/newsfirstlive-kannada/media/post_attachments/wp-content/uploads/2025/03/shivamogga.jpg)
ಶಿವಮೊಗ್ಗ: ಪರಿಹಾರ ನೀಡದ ಕೆಎಸ್ಆರ್ಟಿಸಿ ಬಸ್ ಅನ್ನು ಜಪ್ತಿ ಮಾಡುವಂತೆ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಕೋರ್ಟ್ನಿಂದ ಈ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಹಾವಿನಿಂದ ಮನೆ ಮಾಲೀಕರ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ.. ಹಾಸನದಲ್ಲಿ ಮನಮಿಡಿಯುವ ದೃಶ್ಯ ಸೆರೆ!
ಏನಿದು ಪ್ರಕರಣ?
2022 ಜುಲೈ 7ರಂದು ಬೆಳಗಿನ ಜಾವ 5.30ರ ವೇಳೆಗೆ ಪತ್ರಿಕೆ ಹಂಚಲು ಯುವಕ ಗಣೇಶ್ ಎಂಬಾತ ಸೈಕಲ್ನಲ್ಲಿ ಹೊಗುತ್ತಿದ್ದ. ಆಗ ಇದೇ ವೇಳೆ ಪ್ರವಾಸಿ ಮಂದಿರದ ಎದುರು ಕೆಎಸ್ಆರ್ಟಿಸಿ ಬಸ್ ಸೈಕಲ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದ. ಮೃತ ಗಣೇಶನ ಪೋಷಕರು ಅಪಘಾತಕ್ಕೆ ಪರಿಹಾರ ಕೋರಿ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಗಣೇಶ್ ಅವರ ಪೋಷಕರಿಗೆ ಮೂರು ತಿಂಗಳೊಳಗೆ 19 ಲಕ್ಷ ಪರಿಹಾರ ನೀಡುವಂತೆ 2024ರ ಜುಲೈ 8ರಂದು ನ್ಯಾಯಾಲಯ ಆದೇಶಿಸಿತ್ತು.
ಮೂರು ತಿಂಗಳು ಕಳೆದರೂ ಕೆಎಸ್ಆರ್ಟಿಸಿ ಪರಿಹಾರ ನೀಡದ ಕಾರಣ ಗಣೇಶನ ತಾಯಿ ಉಮಾ ಅವರು ನ್ಯಾಯಾಲಯಕ್ಕೆ ಅಮಲ್ಜಾರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ನೋಟಿಸ್ ಜಾರಿಯಾದ ನಂತರವೂ ಕೆಎಸ್ಆರ್ಟಿಸಿ ಹಣ ಪಾವತಿಸಿಲ್ಲ. ಪರಿಹಾರದ ಹಣ ಪಾವತಿಸದ ಕಾರಣ ಶಿರಸಿ ಡಿಪೋಗೆ ಸೇರಿದ ಬಸ್ ಅನ್ನು ಜಪ್ತಿ ಮಾಡುವಂತೆ ಕೋರ್ಟ್ ಆದೇಶಿಸಿದೆ. ಸದ್ಯ ಜಪ್ತಿ ಮಾಡಿರೋ ಕೆಎಸ್ಆರ್ಟಿಸಿ ಬಸ್ ನ್ಯಾಯಾಲಯದ ಆವರಣದಲ್ಲೇ ನಿಲ್ಲಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ