ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟ ಆರೋಪಿ
ಪೊಲೀಸರ ಮೇಲು ಕಲ್ಲು ತೂರಿದ ಕಿಡಗೇಡಿಗಳು
ಠಾಣೆಗೆ ಮುತ್ತಿಗೆ ಹಾಕಿದ ಸಾವಿರಾರು ಜನರು, ಟಿಪ್ಪು ನಗರ ಬಿಗಿ ಬಂದೋ ಬಸ್ತ್
ದಾವಣಗೆರೆ: ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ ಘಟನೆ ಚನ್ನಗಿರಿಯಲ್ಲಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರ ವಿರುದ್ಧ ಮೃತನ ಸಂಬಂಧಿಕರು ಲಾಕಪ್ ಡೆತ್ ಎಂದು ಆರೋಪಿಸಿದ್ದಾರೆ. ಮಾತ್ರವಲ್ಲದೆ, ಸ್ಟೇಷನ್ ಮುಂದೆ ಪ್ರತಿಭಟನೆ ಮಾಡಿದ್ದಾರೆ.
ಚನ್ನಗಿರಿಯ ಟಿಪ್ಪು ನಗರದ ನಿವಾಸಿ ಆದೀಲ್ (33) ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಆತ ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದು ಚನ್ನಗಿರಿ ಪೊಲೀಸ್ ಸ್ಟೇಷನ್ಗೆ ನೂರಾರು ಮಂದಿ ಜಮಾಯಿಸಿದ್ದಾರೆ. ಡಿವೈಎಸ್ಪಿ ಪ್ರಶಾಂತ ಮುನ್ನೋಳ್ಳಿಗೆ ಜನರು ಮುತ್ತಿಗೆ ಹಾಕಿದ್ದಾರೆ.
ಇದನ್ನೂ ಓದಿ: ಐದು ಹೆಣ್ಣು ಮಕ್ಕಳು.. ಮುಂದಿನ ಮಗು ಗಂಡೋ ಹೆಣ್ಣೋ ತಿಳಿಯಲು ಮುಂದಾಗಿದ್ದ ಗಂಡನಿಗೆ ಶಾಕ್; ಆಗಿದ್ದೇನು..?
ಪೊಲೀಸರು ಕೊಲೆ ಮಾಡಿದ್ದಾರೆ ಅಂತ ಆರೋಪಿಸಿ ಆದೀಲ್ ಸಂಬಂಧಿಕರು ಸೇರಿ ಚನ್ನಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ಠಾಣೆ ಮುಂದೆ ಮೃತದೇಹ ಇಟ್ಟುಕೊಂಡು ಸಾವಿರಾಋಉ ಮಂದಿ ಪ್ರತಿಭಟಿಸುತ್ತಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟ ಆರೋಪಿ
ಪೊಲೀಸರ ಮೇಲು ಕಲ್ಲು ತೂರಿದ ಕಿಡಗೇಡಿಗಳು
ಠಾಣೆಗೆ ಮುತ್ತಿಗೆ ಹಾಕಿದ ಸಾವಿರಾರು ಜನರು, ಟಿಪ್ಪು ನಗರ ಬಿಗಿ ಬಂದೋ ಬಸ್ತ್
ದಾವಣಗೆರೆ: ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ ಘಟನೆ ಚನ್ನಗಿರಿಯಲ್ಲಿ ಬೆಳಕಿಗೆ ಬಂದಿದೆ. ಇದೀಗ ಪೊಲೀಸರ ವಿರುದ್ಧ ಮೃತನ ಸಂಬಂಧಿಕರು ಲಾಕಪ್ ಡೆತ್ ಎಂದು ಆರೋಪಿಸಿದ್ದಾರೆ. ಮಾತ್ರವಲ್ಲದೆ, ಸ್ಟೇಷನ್ ಮುಂದೆ ಪ್ರತಿಭಟನೆ ಮಾಡಿದ್ದಾರೆ.
ಚನ್ನಗಿರಿಯ ಟಿಪ್ಪು ನಗರದ ನಿವಾಸಿ ಆದೀಲ್ (33) ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಆತ ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದು ಚನ್ನಗಿರಿ ಪೊಲೀಸ್ ಸ್ಟೇಷನ್ಗೆ ನೂರಾರು ಮಂದಿ ಜಮಾಯಿಸಿದ್ದಾರೆ. ಡಿವೈಎಸ್ಪಿ ಪ್ರಶಾಂತ ಮುನ್ನೋಳ್ಳಿಗೆ ಜನರು ಮುತ್ತಿಗೆ ಹಾಕಿದ್ದಾರೆ.
ಇದನ್ನೂ ಓದಿ: ಐದು ಹೆಣ್ಣು ಮಕ್ಕಳು.. ಮುಂದಿನ ಮಗು ಗಂಡೋ ಹೆಣ್ಣೋ ತಿಳಿಯಲು ಮುಂದಾಗಿದ್ದ ಗಂಡನಿಗೆ ಶಾಕ್; ಆಗಿದ್ದೇನು..?
ಪೊಲೀಸರು ಕೊಲೆ ಮಾಡಿದ್ದಾರೆ ಅಂತ ಆರೋಪಿಸಿ ಆದೀಲ್ ಸಂಬಂಧಿಕರು ಸೇರಿ ಚನ್ನಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ಠಾಣೆ ಮುಂದೆ ಮೃತದೇಹ ಇಟ್ಟುಕೊಂಡು ಸಾವಿರಾಋಉ ಮಂದಿ ಪ್ರತಿಭಟಿಸುತ್ತಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ