/newsfirstlive-kannada/media/post_attachments/wp-content/uploads/2024/06/darshan-3.jpg)
ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅರೆಸ್ಟ್​ ಆಗಿದ್ದಾರೆ. ಯುವಕನೋರ್ವನನ್ನು ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪ ಅವರ ಮೇಲೆ ಕೇಳಿಬಂದಿದೆ. ಕೇವಲ್ ರಾಮ್ ದೋರ್ ಜಿ ಎಂಬವರು ನೀಡಿರುವ ದೂರಿನ ಅನ್ವಯ ಎಫ್ಐಆರ್ ದಾಖಲಾಗಿದೆ. ಈ ಕಾರಣಕ್ಕೆ ಸ್ಯಾಂಡಲ್​ವುಡ್​ ನಟನನ್ನು ಬಂಧಿಸಲಾಗಿದೆ.
ಸತ್ವ ಅನುಗ್ರಹ ಅಪಾರ್ಟ್ ಮೆಂಟ್ ನ ಮುಂಭಾಗದಲ್ಲಿರುವ ಮೋರಿಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾಗಿದೆ. ಅಪರಿಚಿತ ಶವ ಪತ್ತೆ ಸಂಬಂಧ ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು.
/newsfirstlive-kannada/media/post_attachments/wp-content/uploads/2024/06/darshan-2.jpg)
ಇದನ್ನೂ ಓದಿ: ಯುವಕನ ಮರ್ಮಾಂಗಕ್ಕೆ ಒದ್ದ ನಟ ದರ್ಶನ್.. ಬಿದ್ದು ನರಳಾಡಿದರು ಆಸ್ಪತ್ರೆಗೆ ಸೇರಿಸದೇ ನಿರ್ಲಕ್ಷ್ಯ ಆರೋಪ
30 ರಿಂದ 35 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ ಎಂದು ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದರು. ಮೃತ ವ್ಯಕ್ತಿಯ ಕಿವಿಗೆ ಹಾಗೂ ತಲೆಗೆ ಗಂಭೀರ ಗಾಯ ಆಗಿತ್ತು. ಪೊಲೀಸರು ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಡೆಸಿ ವೈದ್ಯರ ವರದಿ ಪಡೆದಿದ್ದರು. ಮುಖ, ತಲೆ ಹಾಗೂ ಕಿವಿಗೆ ತೀವ್ರವಾದ ಹಲ್ಲೆಯಾಗಿರೋದು ತಿಳಿದುಬಂದಿತ್ತು.
ಘಟನೆ ಸಂಬಂಧ ಪೊಲೀಸರು ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲನೆ ಮಾಡಿದ್ದಾರೆ. ರಾತ್ರಿ 8 ಘಂಟೆ ಸುಮಾರಿಗೆ ಅಪರಿಚಿತ ಶವ ಪತ್ತೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us