/newsfirstlive-kannada/media/post_attachments/wp-content/uploads/2024/06/DARSHAN_PAVITRA_GOWDA_1.jpg)
ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ನಟ ದರ್ಶನ್​ ಜೈಲು ಸೇರಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈ ವೇಳೆ ನಟಿ ಪವಿತ್ರ ಗೌಡರನ್ನು ಭೇಟಿ ಮಾಡಿದ್ದಾರೆ.​
ಪ್ರತಿದಿನ ದರ್ಶನ್ ಟೀಂ ಮೆಂಬರ್ಗೆ ಜೈಲಿನ ಆಸ್ಪತ್ರೆಯಲ್ಲಿ ಇನ್ಸೂಲಿನ್ ಕೊಡಿಸಲಾಗುತ್ತದೆ. ಆದರೆ ದರ್ಶನ್​ಗೆ ಇನ್ಸೂಲಿನ್ ಕೊಡಿಸುವ ವೇಳೆ ಆಸ್ಪತ್ರೆಯಲ್ಲಿ ನಿನ್ನೆ ದರ್ಶನ್ ಮತ್ತು ಪವಿತ್ರಾ ಗೌಡ ಭೇಟಿ ಮಾಡಿದ್ದಾರೆ. 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಎ1 ಮತ್ತು ಎ2 ಆರೋಪಿಗಳಿಬ್ಬರು ಜೈಲು ದಿನಗಳ ಬಗ್ಗೆ ಮಾತಾಡಿದ್ದಾರೆ. ನೋವಿನ ಭಾವುಕತೆ ವ್ಯಕ್ತಪಡಿಸಿದ್ದಾರೆ. ಪವಿತ್ರಾ ಗೌಡಗೆ ಎಲ್ಲಾ ಸರಿ ಹೋಗುತ್ತೆ ಎಂದು ದರ್ಶನ್ ಸಮಾಧಾನ ಪಡಿಸಿದ್ದಾರೆ ಎನ್ನಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us