ಭಾರತದ ವಿಶ್ವಕಪ್ ಟ್ರೋಫಿ ಕನಸು ಭಗ್ನ, ಪ್ಲೇಯರ್ಸ್ ಬೇಸರ
ಅಹಮದಾಬಾದ್ನಲ್ಲಿ ನಡೆದ ವಿಶ್ವಕಪ್ನಲ್ಲಿ ಭಾರತಕ್ಕೆ ಸೋಲು
ರೋಹಿತ್ ಶರ್ಮಾ ನೇತೃತ್ವದ ತಂಡಕ್ಕೆ ಸಿದ್ದರಾಮಯ್ಯ ಹೇಳಿದ್ದೇನು?
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮುಗ್ಗರಿಸುವ ಭಾರತ ತಂಡಕ್ಕೆ ಎಲ್ಲೆಡೆಯಿಂದ ಅಭಿಮಾನಿಗಳು ಧೈರ್ಯ ಹೇಳುತ್ತಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವ ಫ್ಯಾನ್ಸ್ We are Proud of You ಎಂದು ಹೇಳುತ್ತಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಕೂಡ ರೋಹಿತ್ ಶರ್ಮಾ ಸಾರಥ್ಯದ ತಂಡಕ್ಕೆ ಪ್ರೋತ್ಸಾಹದ ಮಾತುಗಳನ್ನು ಹೇಳಿದ್ದಾರೆ. ಸೋಲು-ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ ಎಂದು ಶಕ್ತಿ ತುಂಬಿದ್ದಾರೆ.
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆದ್ದಿರುವ ಆಸ್ಟ್ರೇಲಿಯಾ ಟೀಮ್ಗೆ ಅಭಿನಂದನೆಗಳು. ಇಡೀ ವರ್ಲ್ಡ್ಕಪ್ ಟೂರ್ನಿಯಲ್ಲಿ ಭಾರತದ ಆಟಗಾರರು ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದಲ್ಲಿ ತೋರಿದ ನಿಮ್ಮ ಪ್ರದರ್ಶನ ಹಾಗೂ ಅಜೇಯ ಅಭಿಯಾನವು ಬಹುಕಾಲ ನೆನಪಲ್ಲಿ ಉಳಿದುಕೊಳ್ಳಲಿದೆ. ಸೋಲು-ಗೆಲುವು ಯಾವುದೇ ಆಟದ ಅವಿಭಾಜ್ಯ ಅಂಗವಾಗಿರುತ್ತದೆ. ವರ್ಲ್ಡ್ಕಪ್ ಫೈನಲ್ನಲ್ಲಿ ಎಡವಿ ಸೋಲಿನ ದುಃಖದಲ್ಲಿರುವ ನಮ್ಮ ತಂಡ ಕ್ಯಾಪ್ಟನ್ ರೋಹಿತ್ ಶರ್ಮಾ ಸಾರಥ್ಯದ ಹುಡುಗರ ಜೊತೆ ಎಲ್ಲರೂ ನಿಲ್ಲೋಣ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ಧೈರ್ಯ ಹೇಳಿದ್ದಾರೆ.
ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ.
ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ.
– ಮುಖ್ಯಮಂತ್ರಿ @siddaramaiah #WorldcupFinal #WorldCup… pic.twitter.com/0jADtM5717— CM of Karnataka (@CMofKarnataka) November 19, 2023
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಸೋಲೊಪ್ಪಿಕೊಂಡಿದೆ. ಇದರಿಂದ ಕ್ಯಾಪ್ಟನ್ ರೋಹಿತ್ ಶರ್ಮಾ ಸೇರಿದಂತೆ ಇಡೀ ಆಟಗಾರರು ಬೇಸರದಲ್ಲಿದ್ದಾರೆ. ಹೀಗಾಗಿಯೇ ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹದ ಮಾತುಗಳನ್ನು ಹೇಳಿದ್ದಾರೆ. ಫೈನಲ್ ಪಂದ್ಯದಲ್ಲಿ ಭಾರತ 50 ಓವರ್ಗಳಲ್ಲಿ 10 ವಿಕೆಟ್ ಕಳೆದುಕೊಂಡು 240 ರನ್ಗಳ ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ 43 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 241 ರನ್ ಗಳಿಸಿ ಗೆಲುವು ಪಡೆಯಿತು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಭಾರತದ ವಿಶ್ವಕಪ್ ಟ್ರೋಫಿ ಕನಸು ಭಗ್ನ, ಪ್ಲೇಯರ್ಸ್ ಬೇಸರ
ಅಹಮದಾಬಾದ್ನಲ್ಲಿ ನಡೆದ ವಿಶ್ವಕಪ್ನಲ್ಲಿ ಭಾರತಕ್ಕೆ ಸೋಲು
ರೋಹಿತ್ ಶರ್ಮಾ ನೇತೃತ್ವದ ತಂಡಕ್ಕೆ ಸಿದ್ದರಾಮಯ್ಯ ಹೇಳಿದ್ದೇನು?
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮುಗ್ಗರಿಸುವ ಭಾರತ ತಂಡಕ್ಕೆ ಎಲ್ಲೆಡೆಯಿಂದ ಅಭಿಮಾನಿಗಳು ಧೈರ್ಯ ಹೇಳುತ್ತಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವ ಫ್ಯಾನ್ಸ್ We are Proud of You ಎಂದು ಹೇಳುತ್ತಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಕೂಡ ರೋಹಿತ್ ಶರ್ಮಾ ಸಾರಥ್ಯದ ತಂಡಕ್ಕೆ ಪ್ರೋತ್ಸಾಹದ ಮಾತುಗಳನ್ನು ಹೇಳಿದ್ದಾರೆ. ಸೋಲು-ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ ಎಂದು ಶಕ್ತಿ ತುಂಬಿದ್ದಾರೆ.
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆದ್ದಿರುವ ಆಸ್ಟ್ರೇಲಿಯಾ ಟೀಮ್ಗೆ ಅಭಿನಂದನೆಗಳು. ಇಡೀ ವರ್ಲ್ಡ್ಕಪ್ ಟೂರ್ನಿಯಲ್ಲಿ ಭಾರತದ ಆಟಗಾರರು ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದಲ್ಲಿ ತೋರಿದ ನಿಮ್ಮ ಪ್ರದರ್ಶನ ಹಾಗೂ ಅಜೇಯ ಅಭಿಯಾನವು ಬಹುಕಾಲ ನೆನಪಲ್ಲಿ ಉಳಿದುಕೊಳ್ಳಲಿದೆ. ಸೋಲು-ಗೆಲುವು ಯಾವುದೇ ಆಟದ ಅವಿಭಾಜ್ಯ ಅಂಗವಾಗಿರುತ್ತದೆ. ವರ್ಲ್ಡ್ಕಪ್ ಫೈನಲ್ನಲ್ಲಿ ಎಡವಿ ಸೋಲಿನ ದುಃಖದಲ್ಲಿರುವ ನಮ್ಮ ತಂಡ ಕ್ಯಾಪ್ಟನ್ ರೋಹಿತ್ ಶರ್ಮಾ ಸಾರಥ್ಯದ ಹುಡುಗರ ಜೊತೆ ಎಲ್ಲರೂ ನಿಲ್ಲೋಣ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ಧೈರ್ಯ ಹೇಳಿದ್ದಾರೆ.
ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ.
ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ.
– ಮುಖ್ಯಮಂತ್ರಿ @siddaramaiah #WorldcupFinal #WorldCup… pic.twitter.com/0jADtM5717— CM of Karnataka (@CMofKarnataka) November 19, 2023
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಸೋಲೊಪ್ಪಿಕೊಂಡಿದೆ. ಇದರಿಂದ ಕ್ಯಾಪ್ಟನ್ ರೋಹಿತ್ ಶರ್ಮಾ ಸೇರಿದಂತೆ ಇಡೀ ಆಟಗಾರರು ಬೇಸರದಲ್ಲಿದ್ದಾರೆ. ಹೀಗಾಗಿಯೇ ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹದ ಮಾತುಗಳನ್ನು ಹೇಳಿದ್ದಾರೆ. ಫೈನಲ್ ಪಂದ್ಯದಲ್ಲಿ ಭಾರತ 50 ಓವರ್ಗಳಲ್ಲಿ 10 ವಿಕೆಟ್ ಕಳೆದುಕೊಂಡು 240 ರನ್ಗಳ ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ 43 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 241 ರನ್ ಗಳಿಸಿ ಗೆಲುವು ಪಡೆಯಿತು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ