/newsfirstlive-kannada/media/post_attachments/wp-content/uploads/2024/08/cooker.jpg)
ಬೆಳಗಾವಿ: ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರೋ ಘಟನೆ ಸವದತ್ತಿಯ ಹೋಟೆಲ್​​​​ ರೂಮ್​ನಲ್ಲಿ ನಡೆದಿದೆ.
/newsfirstlive-kannada/media/post_attachments/wp-content/uploads/2024/08/cooker3.jpg)
ಕುಟುಂಬ ಸಮೇತರಾಗಿ ಸವದತ್ತಿ ಯಲ್ಲಮ್ಮದೇವಿ ದರ್ಶನಕ್ಕೆ ಬಂದಿದ್ದರು. ಅವರಲ್ಲಿ ಬೆಂಗಳೂರಿನಿಂದ 5 ಜನ, ಯಾದಗಿರಿ ಜಿಲ್ಲೆಯಿಂದ 3 ಭಕ್ತರು ಬಂದಿದ್ದರು. ಹೀಗಾಗಿ ಹೋಳಿಗೆ ಮಾಡಲು ಕುಕ್ಕರ್​ನಲ್ಲಿ ಬೇಳೆ ಬೇಯಿಸಲು ಗ್ಯಾಸ್ ಹೊತ್ತಿಸಿದ್ದರು. ಈ ವೇಳೆ ಕುಕ್ಕರ್ ಎರಡು ಸೀಟಿ ಹೊಡೆದ ಬಳಿಕ ಸ್ಫೋಟಗೊಂಡಿದೆ. ಆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ:ನೈಟ್ ಡ್ಯೂಟಿ ವೈದ್ಯೆಗೆ ರೇಪ್ ಆದ್ರೆ ಇನ್ನೆಲ್ಲಿ ರಕ್ಷಣೆ; ಸಿಡಿದೆದ್ದ ಆಶಿಕಾ ರಂಗನಾಥ್; ಹೇಳಿದ್ದೇನು?
/newsfirstlive-kannada/media/post_attachments/wp-content/uploads/2024/08/cooker1.jpg)
ಪರಿಣಾಮ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರನ್ನು ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us