Subscribe

0

user
  • Manage Subscription
  • Bookmarks
  • My Profile
  • Log Out
  • LIVE
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ವಿದೇಶ
  • ಸ್ಪೋರ್ಟ್ಸ್
  • ಆರೋಗ್ಯ
  • ಲೈಫ್‌ಸ್ಟೈಲ್
  • ಎಜುಕೇಶನ್
  • ಟೆಕ್
  • Sign in with Email

By clicking the button, I accept the Terms of Use of the service and its Privacy Policy, as well as consent to the processing of personal data.

Don’t have an account? Signup

ad_close_btn
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸ್ಪೋರ್ಟ್ಸ್
  • ಆರೋಗ್ಯ

Powered by :

ಟಾಪ್ ನ್ಯೂಸ್ ಸಿನಿಮಾ

231 ಸಾಕ್ಷಿದಾರರು.. 3991 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ.. ದರ್ಶನ್​ಗೆ ಭೀತಿ, ರೇಣುಕಾಸ್ವಾಮಿಗೆ ಸಿಗುತ್ತಾ ಮುಕ್ತಿ?​​

author-image
AS Harshith
04 Sep 2024 13:26 IST
Updated On 04 Sep 2024 14:05 IST
Follow Us
ನಟ ದರ್ಶನ್​ ಬಾಳಲ್ಲಿ ಸುಂಟರಗಾಳಿ ಎಬ್ಬಿಸಿದ ಚಾರ್ಜ್‌ಶೀಟ್​​; ಇದರಲ್ಲಿರೋ ಆ 8 ಸೀಕ್ರೆಟ್ಸ್​ ಏನು?
Advertisment
  • ದರ್ಶನ್​​ ಮತ್ತು ಗ್ಯಾಂಗ್​ಗೆ ಶುರುವಾಯ್ತು ಭೀತಿ
  • 17 ಆರೋಪಿಗಳ ವಿರುದ್ಧ ಕೇಸ್.. ಇಂದು ಚಾರ್ಜ್​ಶೀಟ್​ ಸಲ್ಲಿಕೆ
  • ತನಿಖೆಯ ಮೂಲಕ ಏನೆಲ್ಲಾ ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ?

ದರ್ಶನ್​ ಮತ್ತು ಗ್ಯಾಂಗ್​ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣದ ಚಾರ್ಜ್​ಶೀಟನ್ನು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.   ಇಂದು ಚಾರ್ಜ್​ಶೀಟ್​​ ಸಲ್ಲಿಸಿದ್ದಾರೆ. 3991 ಪುಟಗಳುಳ್ಳ ಜಾರ್ಜ್​ಶೀಟನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಒಪ್ಪಿಸಿದ್ದಾರೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಕೊಲೆ ಆರೋಪಿಗಳಾದ ದರ್ಶನ್​​ ​ಮತ್ತು ಗ್ಯಾಂಗ್​ ಸೇರಿ ಸುಮಾರು 17 ಆರೋಪಿಗಳ ವಿರುದ್ಧ ಕೇಸ್​ ದಾಖಲಾಗಿತ್ತು. ಇದೀಗ ಈ ಪ್ರಕರಣದ ಕುರಿತು ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಇಂದು 24ನೇ ಎ.ಸಿ.ಎಂ.ಎಂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದಾರೆ.

publive-image

ಇದನ್ನೂ ಓದಿ: ದುಬಾರಿಯಾದ ಚಾರ್ಜ್​ಶೀಟ್​​! ಪೊಲೀಸ್​ ಇಲಾಖೆಗೆ ದರ್ಶನ್​ ತನಿಖೆಗೆ ಎಷ್ಟು ಲಕ್ಷ ಖರ್ಚು ಮಾಡಿದೆ ಗೊತ್ತಾ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳು ಸಂಗ್ರಹಿಸಿದ್ದಾರೆ. ಇದೀಗ 17 ಆರೋಪಿತರ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ.

publive-image

ಇದನ್ನೂ ಓದಿ: ಜೈಲಲ್ಲಿರುವ ಮಗನಿಗೆ ಗಾಂಜಾ ತಂದ ತಾಯಿ! ಜೈಲಾಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಅರೆಸ್ಟ್​

ಇನ್ನು ದೋಷಾರೋಪಣಾ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 07 ಸಂಪುಟಗಳ 10 ಕಡತಗಳನ್ನು ಒಳಗೊಂಡಿರುವ ಚಾರ್ಜ್​ಶೀಟನ್ನು ಪೊಲೀಸರು ಸಲ್ಲಿಸಿದ್ದಾರೆ.

publive-image

ದರ್ಶನ್​​ ಮತ್ತು ಗ್ಯಾಂಗ್​ನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತನಿಖೆಯನ್ನು ಬೆಂಗಳೂರು ಪೊಲೀಸ್​ ಆಯುಕ್ತರು ಬಿ.ದಯಾನಂದ, ಅಪರ ಪೊಲೀಸ್ ಆಯುಕ್ತರು ಪಶ್ಚಿಮ ವಲಯ ಸತೀಶ್‌ ಕುಮಾರ್​ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಗಿರೀಶ್.ಎಸ್. ಐ.ಪಿ.ಎಸ್ ರವರ ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಚಂದನ್‌ಕುಮಾರ್.ಎನ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ಒಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ- 173(8) ಸಿಆರ್‌ಪಿಸಿ ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
FOLLOW NEWSFIRST FOR
LATEST UPDATES
YouTubeFacebookTwitterInstagram
Subscribe to our Newsletter! Be the first to get exclusive offers and the latest news
logo

Related Articles
Read the Next Article
Latest Stories
Subscribe to our Newsletter! Be the first to get exclusive offers and the latest news



Quick Links

  • IC
  • GRIEVANCE
  • FEED
  • CONTACT US

Olecom Media Pvt Ltd. © 2025

Powered by