ಬಳ್ಳಾರಿ ಜೈಲಲ್ಲಿ ದಾಸನಿಗೆ ಭಯ.. ಫೋನ್ ಮೂಲಕ ಪತ್ನಿ ವಿಜಯಲಕ್ಷ್ಮಿ ಜೊತೆ 5 ನಿಮಿಷ ಮಾತಾಡಿದ ದರ್ಶನ್​!

author-image
Bheemappa
Updated On
ದರ್ಶನ್​​ ಭೇಟಿ ಮಾಡಲು ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ.. ಕೈಯಲ್ಲಿ ಇದ್ದಿದ್ದು ಏನು?
Advertisment
  • ಚಾರ್ಜ್​​ಶೀಟ್​ ಕುರಿತು ಹೆಂಡತಿ ಜೊತೆ ಮಾತನಾಡಿದ್ದಾರಾ ನಟ..?
  • ಒಟ್ಟು 5 ನಿಮಿಷಗಳ ಕಾಲ ಪತ್ನಿ ಜೊತೆ ಮಾತನಾಡಿರುವ ದರ್ಶನ್
  • ಜೈಲಿನಿಂದ ವಕೀಲರ ಜೊತೆ ದರ್ಶನ್ ಅವರು ಮಾತನಾಡಿದ್ದಾರಾ?

ಬಳ್ಳಾರಿ: ಕೇಂದ್ರ ಕಾರಾಗೃಹದಲ್ಲಿ ಇರುವ ನಟ ದರ್ಶನ್ ಅವರು ಪ್ರಿಸನ್ ಕಾಲ್ ಸಿಸ್ಟಮ್ ಅಡಿ ಲ್ಯಾಂಡ್‌ಲೈನ್ ಮೂಲಕ ಪತ್ನಿ ವಿಜಯಲಕ್ಷ್ಮಿ ಜೊತೆ ಮಾತನಾಡಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿರುವ ನಟ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ ಜೊತೆ ಪ್ರಕರಣ ಸಂಬಂಧ ಮಾತನಾಡಿದ್ದಾರೆ. ಪ್ರಿಸನ್ ಕಾಲ್ ಸಿಸ್ಟಮ್ ಅಡಿಯಲ್ಲಿ ಪತ್ನಿ ಜೊತೆ ಇಂದು 2:30ಕ್ಕೆ ದರ್ಶನ ಮಾತನಾಡಿದ್ದಾರೆ. ಫೋನ್​​ನಲ್ಲಿ ಚಾರ್ಜ್​​ಶೀಟ್​ ಕುರಿತಂತೆ ದರ್ಶನ್​ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:ರೇಣುಕಾಸ್ವಾಮಿ ಬಿಡಬೇಡಿ, ಸಾಯಿಸಿ.. ಕಿರುಚಾಡಿದ್ದ ಪವಿತ್ರಾ ಗೌಡ; ವಿಕೃತ ಮುಖದ ಕರಾಳ ಸತ್ಯ ಬಯಲು

publive-image

ಇನ್ನು ಇದೇ ವೇಳೆ ವಿಜಯಲಕ್ಷ್ಮಿಯವರು ದರ್ಶನ್ ಅವರ ಆರೋಗ್ಯವನ್ನು ವಿಚಾರಣೆ ಮಾಡಿದ್ದಾರೆ. ಪತಿ-ಪತ್ನಿ ಇಬ್ಬರು 5 ನಿಮಿಷ ಕಾಲ ಮಾತನಾಡಿದ್ದಾರೆ. ಈ ಇಬ್ಬರು ಮಾತನಾಡಿದ್ದ ಪೋನ್ ಸಂಭಾಷಣೆಯನ್ನು ಜೈಲು ಅಧಿಕಾರಿಗಳು ರೆಕಾರ್ಡ್ ಮಾಡಿಕೊಂಡಿದ್ದಾರೆ. ದರ್ಶನ್ ಅವರು ಕೇಳಿದ ಮೇಲೆ ಸುಮಾರು 3 ಗಂಟೆ ತಡವಗಿ ಫೋನ್ ಮಾಡಲು ಅಧಿಕಾರಿಗಳು ಅನುಮತಿ ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment