿಸಿ ಭಾರತ ಮಾತೆಗೆ ಕಾಂಗ್ರೆಸ್ ಅವಮಾನಿಸಿದೆ. ಸೋನಿಯಾ ಕಾಂಗ್ರೆಸ್ನ ಹಗರಣಗಳ ಆರೋಪಿ ಮತ್ತು ಪಕ್ಷದ ರಾಜಮಾತೆ ಆಗಿರಬಹುದು. ಆದರೆ ಅವರು ಎಂದಿಗೂ ಸ್ಪಿರಿಟ್ ಆಫ್ ಭಾರತವನ್ನು ಪ್ರತಿನಿಧಿಸುವುದಿಲ್ಲ. ದೇಶದ ಕಲ್ಪನೆಗೆ ಸೋನಿಯಾಗಿಂತ ಹೆಚ್ಚಿನ ಹಾನಿಯನ್ನು ಯಾರೂ ಮಾಡಿಲ್ಲ. ಈ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಇಡೀ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
Congress yet again humiliates Bharat Mata by comparing with ‘out-on-bail’ Smt. Sonia Gandhi.
The Scam-Accused Queen of Congress could be Congress's Raja Mata, but will never represent the spirit of Bharat.
No one has inflicted more harm to the Idea of India than Sonia Gandhi.… pic.twitter.com/LCvDnaPJPv
— BJP Karnataka (@BJP4Karnataka) September 18, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ