newsfirstkannada.com

ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ; ಡಿಸಿಎಂ ಡಿಕೆ ಶಿವಕುಮಾರ್​ ಕಿಡಿ

Share :

15-06-2023

    ಕೇಂದ್ರದಿಂದ ಅಕ್ಕಿ ಸರಬರಾಜು ನಿಲುಗಡೆ ಬಗ್ಗೆ ಉಪ ಮುಖ್ಯಮಂತ್ರಿ ಕಿಡಿ

    ಛತ್ತಿಸ್ ಗಡ್, ತೆಲಾಂಗಣ ಸೇರಿದಂತೆ ವಿವಿಧ ರಾಜ್ಯದ ಜೊತೆ ಸಿಎಂ ಟಾಕ್​

    ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದ ಡಿಕೆಶಿ

ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ. ಜುಲೈ 1 ರಿಂದ ಅನ್ನ ಭಾಗ್ಯ ಯೋಜನೆಯಡಿ 10 kg ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ ಎಂದು ಉಪ ಮುಖ್ಯಮಂತ್ರಿ  ಡಿಕೆ ಶಿವಕುಮಾರ್​ ಕಿಡಿಕಾರಿದ್ದಾರೆ.

‘ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ’

ಕೇಂದ್ರದಿಂದ ಅಕ್ಕಿ ಸರಬರಾಜು ನಿಲುಗಡೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್​, ಸಿಎಂ ಈಗಾಗಲೇ ಛತ್ತಿಸ್ ಗಡ್, ತೆಲಾಂಗಣ ಸೇರಿದಂತೆ ವಿವಿಧ ರಾಜ್ಯದ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದನ್ನ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.

‘ದೊಡ್ಡ ಹೋರಾಟ ಮಾಡುತ್ತೇವೆ’

ನಂತರ ಮಾತನಾಡಿದ ಅವರು, ಮನೆಗೆ ಕೊಡಬೇಕಾಗುತ್ತೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಿತ್ ಡ್ರಾ ಮಾಡಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ. ರೂಪುರೇಷೆಯ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.

‘ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ’

ಕರ್ನಾಟಕದ ರೈತರಿಂದಲೇ ಅಕ್ಕಿ  ಖರೀದಿ ವಿಚಾರವಾಗಿ ಮಾತನಾಡಿದ ಡಿ ಕೆ ಶಿವಕುಮಾರ್​ನವರು. ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಖರೀದಿ ಮಾಡಬೇಕು. ಯಾರ ಬಳಿಯೂ‌ ಬೆಟ್ಟು ತೋರಿಸುಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಡಿಕೆಶೀ ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ; ಡಿಸಿಎಂ ಡಿಕೆ ಶಿವಕುಮಾರ್​ ಕಿಡಿ

https://newsfirstlive.com/wp-content/uploads/2023/06/DK-Shivakumar.jpg

    ಕೇಂದ್ರದಿಂದ ಅಕ್ಕಿ ಸರಬರಾಜು ನಿಲುಗಡೆ ಬಗ್ಗೆ ಉಪ ಮುಖ್ಯಮಂತ್ರಿ ಕಿಡಿ

    ಛತ್ತಿಸ್ ಗಡ್, ತೆಲಾಂಗಣ ಸೇರಿದಂತೆ ವಿವಿಧ ರಾಜ್ಯದ ಜೊತೆ ಸಿಎಂ ಟಾಕ್​

    ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದ ಡಿಕೆಶಿ

ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟೆ ಕೇಳಿಲ್ಲ. ಜುಲೈ 1 ರಿಂದ ಅನ್ನ ಭಾಗ್ಯ ಯೋಜನೆಯಡಿ 10 kg ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ ಎಂದು ಉಪ ಮುಖ್ಯಮಂತ್ರಿ  ಡಿಕೆ ಶಿವಕುಮಾರ್​ ಕಿಡಿಕಾರಿದ್ದಾರೆ.

‘ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ’

ಕೇಂದ್ರದಿಂದ ಅಕ್ಕಿ ಸರಬರಾಜು ನಿಲುಗಡೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್​, ಸಿಎಂ ಈಗಾಗಲೇ ಛತ್ತಿಸ್ ಗಡ್, ತೆಲಾಂಗಣ ಸೇರಿದಂತೆ ವಿವಿಧ ರಾಜ್ಯದ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದನ್ನ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.

‘ದೊಡ್ಡ ಹೋರಾಟ ಮಾಡುತ್ತೇವೆ’

ನಂತರ ಮಾತನಾಡಿದ ಅವರು, ಮನೆಗೆ ಕೊಡಬೇಕಾಗುತ್ತೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಿತ್ ಡ್ರಾ ಮಾಡಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ. ರೂಪುರೇಷೆಯ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.

‘ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ’

ಕರ್ನಾಟಕದ ರೈತರಿಂದಲೇ ಅಕ್ಕಿ  ಖರೀದಿ ವಿಚಾರವಾಗಿ ಮಾತನಾಡಿದ ಡಿ ಕೆ ಶಿವಕುಮಾರ್​ನವರು. ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಖರೀದಿ ಮಾಡಬೇಕು. ಯಾರ ಬಳಿಯೂ‌ ಬೆಟ್ಟು ತೋರಿಸುಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಡಿಕೆಶೀ ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More