ಅಭಿಮಾನಿಯನ್ನೇ ಕೊಲೆ ಮಾಡಿದ್ರಾ ನಟ?
ಆಕೆಯ ಮಾತಿಗೆ ಕೊಲೆಯಾದ ಅಪಟ್ಟ ಅಭಿಮಾನಿ?
ದರ್ಶನ್ ಏಟಿಗೆ ಆಸ್ಪತ್ರೆ ಸೇರಿದ್ದರಾ ನಟಿ ಪವಿತ್ರಾ ಗೌಡ?
ನಟ ದರ್ಶನ್ ಮೇಲೆ ಹಲ್ಲೆ ಮತ್ತು ಕೊಲೆ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಮೂಲದ ಅಭಿಮಾನಿ ರೇಣುಕಾಸ್ವಾಮಿ ಎಂಬಾತನನ್ನು ಕೊಲೆಗೈದ ಆರೋಪದ ಮೇಲೆ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಜೊತೆಗೆ ನಟಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಶ್ಲೀಲ ಮೆಸೇಜ್ ಮಾಡಿದ್ದನೇ?
ಕೊಲೆಯಾದ ರೇಣುಕಾಸ್ವಾಮಿ ಚಿತ್ರದುರ್ಗ ಮೂಲದವನಾಗಿದ್ದು, ನಟ ದರ್ಶನ್ನ ಪಕ್ಕಾ ಅಭಿಮಾನಿಯಾಗಿದ್ದನು ಎಂದು ಹೇಳಲಾಗುತ್ತಿದೆ. ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ನಡುವೆ ಪವಿತ್ರಾ ಗೌಡ ಬಂದ ಸಂಬಂಧ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದನಂತೆ. ಈ ವಿಚಾರವನ್ನು ಪವಿತ್ರಾ ಗೌಡ ದರ್ಶನ್ ಬಳಿ ಹೇಳಿಕೊಂಡಿದ್ದು, ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆಸಿಕೊಳ್ಳಲಾಗಿದೆ.
ಇದನ್ನೂ ಓದಿ: ಒಂದೆರಡಲ್ಲ.. ನಟ ದರ್ಶನ್ ಮೇಲಿದೆ ಸಾಲು ಸಾಲು ಆರೋಪ! ಇಲ್ಲಿದೆ ಲಿಸ್ಟ್
ಅಭಿಮಾನಿಯನ್ನು ಕರೆಸಿ ಕೊಲೆ?
ಅಭಿಮಾನಿಯನ್ನು ಕರೆಸಿಕೊಂಡ ಬಳಿಕ ಆತನಿಗೆ ದರ್ಶನ್ ಮತ್ತು ಆತನ ಸ್ನೇಹಿತರು ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಮಾನುಷವಾಗಿ ಥಳಿಸಿದ್ದಾರೆ. ಥಳಿಸಿದ ಏಟಿಗೆ ಯುವಕ ಸಾವನ್ನಪ್ಪಿದ್ದಾನೆ. ನಂತರ ಮೃತದೇಹವನ್ನು ಸುಮನಹಳ್ಳಿ ಮೋರಿ ಬಳಿ ತಂದು ಎಸೆದಿದ್ದಾರೆ.
ಇದನ್ನೂ ಓದಿ: ಪವಿತ್ರಾ ಗೌಡಗೆ ದರ್ಶನ್ಗೂ ಏನು ಸಂಬಂಧ? ರೇಣುಕಾಸ್ವಾಮಿ ಕೊಲೆಯಲ್ಲಿ ನಟಿಯ ಹೇಸರೇಕೆ ಬಂತು?
ನಿನ್ನಿಂದ ಹೀಗಾಯಿತು
ರೇಣುಕಾಸ್ವಾಮಿ ಕೊಲೆಯ ಬಳಿಕ ದರ್ಶನ್ ಸಿಟ್ಟುಗೆದ್ದು ಪವಿತ್ರಾ ಗೌಡಗೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ನಿನ್ನಿಂದ ಹೀಗಾಯಿತು ಎಂದು ಎರಡೇಟು ಬಾರಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಹಲ್ಲೆಗೊಳಗಾದ ನಟಿ ಆರ್ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋಮವಾರದಂದು (ಜೂನ್ 10) ಪವಿತ್ರಾ ಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಮೈಸೂರಲ್ಲಿ ಕೊಲೆ? ಬೆಂಗಳೂರಲ್ಲಿ ಡೆಡ್ಬಾಡಿ? ಚಿತ್ರಹಿಂಸೆ ನೀಡಿ ರೇಣುಕಾಸ್ವಾಮಿ ಕೊಲೆ
ಪೊಲೀಸ್ ವಶದಲ್ಲಿ ಪವಿತ್ರಾ ಗೌಡ
ಇಂದು ರೇಣುಕಾಸ್ವಾಮಿ ಪ್ರಕರಣದ ಸಂಬಂಧ ದರ್ಶನ್ ಅವರನ್ನು ಬಂಧಿಸಲಾಗಿದೆ. ಬಂಧನ ಜೊತೆ ಜೊತೆಗೆ ನಟಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಭಿಮಾನಿಯನ್ನೇ ಕೊಲೆ ಮಾಡಿದ್ರಾ ನಟ?
ಆಕೆಯ ಮಾತಿಗೆ ಕೊಲೆಯಾದ ಅಪಟ್ಟ ಅಭಿಮಾನಿ?
ದರ್ಶನ್ ಏಟಿಗೆ ಆಸ್ಪತ್ರೆ ಸೇರಿದ್ದರಾ ನಟಿ ಪವಿತ್ರಾ ಗೌಡ?
ನಟ ದರ್ಶನ್ ಮೇಲೆ ಹಲ್ಲೆ ಮತ್ತು ಕೊಲೆ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಮೂಲದ ಅಭಿಮಾನಿ ರೇಣುಕಾಸ್ವಾಮಿ ಎಂಬಾತನನ್ನು ಕೊಲೆಗೈದ ಆರೋಪದ ಮೇಲೆ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಜೊತೆಗೆ ನಟಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಶ್ಲೀಲ ಮೆಸೇಜ್ ಮಾಡಿದ್ದನೇ?
ಕೊಲೆಯಾದ ರೇಣುಕಾಸ್ವಾಮಿ ಚಿತ್ರದುರ್ಗ ಮೂಲದವನಾಗಿದ್ದು, ನಟ ದರ್ಶನ್ನ ಪಕ್ಕಾ ಅಭಿಮಾನಿಯಾಗಿದ್ದನು ಎಂದು ಹೇಳಲಾಗುತ್ತಿದೆ. ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ನಡುವೆ ಪವಿತ್ರಾ ಗೌಡ ಬಂದ ಸಂಬಂಧ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದನಂತೆ. ಈ ವಿಚಾರವನ್ನು ಪವಿತ್ರಾ ಗೌಡ ದರ್ಶನ್ ಬಳಿ ಹೇಳಿಕೊಂಡಿದ್ದು, ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆಸಿಕೊಳ್ಳಲಾಗಿದೆ.
ಇದನ್ನೂ ಓದಿ: ಒಂದೆರಡಲ್ಲ.. ನಟ ದರ್ಶನ್ ಮೇಲಿದೆ ಸಾಲು ಸಾಲು ಆರೋಪ! ಇಲ್ಲಿದೆ ಲಿಸ್ಟ್
ಅಭಿಮಾನಿಯನ್ನು ಕರೆಸಿ ಕೊಲೆ?
ಅಭಿಮಾನಿಯನ್ನು ಕರೆಸಿಕೊಂಡ ಬಳಿಕ ಆತನಿಗೆ ದರ್ಶನ್ ಮತ್ತು ಆತನ ಸ್ನೇಹಿತರು ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಮಾನುಷವಾಗಿ ಥಳಿಸಿದ್ದಾರೆ. ಥಳಿಸಿದ ಏಟಿಗೆ ಯುವಕ ಸಾವನ್ನಪ್ಪಿದ್ದಾನೆ. ನಂತರ ಮೃತದೇಹವನ್ನು ಸುಮನಹಳ್ಳಿ ಮೋರಿ ಬಳಿ ತಂದು ಎಸೆದಿದ್ದಾರೆ.
ಇದನ್ನೂ ಓದಿ: ಪವಿತ್ರಾ ಗೌಡಗೆ ದರ್ಶನ್ಗೂ ಏನು ಸಂಬಂಧ? ರೇಣುಕಾಸ್ವಾಮಿ ಕೊಲೆಯಲ್ಲಿ ನಟಿಯ ಹೇಸರೇಕೆ ಬಂತು?
ನಿನ್ನಿಂದ ಹೀಗಾಯಿತು
ರೇಣುಕಾಸ್ವಾಮಿ ಕೊಲೆಯ ಬಳಿಕ ದರ್ಶನ್ ಸಿಟ್ಟುಗೆದ್ದು ಪವಿತ್ರಾ ಗೌಡಗೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ನಿನ್ನಿಂದ ಹೀಗಾಯಿತು ಎಂದು ಎರಡೇಟು ಬಾರಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಹಲ್ಲೆಗೊಳಗಾದ ನಟಿ ಆರ್ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋಮವಾರದಂದು (ಜೂನ್ 10) ಪವಿತ್ರಾ ಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಮೈಸೂರಲ್ಲಿ ಕೊಲೆ? ಬೆಂಗಳೂರಲ್ಲಿ ಡೆಡ್ಬಾಡಿ? ಚಿತ್ರಹಿಂಸೆ ನೀಡಿ ರೇಣುಕಾಸ್ವಾಮಿ ಕೊಲೆ
ಪೊಲೀಸ್ ವಶದಲ್ಲಿ ಪವಿತ್ರಾ ಗೌಡ
ಇಂದು ರೇಣುಕಾಸ್ವಾಮಿ ಪ್ರಕರಣದ ಸಂಬಂಧ ದರ್ಶನ್ ಅವರನ್ನು ಬಂಧಿಸಲಾಗಿದೆ. ಬಂಧನ ಜೊತೆ ಜೊತೆಗೆ ನಟಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ