/newsfirstlive-kannada/media/post_attachments/wp-content/uploads/2024/10/CP-Yogeshwar.jpg)
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಉಪಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್​​, ಬಿಜೆಪಿ ಮತ್ತು ಜೆಡಿಎಸ್​​ ಯಾರಿಗೆ ಟಿಕೆಟ್​ ನೀಡಬೇಕು ಎಂದು ಯೋಚನೆಯಲ್ಲಿ ತೊಡಗಿವೆ. ಆಕಾಂಕ್ಷಿಗಳ ಒತ್ತಡದಿಂದ ಇಂಥ ಸನ್ನಿವೇಶವೊಂದು ನಿರ್ಮಾಣವಾಗಿದೆ. ಇದರ ಮಧ್ಯೆ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡಿದೆ.
ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ. ಶಿಗ್ಗಾವಿಯಿಂದ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಪುತ್ರ ಭರತ್​​ ಅವರು ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸಂಡೂರಿನಿಂದ ಜನಾರ್ದನ್​ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್​​ ನೀಡಲಾಗಿದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್​​ ಜೆಡಿಎಸ್​​ಗೆ ಬಿಟ್ಟಿಕೊಟ್ಟಿರುವುದು ಬಿಜೆಪಿಗೆ ಸಮಸ್ಯೆಯಾಗಿದೆ. ಕಾರಣ ಚನ್ನಪಟ್ಟಣದ ಟಿಕೆಟ್​ ಆಕಾಂಕ್ಷಿ ಬಿಜೆಪಿ ಎಂಎಲ್​ಸಿ ಸಿ.ಪಿ ಯೋಗೇಶ್ವರ್​​​ ಅವರು ರಾಜೀನಾಮೆ ನೀಡಿದ್ದಾರೆ. ಮಹತ್ವದ ಬೆಳವಣಿಗೆ ಒಂದರಲ್ಲಿ ಹುಬ್ಬಳ್ಳಿಗೆ ತೆರಳಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಕೊಟ್ಟಿದ್ದಾರೆ.
/newsfirstlive-kannada/media/post_attachments/wp-content/uploads/2024/10/CP-Yogeshwar-Resign-Letter.jpg)
ಕಾಂಗ್ರೆಸ್​ ಸೇರ್ತಾರಾ ಸಿ.ಪಿ ಯೋಗೇಶ್ವರ್?
ಇನ್ನು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ನಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಅತ್ತ ಎನ್ಡಿಎ ಮೈತ್ರಿಕೂಟದಿಂದ ಜೆಡಿಎಸ್​​ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸೋದು ಬಹುತೇಕ ಖಚಿತವಾಗಿದೆ. ಬಿಜೆಪಿ ಟಿಕೆಟ್ಗೆ ಸಿ.ಪಿ ಯೋಗೇಶ್ವರ್ ಪ್ರಯತ್ನಿಸಿದ್ರೂ ಈ ಕ್ಷೇತ್ರದಲ್ಲಿ ಜೆಡಿಎಸ್ಗೇ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಈಗ ರಾಜೀನಾಮೆ ನೀಡಿರೋ ಸಿ.ಪಿ ಯೋಗೇಶ್ವರ್ ಯಾವುದೇ ಕ್ಷಣದಲ್ಲಾದ್ರೂ ಕಾಂಗ್ರೆಸ್​ ಸೇರುವ ಸಾಧ್ಯತೆಗಳಿವೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us