Advertisment

ಮೃತ PSI ಪರಶುರಾಮ ಪತ್ನಿ 8 ತಿಂಗಳ ಗರ್ಭಿಣಿ.. ಪತಿಗಾಗಿ ಪ್ರತಿಭಟನೆಯ ಮೊರೆ ಹೋದ ಶ್ವೇತಾ

author-image
AS Harshith
Updated On
PSI ಪತ್ನಿಯ ಆರೋಪವನ್ನೂ ಪರಿಗಣಿಸ್ತೇನೆ, ಶೀಘ್ರದಲ್ಲೇ FIR -ಪರಶುರಾಮ್ ಸಾವಿನ ಬಗ್ಗೆ ಸರ್ಕಾರ ಹೇಳಿದ್ದೇನು..?
Advertisment
  • ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಹಠಾತ್ ನಿಧನ ಕೇಸ್​​
  • ಪತಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಪ್ರತಿಭಟನೆಯ ಮೊರೆ ಹೋದ ಪತ್ನಿ
  • ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗನ ಮೇಲೆ ಗಂಭೀರ ಆರೋಪ

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ  ನಿಧನರಾಗಿದ್ದಾರೆ. ಪತಿಯ ನಿಧನದ ಬಳಿಕ ಪತ್ನಿ ಶ್ವೇತಾ ನ್ಯಾಯಕ್ಕಾಗಿ ಪ್ರತಿಭಟನೆಯ ಮೊರೆ ಹೋಗಿದ್ದಾರೆ.

Advertisment

ಪತಿಯ ಸಾವಿಗೆ ನ್ಯಾಯ ದೊರಕಿಸಿ ಕೊಡಲು ಶ್ವೇತಾ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ಮಾಧ್ಯಮ ಮುಂದೆ ಮಾತನಾಡಿದ ಅವರು ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. 30/ 40 ಲಕ್ಷ ಹಣ ಕೇಳಿದ್ದಾರೆ. ಸಾಕಷ್ಟು ಭಾರೀ ಹಣ ಕೇಳ್ತಿರುವ ಬಗ್ಗೆ ‌ನನಗೆ ಹೇಳಿದ್ದಾರೆ. ಎಂಎಲ್ಎ ಹಾಗೂ ಎಂಎಲ್ಎ ಮಗ ಹಣ ಕೇಳಿದ್ದಾರೆ. ಅವರ ಇಬ್ಬರನ್ನೂ ಕರೆಸಿ ಅವರು ಅರೆಸ್ಟ್ ಮಾಡಬೇಕು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೆಳೆಯನ ಪತ್ನಿ ಜೊತೆ ಸಂಬಂಧ.. ಒಂಟಿ ಕೈ ವೆಂಕಟೇಶನ ಮಚ್ಚೇಟಿಗೆ ಬಲಿಯಾದ ವ್ಯಕ್ತಿ

ಪರಶುರಾಮ ಪತ್ನಿ ಶ್ವೇತಾ 8 ತಿಂಗಳ ಗರ್ಭಿಣಿ ಎಂದು ಹೇಳಿಕೊಂಡಿದ್ದಾರೆ. ಒಬ್ಬ ಪೊಲೀಸ್ ಅಧಿಕಾರಿಗೆ ಖಾಕಿ ಧರಿಸಿದವರೆ ಸಪೋರ್ಟ್ ಮಾಡ್ತಿಲ್ಲ ಎಂದು ಬೇಸರ ತೋಡಿಕೊಂಡಿದ್ದಾರೆ.

Advertisment

ಮಾಧ್ಯಮದ ಮುಂದೆ ಶ್ವೇತಾ, ‘ಯಾರೋ ಎಂಎಲ್ಎಗೆ ಸಪೋರ್ಟ್ ಮಾಡ್ತಿದ್ದಾರೆ. ಅವರು ದುಡ್ಡು ಕೊಡ್ತಾರೆ, ಆದ್ರೂ ಅವರಿಗೆ ಸಪೋರ್ಟ್ ಮಾಡ್ತಾರೆ. ಇನ್ನೂ ಎಷ್ಟು ದುಡ್ಡು ಕೊಟ್ಟು ಎಂಎಲ್ಎಯನ್ನು ಸಾಕ್ತಿರಾ?. ಹಗಲು ರಾತ್ರಿ, ಹೆಂಡ್ತಿ ಮಕ್ಕಳನ್ನ ಬಿಟ್ಟು ದುಡಿತೀರಾ.. ಯಾರಿಗೋಸ್ಕರ? ಎಂಎಲ್ಎಗೋಸ್ಕರ ದುಡಿತೀರಾ..? ಎಷ್ಟು ದಿನ ಎಂಎಲ್ಎಗೆ ಊಟ ಹಾಕ್ತಿರಾ..?. ದುಡ್ಡಿನ ಊಟ ಹಾಕ್ತಿದ್ದೀರಾ..? ಎಷ್ಟು ದಿನ ಹಾಕ್ತಿರಾ..? ಎಫ್ಐಆರ್ ದಾಖಲಿಸಿಕೊಂಡು ನಮಗೆ ನ್ಯಾಯ ಕೊಡಿಸಿ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ರಿಂದ 40 ಲಕ್ಷ ಹಣ ಕೇಳಿದ್ದಾರೆ.. PSI ಪರಶುರಾಮ ಪತ್ನಿಯಿಂದ ಗಂಭೀರ ಆರೋಪ

‘ತಪ್ಪು ಮಾಡಿದರೆ ಅವರನ್ನ ತೆಗೆಬೇಕಿತ್ತು. ಜಾತಿ ಕಾರಣಕ್ಕಾಗಿ ಏಕೆ ತೆಗೆದ್ದೀರಿ. ಈ ಜನರೇಷನ್ ನಲ್ಲೂ ಜಾತಿ ವ್ಯವಸ್ಥೆ ಏನು?. ನಾವು ಎಸ್ಸಿ ಆಗಬೇಕು ಅಂತ ದೇವರಲ್ಲಿ ಕೇಳ್ಕೊಂಡು ಬಂದಿರ್ತಿವಾ?. ಎಂಎಲ್ಎ ತಪ್ಪಿದೆ ಅವರು ಬರಬೇಕು. ಜಾತಿ, ಹಣಕ್ಕಾಗಿ ನನ್ನ ಗಂಡನ ಜೀವ ಹೋಯ್ತು. ನೀವೆಲ್ಲ ಒಬ್ಬ ದಕ್ಷ ಅಧಿಕಾರಿಯನ್ನ ಕಳೆದುಕೊಂಡಿದ್ದೀರಿ. ಎಸ್ಪಿ ಮೇಡಂ ನಮಗೆ ಎಫ್ಐಆರ್ ಕೊಡ್ತಿನಿ ಬನ್ನಿ ಅಂದ್ರು. ಅವರನ್ನ ನಂಬ್ಕೊಂಡು ಖಾಸಗಿ ಆಸ್ಪತ್ರೆಯಿಂದ ಇಲ್ಲಿಗೆ ಬಂದಿದ್ದೀವಿ. ನನ್ನ ಮಕ್ಕಳಿಗೆ ನಾನು ಏನಂತ ಹೇಳಬೇಕು. ಪೊಲೀಸ್ ಇಲಾಖೆಯಲ್ಲಿ ‌ಮಾನವೀಯತೆ ಇಲ್ಲ. ಎಂಟು ತಿಂಗಳ ಗರ್ಭಿಣಿ ಇದ್ದೀನಿ ರಸ್ತೆಯಲ್ಲಿ ಕುರಿಸಿದ್ದಾರೆ. ಪೋಲಿಸ್ ಅಧಿಕಾರಿಗೆ ನ್ಯಾಯ ಸಿಗ್ತಿಲ್ಲ. ಇನ್ನೂ ಸಾರ್ವಜನಿಕರಿಗೆ ಎಲ್ಲಿ ನ್ಯಾಯ ಸಿಗುತ್ತೆ’ ಎಂದು ಪರಶುರಾಮ ಪತ್ನಿ ಶ್ವೇತಾ ಹೇಳಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment