ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಹೋಗಿದ್ದೇಕೆ ಡಿ.ಕೆ ಶಿವಕುಮಾರ್
ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರುತ್ತಾರಾ ಪೂರ್ಣಿಮಾ ಶ್ರೀನಿವಾಸ್
ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟಿದ್ದ ತೇಜಸ್ವಿನಿ ಅನಂತಕುಮಾರ್
ಬೆಂಗಳೂರು: ಆಪರೇಷನ್ ಹಸ್ತದ ಬಗ್ಗೆ ಬಿಸಿ, ಬಿಸಿ ಚರ್ಚೆ ಆಗುತ್ತಿರುವಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ನಾಯಕರಿಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಶಿವಕುಮಾರ್ ಫೋಟೋಗೆ ಸಖತ್ ಪೋಸ್ ಕೊಟ್ಟಿದ್ದಾರೆ.
ಪೂರ್ಣಿಮಾ ಶ್ರೀನಿವಾಸ್ ಅವರ ತಂದೆ ದಿವಂಗತ ಕೃಷ್ಣಪ್ಪ ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ರು. ಇತ್ತೀಚೆಗೆ ಬಿಜೆಪಿ ನಾಯಕಿ ಪೂರ್ಣಿಮಾ ಶ್ರೀನಿವಾಸ್ ಕೂಡ ಕಾಂಗ್ರೆಸ್ ಸೇರ್ಪಡೆ ವದಂತಿ ಚರ್ಚೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಪೂರ್ಣಿಮಾ ಶ್ರೀನಿವಾಸ್ ಅವರು ಇಂದು ಕೆ.ಆರ್ ಪುರಂನ ದೇವಸಂದ್ರದಲ್ಲಿರುವ ತಮ್ಮ ನಿವಾಸದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಿದ್ದಾರೆ. ಈ ವೇಳೆ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿದ್ದು, ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸದಲ್ಲೇ ಕೃಷ್ಣ ಜನ್ಮಾಷ್ಟಾಮಿಯ ವಿಶೇಷ ಭೋಜನವನ್ನು ಸವಿದಿದ್ದಾರೆ.
ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಭೇಟಿಯಾದ ತೇಜಸ್ವಿನಿ ಅನಂತಕುಮಾರ್; ಬಿಜೆಪಿ ನಾಯಕರಿಗೆ ಹೊಸ ಟೆನ್ಷನ್?
ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಭೇಟಿಯಾಗಿದ್ದೇನೆ. ನಾವು ಯಾವುದೇ ಆಪರೇಷನ್ ಮಾಡ್ತಿಲ್ಲ. ನಮ್ಮದು ಆಪರೇಷನ್ ಅಲ್ಲ ಕೋ-ಆಪರೇಷನ್ ಅಷ್ಟೇ. ಪೂರ್ಣಿಮಾ ತಂದೆ ಕೃಷ್ಣಪ್ಪ ಕಾಂಗ್ರೆಸ್ ಪಕ್ಷದ ಲೀಡರ್ ಆಗಿದ್ದರು. ಪೂರ್ಣಿಮಾ ಶ್ರೀನಿವಾಸ್ ಅವರ ಜೊತೆ ಇಂದು ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಕೂಡ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಸಾಲು, ಸಾಲು ಬಿಜೆಪಿ ನಾಯಕರನ್ನು ಡಿ.ಕೆ ಶಿವಕುಮಾರ್ ಮೀಟ್ ಆಗ್ತಿರೋದು ಟೆನ್ಷನ್ ತಂದಿರೋದಂತೂ ಸುಳ್ಳಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಹೋಗಿದ್ದೇಕೆ ಡಿ.ಕೆ ಶಿವಕುಮಾರ್
ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರುತ್ತಾರಾ ಪೂರ್ಣಿಮಾ ಶ್ರೀನಿವಾಸ್
ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟಿದ್ದ ತೇಜಸ್ವಿನಿ ಅನಂತಕುಮಾರ್
ಬೆಂಗಳೂರು: ಆಪರೇಷನ್ ಹಸ್ತದ ಬಗ್ಗೆ ಬಿಸಿ, ಬಿಸಿ ಚರ್ಚೆ ಆಗುತ್ತಿರುವಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ನಾಯಕರಿಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಶಿವಕುಮಾರ್ ಫೋಟೋಗೆ ಸಖತ್ ಪೋಸ್ ಕೊಟ್ಟಿದ್ದಾರೆ.
ಪೂರ್ಣಿಮಾ ಶ್ರೀನಿವಾಸ್ ಅವರ ತಂದೆ ದಿವಂಗತ ಕೃಷ್ಣಪ್ಪ ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ರು. ಇತ್ತೀಚೆಗೆ ಬಿಜೆಪಿ ನಾಯಕಿ ಪೂರ್ಣಿಮಾ ಶ್ರೀನಿವಾಸ್ ಕೂಡ ಕಾಂಗ್ರೆಸ್ ಸೇರ್ಪಡೆ ವದಂತಿ ಚರ್ಚೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಪೂರ್ಣಿಮಾ ಶ್ರೀನಿವಾಸ್ ಅವರು ಇಂದು ಕೆ.ಆರ್ ಪುರಂನ ದೇವಸಂದ್ರದಲ್ಲಿರುವ ತಮ್ಮ ನಿವಾಸದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಿದ್ದಾರೆ. ಈ ವೇಳೆ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿದ್ದು, ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸದಲ್ಲೇ ಕೃಷ್ಣ ಜನ್ಮಾಷ್ಟಾಮಿಯ ವಿಶೇಷ ಭೋಜನವನ್ನು ಸವಿದಿದ್ದಾರೆ.
ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಭೇಟಿಯಾದ ತೇಜಸ್ವಿನಿ ಅನಂತಕುಮಾರ್; ಬಿಜೆಪಿ ನಾಯಕರಿಗೆ ಹೊಸ ಟೆನ್ಷನ್?
ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಭೇಟಿಯಾಗಿದ್ದೇನೆ. ನಾವು ಯಾವುದೇ ಆಪರೇಷನ್ ಮಾಡ್ತಿಲ್ಲ. ನಮ್ಮದು ಆಪರೇಷನ್ ಅಲ್ಲ ಕೋ-ಆಪರೇಷನ್ ಅಷ್ಟೇ. ಪೂರ್ಣಿಮಾ ತಂದೆ ಕೃಷ್ಣಪ್ಪ ಕಾಂಗ್ರೆಸ್ ಪಕ್ಷದ ಲೀಡರ್ ಆಗಿದ್ದರು. ಪೂರ್ಣಿಮಾ ಶ್ರೀನಿವಾಸ್ ಅವರ ಜೊತೆ ಇಂದು ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಕೂಡ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಸಾಲು, ಸಾಲು ಬಿಜೆಪಿ ನಾಯಕರನ್ನು ಡಿ.ಕೆ ಶಿವಕುಮಾರ್ ಮೀಟ್ ಆಗ್ತಿರೋದು ಟೆನ್ಷನ್ ತಂದಿರೋದಂತೂ ಸುಳ್ಳಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ