/newsfirstlive-kannada/media/post_attachments/wp-content/uploads/2025/03/Darshan-shooting-in-mysore.jpg)
ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಇವತ್ತು ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ 2024 ಡಿಸೆಂಬರ್ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಅಂತೆಯೇ ಇಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಪರ್ದೀವಾಲ, ನ್ಯಾಯಮೂರ್ತಿ ಮಹದೇವನ್ ಪೀಠ ಅರ್ಜಿ ವಿಚಾರಣೆಯನ್ನು ಕೈಕೈಗೆತ್ತಿಕೊಳ್ಳಲಿದೆ.
ಇದನ್ನೂ ಓದಿ: ಉಸಿರಾಡುವ ಗಾಳಿ ಬಿಟ್ಟು ಎಲ್ಲದಕ್ಕೂ ಟ್ಯಾಕ್ಸ್.. ಸಿದ್ದು ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಗೆ ಕರೆ..!
ದರ್ಶನ್ ಜಾಮೀನು ರದ್ದು ಮಾಡಲು ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಮನವಿ ಮಾಡಿದ್ದು, ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್, ಎ7 ಅನುಕುಮಾರ್, ಎ11 ನಾಗರಾಜ್, ಎ12 ಎಂ.ಲಕ್ಷ್ಮಣ್ ಹಾಗೋ ಎ 14 ಪ್ರದೂಶ್ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಪ್ರಾಸಿಕ್ಯೂಷನ್ ಮನವಿ ಏನು?
ಹೈಕೋರ್ಟ್ ನೀಡಿರುವ ಜಾಮೀನು ಅವಸರದಿಂದ ಕೂಡಿದಂತಿದೆ. ಯಾಕಂದ್ರೆ ಖ್ಯಾತ ನಟ ದರ್ಶನ್ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಸೆಷನ್ಸ್ ಕೋರ್ಟ್ನಲ್ಲಿ ಕೇಸ್ ಚಾರ್ಜ್ ಫ್ರೇಮ್ ಇನ್ನೂ ಹಂತಕ್ಕೆ ಬಂದಿಲ್ಲ. ನಟ ದರ್ಶನ್ಗೆ 6 ವಾರಗಳು ಮಧ್ಯಂತರ ಬೇಲ್ ನೀಡಿದ್ದಾಗಲೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ. ನಟ ದರ್ಶನ್ ಮತ್ತು ಗ್ಯಾಂಗ್ ಹೈಕೋರ್ಟ್ ಜಾಮೀನಿಗೆ ಅರ್ಹರಾಗಿಲ್ಲ. ಕೇಸ್ನಲ್ಲಿ ಪ್ರಬಲ ಸಾಕ್ಷಿಗಳಿದ್ದರೂ ಪರಿಗಣಿಸಲು ಕೋರ್ಟ್ ವಿಫಲವಾಗಿದೆ. ಹೀಗಾಗಿ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡುವಂತೆ ವಕೀಲರು ಸುಪ್ರೀಂ ಕೋರ್ಟ್ಗೆ ಮನವಿ ಮಾಡಲಿದ್ದಾರೆ.
ಕೇಸ್ನಲ್ಲಿ ಟೆಕ್ನಿಕಲ್ ಹಾಗೂ ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಲು ಹೈಕೋರ್ಟ್ ವಿಫಲವಾಗಿದೆ. ಹೀಗಾಗಿ ಮಧ್ಯಂತರ ಪರಿಹಾರವಾಗಿ ಏಕಪಕ್ಷೀಯ ಆದೇಶ ನೀಡಬೇಕು ಅಂತ ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಅರ್ಜಿಯಲ್ಲಿ ಕೋರಲಾಗಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ್ರೆ ಮತ್ತೆ ನಟ ದರ್ಶನ್ ಅಂಡ್ ಗ್ಯಾಂಗ್ಗೆ ಸಂಕಷ್ಟ ಎದುರಾಗಲಿದೆ.
ಇದನ್ನೂ ಓದಿ: ಲವರ್ ಜೊತೆ ಪತ್ನಿಯ ವಿವಾಹ ಕೇಸ್ಗೆ ಟ್ವಿಸ್ಟ್, ನಾಲ್ಕೇ ದಿನಕ್ಕೆ ಮತ್ತೆ ಮೊದಲ ಗಂಡನ ಮನೆ ಸೇರಿದ ಪತ್ನಿ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ