/newsfirstlive-kannada/media/post_attachments/wp-content/uploads/2024/09/Darshan-4-1.jpg)
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ A1 ಆರೋಪಿಯಾಗಿರುವ ದರ್ಶನ್​​​ಗೆ ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಬಳ್ಳಾರಿ ಜೈಲು ಸೇರಿದ ಬಳಿಕ ಸಂಕಷ್ಟ ಅನುಭವಿಸುತ್ತಿದ್ದ ದರ್ಶನ್​ಗೆ ಕೋರ್ಟ್​ ಅಲ್ಪಾವಧಿಯ ಮುಕ್ತಿ ನೀಡಿದೆ. ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್​​ಗೆ ಚಿಕಿತ್ಸೆಯ ಅನಿವಾರ್ಯತೆ ಇರುವ ಕಾರಣ ಮಧ್ಯಂತರ ಜಾಮೀನು ಸಿಕ್ಕಿದೆ. ಇದರಿಂದಾಗಿ ದರ್ಶನ್​ಗೆ ಸ್ಪಲ್ಪ ಸಮಾಧಾನವಾದಂತಿದೆ.
ತೀರ್ಪಿನ ಪ್ರಮುಖ ಅಂಶ:
- ಮುಂದಿನ 6 ವಾರಗಳ ಕಾಲ ಜಾಮೀನು ಮಂಜೂರು
- ನಿಗದಿತ ಅವಧಿಯ ಜಾಮೀನು ಮಜೂರು ಅಷ್ಟೇ
- ದರ್ಶನ್ ಆಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆ ಅವಕಾಶ
- ಯಾವ ಚಿಕಿತ್ಸೆ ಆಗಿದೆ ಅಂತಾ ರಿಪೋರ್ಟ್ ನೀಡಬೇಕು
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣ ಆತನನ್ನು ಕರೆಸಿ ಕೊಲೆ ಮಾಡಲಾಗಿತ್ತು. ಆರ್​​ ಆರ್​ ನಗರದ ಪಟ್ಟಣಗೆರೆ ಶೆಡ್​ನಲ್ಲಿ ಆರೋಪಿ ದರ್ಶನ್​ ಮತ್ತು ಆತನ ಸಹಚರರು ರೇಣುಕಾಸ್ವಾಮಿಗೆ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದರು.
ಬಳಿಕ ರೇಣುಕಾಸ್ವಾಮಿ ಶವವನ್ನು ಸುಮನಹಳ್ಳಿ ಸೇತುವೆ ಬಳಿ ಎಸೆದಿದ್ದರು. ಈ ಪ್ರಕರಣದ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಇದರಲ್ಲಿ ಸ್ಯಾಂಡಲ್​ವುಡ್​ ನಟ ದರ್ಶನ್​ ಇರುವ ಸಂಗತಿ ಬಯಲಾಗಿದೆ. ಪ್ರಕರಣದ ಸಂಬಂಧ ಜೂನ್ 11ರಂದು ದರ್ಶನ್​​ರನ್ನು ಅರೆಸ್ಟ್​ ಮಾಡಲಾಯ್ತು.
ಇದನ್ನೂ ಓದಿ: Darshan: ಇಂದು ಮಧ್ಯಂತರ ಜಾಮೀನು ತೀರ್ಪು.. ಬೆನ್ನು ನೋವಿನಿಂದ ದರ್ಶನ್​ಗೆ ಇಷ್ಟೊಂದು ಅಪಾಯವಿದೆಯಾ?
ಪ್ರಾರಂಭದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್​ಗೆ ಜೈಲಿನೊಳಗೆ ವಿಡಿಯೋ ಕರೆ, ರಾಜ ಮರ್ಯಾದೆ ನೀಡುತ್ತಿರುವ ವಿಚಾರ ದೃಶ್ಯ ಸಮೇತ ಬೆಳಕಿಗೆ ಬಂದಿತ್ತು. ಇದೇ ಕಾರಣಕ್ಕೆ ದರ್ಶನ್​​ನನ್ನು ಬಳ್ಳಾರಿ ಶಿಫ್ಟ್ ಮಾಡಲಾಯ್ತು.​ ಬಳಿಕ ದರ್ಶನ್​ಗೆ ಬೆನ್ನು ನೋವು ಜಾಸ್ತಿಯಾಗಿತ್ತು. ಕೊನೆಗೆ ಫಿಜಿಯೋಥೆರಪಿ ಚಿಕಿತ್ಸೆ ಪಡೆದರು. ಆದರೂ ನೋವು ಕಡಿಮೆಯಾಗಿರಲಿಲ್ಲ. ಹೀಗಾಗಿ ದರ್ಶನ್​ಗೆ ಆಪರೇಷನ್​ ಆಗತ್ಯವಿದ್ದು, ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿದೆ, ಇದರ ವಾದ-ಪ್ರತಿವಾದ ಮುಕ್ತಾಯವಾಗಿ, ಇಂದು ಕೋರ್ಟ್​ ತೀರ್ಪು ನೀಡಿದೆ.
ಇದನ್ನೂ ಓದಿ: 1 ಕೆಜಿಗೆ 3 ಲಕ್ಷ ರೂಪಾಯಿ.. ಪರಿಶುದ್ಧ ಕೇಸರಿ ಹೇಗೆ ತಯಾರಿಸುತ್ತಾರೆ? ಚರ್ಮದ ಸಮಸ್ಯೆಗೆ ಇದೇ ರಾಮಬಾಣ!
ದರ್ಶನ್​ಗೆ ಮಧ್ಯಂತರ ಬೇಲ್​ ನೀಡಲೆಂದು ವಿಮ್ಸ್​ನ ಚಿಕಿತ್ಸಕ ವಿಭಾಗದ ಪ್ರೊಫೆಸರ್ ಮತ್ತು ಎಚ್ಒಡಿ ಎಸ್.ವಿಶ್ವನಾಥ್ ಸಹಿಯ 26 ದಾಖಲೆಗಳನ್ನು ಕೋರ್ಟ್​ಗೆ ನೀಡಲಾಗಿದೆ. ಇದರಲ್ಲಿ ಫಿಜಿಯೊಥೆರಪಿ, ನೋವು ನಿವಾರಕ, ನರದ ಉಪಚಾರಕ್ಕೆ ಔಷಧ ತೆಗೆದುಕೊಳ್ಳುವುದು. ಲಂಬಾರ್ ಬ್ರೇಸ್ (ಸೊಂಟಕ್ಕೆ ಕಟ್ಟುವ ಪಟ್ಟಿ) ಉಪಯೋಗಿಸುವುದರ ಕುರಿತು ಬರೆಯಲಾಗಿತ್ತು. ಈ ದಿಸೆಯಲ್ಲಿ ರೋಗಿಗೆ ಉಪಚಾರದ ಬಳಿಕ ಸ್ವಲ್ಪ ನೋವು ನಿವಾರಣೆಯಾಗಿದೆ. ಆದರೆ ಹೆಚ್ಚುವರಿ ಚಿಕಿತ್ಸೆಗಾಗಿ ಈಗ ಕೋರ್ಟ್​​ ದರ್ಶನ್​ಗೆ ಮಧ್ಯಂತರ ಜಾಮೀನು ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ