ಇಂದು ದರ್ಶನ್​​ ಸೇರಿ 5 ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ.. ಮಹತ್ವದ ಬದಲಾವಣೆ ಆಗುತ್ತಾ?

author-image
AS Harshith
Updated On
‘ದರ್ಶನ್ ಅಮಾಯಕ.. ಎಲ್ಲವೂ ಪ್ಲಾಂಟೆಡ್’- ಹಿರಿಯ ವಕೀಲ C.V ನಾಗೇಶ್ ಪ್ರಚಂಡ ವಾದ; ಕೇಸ್‌ಗೆ ಹೊಸ ಟ್ವಿಸ್ಟ್‌!
Advertisment
  • 57ನೇ CCH ನ್ಯಾಯಾಲಯದಲ್ಲಿ ಜಾಮೀನು ಅರ್ಜಿ‌ ವಿಚಾರಣೆ
  • ರೇಣುಕಾಸ್ವಾಮಿ ಕೇಸ್​ನಲ್ಲಿ ಪವಿತ್ರಾ ಗೌಡ ಪಾತ್ರ ಹೆಚ್ಚಿಲ್ಲ ಎಂದು ವಾದ
  • ಇಂದಿನ ವಿಚಾರಣೆಯಲ್ಲಿ ಏನೆಲ್ಲಾ ಬದಲಾವಣೆ ಆಗಬಹುದು?

ಬೆಂಗಳೂರು: ದರ್ಶನ್ ಆ್ಯಂಡ್ ಗ್ಯಾಂಗ್​​ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಇಂದು ಸೆಷನ್ ಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್, ಪವಿತ್ರಗೌಡ, ವಿನಯ್ ಸೇರಿ ಐದು ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಜಾಮೀನು ಅರ್ಜಿ‌ ವಿಚಾರಣೆ

57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ‌ ವಿಚಾರಣೆ ನಡೆಯಲಿದ್ದು, ದರ್ಶನ್ ಪರ ಸುನೀಲ್, ಪವಿತ್ರಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಲಿದ್ದಾರೆ.

ಇದನ್ನೂ ಓದಿ: ಬೂದಿಯಿಂದ ಬಂಗಾರ ತೆಗೆದು ಕೋಟಿ ಕೋಟಿ ಹಣ ಗಳಿಸಿದ ಜಪಾನಿಯರು! ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ!

ವಿಶೇಷ ಸಾರ್ವಜನಿಕ ಅಭಿಯೋಜಕರು ಶುಕ್ರವಾರವೇ ದರ್ಶನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ್ದರು. ಹೀಗಾಗಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತ್ತು.ಅದರಂತೆ ಇಂದು ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ ಐವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಐಶ್ವರ್ಯ ರೈ ಮತ್ತೊಂದು ವಿಡಿಯೋ ವೈರಲ್, ಐಫಾ ಅವಾರ್ಡ್ ಪಡೆದುಕೊಂಡ ಐಶ್ ಮಾಡಿದ್ದೇನು?

ಪವಿತ್ರಾ ಗೌಡ ಪಾತ್ರ ಹೆಚ್ಚಿಲ್ಲ

ಇನ್ನು ಶುಕ್ರವಾರ ಪವಿತ್ರಾಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದರು. ಪವಿತ್ರಾ ಗೌಡ ಪಾತ್ರ ಹೆಚ್ಚಿಲ್ಲ, ಅದೇಗೆ ಕೊಲೆ ಆರೋಪ ಮಾಡಿದ್ದಾರೆ ಎಂದು ವಾದ ಮಂಡನೆ ಮಾಡಿದ್ದರು.

ವಿಶೇಷ ಸಾರ್ವಜನಿಕ ಅಭಿಯೋಜಕರ ಮನವಿಯಂತೆ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿದೆ. ಈ ಹಿನ್ನಲೆ ಇಂದು ದರ್ಶನ್,ಪವಿತ್ರಾ ಸೇರಿ ಐವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆದರೆ ಇಂದಿನ ವಿಚಾರಣೆಯಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎಂಬುದು ಕಾದು ನೋಡಬೇಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment