newsfirstkannada.com

‘ನಿನ್ನಿಂದ ಹೀಗಾಯ್ತು’.. ನಟಿ ಪವಿತ್ರಾ ಗೌಡ ಮೇಲೆ ದರ್ಶನ್​ ಹಲ್ಲೆ?

Share :

Published June 11, 2024 at 2:45pm

    ಅಭಿಮಾನಿಯನ್ನೇ ಕೊಲೆ ಮಾಡಿದ್ರಾ ನಟ?

    ಆಕೆಯ ಮಾತಿಗೆ ಕೊಲೆಯಾದ ಅಪಟ್ಟ ಅಭಿಮಾನಿ?

    ದರ್ಶನ್​ ಏಟಿಗೆ ಆಸ್ಪತ್ರೆ ಸೇರಿದ್ದರಾ ನಟಿ ಪವಿತ್ರಾ ಗೌಡ?

ನಟ ದರ್ಶನ್​​ ಮೇಲೆ ಹಲ್ಲೆ ಮತ್ತು ಕೊಲೆ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಮೂಲದ ಅಭಿಮಾನಿ ರೇಣುಕಾಸ್ವಾಮಿ ಎಂಬಾತನನ್ನು ಕೊಲೆಗೈದ ಆರೋಪದ ಮೇಲೆ ದರ್ಶನ್​ ಅವರನ್ನು ಅರೆಸ್ಟ್​ ಮಾಡಲಾಗಿದೆ. ಜೊತೆಗೆ ನಟಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಶ್ಲೀಲ ಮೆಸೇಜ್ ಮಾಡಿದ್ದನೇ?

ಕೊಲೆಯಾದ ರೇಣುಕಾಸ್ವಾಮಿ ಚಿತ್ರದುರ್ಗ ಮೂಲದವನಾಗಿದ್ದು, ನಟ ದರ್ಶನ್​ನ ಪಕ್ಕಾ ಅಭಿಮಾನಿಯಾಗಿದ್ದನು ಎಂದು ಹೇಳಲಾಗುತ್ತಿದೆ. ದರ್ಶನ್​ ಮತ್ತು ಪತ್ನಿ ವಿಜಯಲಕ್ಷ್ಮೀ ನಡುವೆ ಪವಿತ್ರಾ ಗೌಡ ಬಂದ ಸಂಬಂಧ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್​ ಮಾಡಿದ್ದನಂತೆ. ಈ ವಿಚಾರವನ್ನು ಪವಿತ್ರಾ ಗೌಡ ದರ್ಶನ್​ ಬಳಿ ಹೇಳಿಕೊಂಡಿದ್ದು, ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆಸಿಕೊಳ್ಳಲಾಗಿದೆ.

 

ಇದನ್ನೂ ಓದಿ: ಒಂದೆರಡಲ್ಲ.. ನಟ ದರ್ಶನ್​ ಮೇಲಿದೆ ಸಾಲು ಸಾಲು ಆರೋಪ! ಇಲ್ಲಿದೆ ಲಿಸ್ಟ್​

ಅಭಿಮಾನಿಯನ್ನು ಕರೆಸಿ ಕೊಲೆ?

ಅಭಿಮಾನಿಯನ್ನು ಕರೆಸಿಕೊಂಡ ಬಳಿಕ ಆತನಿಗೆ ದರ್ಶನ್​ ಮತ್ತು ಆತನ ಸ್ನೇಹಿತರು ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಮಾನುಷವಾಗಿ ಥಳಿಸಿದ್ದಾರೆ. ಥಳಿಸಿದ ಏಟಿಗೆ ಯುವಕ ಸಾವನ್ನಪ್ಪಿದ್ದಾನೆ. ನಂತರ ಮೃತದೇಹವನ್ನು ಸುಮನಹಳ್ಳಿ ಮೋರಿ ಬಳಿ ತಂದು ಎಸೆದಿದ್ದಾರೆ.

ಇದನ್ನೂ ಓದಿ: ಪವಿತ್ರಾ ಗೌಡಗೆ ದರ್ಶನ್​ಗೂ ಏನು ಸಂಬಂಧ? ರೇಣುಕಾಸ್ವಾಮಿ ಕೊಲೆಯಲ್ಲಿ ನಟಿಯ ಹೇಸರೇಕೆ ಬಂತು?

 

ನಿನ್ನಿಂದ ಹೀಗಾಯಿತು

ರೇಣುಕಾಸ್ವಾಮಿ ಕೊಲೆಯ ಬಳಿಕ ದರ್ಶನ್ ಸಿಟ್ಟುಗೆದ್ದು ಪವಿತ್ರಾ ಗೌಡಗೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ನಿನ್ನಿಂದ ಹೀಗಾಯಿತು ಎಂದು ಎರಡೇಟು ಬಾರಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಹಲ್ಲೆಗೊಳಗಾದ ನಟಿ ಆರ್​​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾ​ಗಿದೆ. ಸೋಮವಾರದಂದು (ಜೂನ್ 10) ಪವಿತ್ರಾ ಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮೈಸೂರಲ್ಲಿ ಕೊಲೆ? ಬೆಂಗಳೂರಲ್ಲಿ ಡೆಡ್​ಬಾಡಿ? ಚಿತ್ರಹಿಂಸೆ ನೀಡಿ ರೇಣುಕಾಸ್ವಾಮಿ ಕೊಲೆ

ಪೊಲೀಸ್​ ವಶದಲ್ಲಿ ಪವಿತ್ರಾ ಗೌಡ

ಇಂದು ರೇಣುಕಾಸ್ವಾಮಿ ಪ್ರಕರಣದ ಸಂಬಂಧ ದರ್ಶನ್​ ಅವರನ್ನು ಬಂಧಿಸಲಾಗಿದೆ. ಬಂಧನ ಜೊತೆ ಜೊತೆಗೆ ನಟಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ನಿನ್ನಿಂದ ಹೀಗಾಯ್ತು’.. ನಟಿ ಪವಿತ್ರಾ ಗೌಡ ಮೇಲೆ ದರ್ಶನ್​ ಹಲ್ಲೆ?

https://newsfirstlive.com/wp-content/uploads/2024/06/Pavitra-Gowda-2.jpg

    ಅಭಿಮಾನಿಯನ್ನೇ ಕೊಲೆ ಮಾಡಿದ್ರಾ ನಟ?

    ಆಕೆಯ ಮಾತಿಗೆ ಕೊಲೆಯಾದ ಅಪಟ್ಟ ಅಭಿಮಾನಿ?

    ದರ್ಶನ್​ ಏಟಿಗೆ ಆಸ್ಪತ್ರೆ ಸೇರಿದ್ದರಾ ನಟಿ ಪವಿತ್ರಾ ಗೌಡ?

ನಟ ದರ್ಶನ್​​ ಮೇಲೆ ಹಲ್ಲೆ ಮತ್ತು ಕೊಲೆ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಮೂಲದ ಅಭಿಮಾನಿ ರೇಣುಕಾಸ್ವಾಮಿ ಎಂಬಾತನನ್ನು ಕೊಲೆಗೈದ ಆರೋಪದ ಮೇಲೆ ದರ್ಶನ್​ ಅವರನ್ನು ಅರೆಸ್ಟ್​ ಮಾಡಲಾಗಿದೆ. ಜೊತೆಗೆ ನಟಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಶ್ಲೀಲ ಮೆಸೇಜ್ ಮಾಡಿದ್ದನೇ?

ಕೊಲೆಯಾದ ರೇಣುಕಾಸ್ವಾಮಿ ಚಿತ್ರದುರ್ಗ ಮೂಲದವನಾಗಿದ್ದು, ನಟ ದರ್ಶನ್​ನ ಪಕ್ಕಾ ಅಭಿಮಾನಿಯಾಗಿದ್ದನು ಎಂದು ಹೇಳಲಾಗುತ್ತಿದೆ. ದರ್ಶನ್​ ಮತ್ತು ಪತ್ನಿ ವಿಜಯಲಕ್ಷ್ಮೀ ನಡುವೆ ಪವಿತ್ರಾ ಗೌಡ ಬಂದ ಸಂಬಂಧ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್​ ಮಾಡಿದ್ದನಂತೆ. ಈ ವಿಚಾರವನ್ನು ಪವಿತ್ರಾ ಗೌಡ ದರ್ಶನ್​ ಬಳಿ ಹೇಳಿಕೊಂಡಿದ್ದು, ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆಸಿಕೊಳ್ಳಲಾಗಿದೆ.

 

ಇದನ್ನೂ ಓದಿ: ಒಂದೆರಡಲ್ಲ.. ನಟ ದರ್ಶನ್​ ಮೇಲಿದೆ ಸಾಲು ಸಾಲು ಆರೋಪ! ಇಲ್ಲಿದೆ ಲಿಸ್ಟ್​

ಅಭಿಮಾನಿಯನ್ನು ಕರೆಸಿ ಕೊಲೆ?

ಅಭಿಮಾನಿಯನ್ನು ಕರೆಸಿಕೊಂಡ ಬಳಿಕ ಆತನಿಗೆ ದರ್ಶನ್​ ಮತ್ತು ಆತನ ಸ್ನೇಹಿತರು ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಮಾನುಷವಾಗಿ ಥಳಿಸಿದ್ದಾರೆ. ಥಳಿಸಿದ ಏಟಿಗೆ ಯುವಕ ಸಾವನ್ನಪ್ಪಿದ್ದಾನೆ. ನಂತರ ಮೃತದೇಹವನ್ನು ಸುಮನಹಳ್ಳಿ ಮೋರಿ ಬಳಿ ತಂದು ಎಸೆದಿದ್ದಾರೆ.

ಇದನ್ನೂ ಓದಿ: ಪವಿತ್ರಾ ಗೌಡಗೆ ದರ್ಶನ್​ಗೂ ಏನು ಸಂಬಂಧ? ರೇಣುಕಾಸ್ವಾಮಿ ಕೊಲೆಯಲ್ಲಿ ನಟಿಯ ಹೇಸರೇಕೆ ಬಂತು?

 

ನಿನ್ನಿಂದ ಹೀಗಾಯಿತು

ರೇಣುಕಾಸ್ವಾಮಿ ಕೊಲೆಯ ಬಳಿಕ ದರ್ಶನ್ ಸಿಟ್ಟುಗೆದ್ದು ಪವಿತ್ರಾ ಗೌಡಗೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ನಿನ್ನಿಂದ ಹೀಗಾಯಿತು ಎಂದು ಎರಡೇಟು ಬಾರಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಹಲ್ಲೆಗೊಳಗಾದ ನಟಿ ಆರ್​​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾ​ಗಿದೆ. ಸೋಮವಾರದಂದು (ಜೂನ್ 10) ಪವಿತ್ರಾ ಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮೈಸೂರಲ್ಲಿ ಕೊಲೆ? ಬೆಂಗಳೂರಲ್ಲಿ ಡೆಡ್​ಬಾಡಿ? ಚಿತ್ರಹಿಂಸೆ ನೀಡಿ ರೇಣುಕಾಸ್ವಾಮಿ ಕೊಲೆ

ಪೊಲೀಸ್​ ವಶದಲ್ಲಿ ಪವಿತ್ರಾ ಗೌಡ

ಇಂದು ರೇಣುಕಾಸ್ವಾಮಿ ಪ್ರಕರಣದ ಸಂಬಂಧ ದರ್ಶನ್​ ಅವರನ್ನು ಬಂಧಿಸಲಾಗಿದೆ. ಬಂಧನ ಜೊತೆ ಜೊತೆಗೆ ನಟಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More