/newsfirstlive-kannada/media/post_attachments/wp-content/uploads/2024/06/darshan22.jpg)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್​​ನ ಕೆಲವು ​ಆರೋಪಿಗಳ ಮೇಲೆ ಹಲವು ಪ್ರಕರಣಗಳು ದಾಖಲಾಗಿವೆಯಂತೆ. 15ನೇ ಆರೋಪಿ ಕಾರ್ತಿಕ್ ಅಲಿಯಾಸ್ ಕಪ್ಪೆ ವಿರುದ್ಧ ಹಲ್ಲೆ ದಾಖಲಾಗಿರೋದು ತನಿಖೆಯಿಂದ ಗೊತ್ತಾಗಿದೆ.
ನಾಲ್ವರು ಸಹಚರರ ಜೊತೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪವನ್ನು ಕಪ್ಪೆ ಎದುರಿಸುತ್ತಿದ್ದಾನೆ. ತಲಘಟ್ಟಪುರ ಠಾಣಾ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ಕಳೆದ ವರ್ಷ ಯುವಕನ ಮೇಲೆ ಕಬ್ಬಿಣದ ರಾಡ್​​ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬೇಲ್ ಮೇಲೆ ಹೊರ ಬಂದು ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಇನ್ನೊಂದು ವಿಚಾರ ಅಂದ್ರೆ ರೇಣುಕಾಸ್ವಾಮಿ ಭೀಕರ ಹತ್ಯೆ ಬಳಿಕ ಎರಡೆರಡು ಎಣ್ಣೆ ಪಾರ್ಟಿ ಮಾಡಿದ್ದರು. ಜೂನ್ 8ರ ರಾತ್ರಿ ಡಿಬಾಸ್ ಗ್ಯಾಂಗ್ ಎರಡು ತಂಡಗಳಾಗಿ ಬೇರೆಬೇರೆ ಕಡೆ ಪಾರ್ಟಿ ಮಾಡಿದೆ. ದರ್ಶನ್, ವಿನಯ್, ದೀಪಕ್, ಪ್ರದೋಶ್ ನಾಗರಾಜ್, ಟೀಮ್​ನಿಂದ ಆರ್​ಆರ್ ನಗರದ ಸ್ಟೋನಿ ಬ್ರೂಕ್​ನಲ್ಲಿ ಎಣ್ಣೆ ಪಾರ್ಟಿ ಮಾಡಲಾಗಿದೆ. ಶವ ಬೀಸಾಡಿದ ನಂತರ ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವ್, ನಿಖಿಲ್ ನಾಯಕ್​ರಿಂದಲೂ ಆರ್​ಆರ್ನಗರದ ಟ್ರೋಬೋ 98 ಸ್ಟ್ರೀಟ್ ರೆಸ್ಟೋರೆಂಟ್​ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ದೀಪಕ್ ನೀಡಿದ ಹಣದಲ್ಲಿ ಹೋಟಲ್​ನಲ್ಲಿ ರೂಮ್ ಬುಕ್ ಮಾಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ