ಆಸ್ಟ್ರೇಲಿಯಾ ಟೆಸ್ಟ್ ಸೀರೀಸ್​​; KL ರಾಹುಲ್​​ ಅಲ್ಲ, ಟೀಮ್​ ಇಂಡಿಯಾಗೆ ಕರ್ನಾಟಕ ಕ್ರಿಕೆಟರ್​ ಎಂಟ್ರಿ

author-image
Ganesh Nachikethu
Updated On
ಟೀಮ್​ ಇಂಡಿಯಾಗೆ ಮತ್ತೊಂದು ಶಾಕ್​​; ಮೊದಲ ಟೆಸ್ಟ್​ ಮಧ್ಯೆಯೇ ಕೈ ಕೊಟ್ಟ ಸ್ಟಾರ್​ ಪ್ಲೇಯರ್​​
Advertisment
  • ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ 5 ಪಂದ್ಯಗಳ ಟೆಸ್ಟ್​ ಸರಣಿ
  • ನಾಳೆಯಿಂದ ಪರ್ತ್​​ ಸ್ಟೇಡಿಯಮ್​​ನಲ್ಲಿ ಮೊದಲ ಟೆಸ್ಟ್​ ಪಂದ್ಯ ಶುರು
  • ಈ ಮಧ್ಯೆ ಟೀಮ್​ ಇಂಡಿಯಾಗೆ ಸ್ಟಾರ್​ ಕರ್ನಾಟಕ ಕ್ರಿಕೆಟರ್​ ಎಂಟ್ರಿ!

ನಾಳೆಯಿಂದ ಪರ್ತ್​​ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ಟೀಮ್​ ಇಂಡಿಯಾ, ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್​ ಶುರುವಾಗಲಿದೆ. ಈ ಮಹತ್ವದ ಮೊದಲ ಟೆಸ್ಟ್‌ಗೆ ಟೀಮ್​ ಇಂಡಿಯಾ ಭರ್ಜರಿ ತಯಾರಿ ನಡೆಸಿಕೊಂಡಿದೆ. ಹೇಗಾದ್ರೂ ಮಾಡಿ ಈ ಟೆಸ್ಟ್​ ಗೆಲ್ಲಲೇಬೇಕು ಎಂದು ಟೀಮ್​ ಇಂಡಿಯಾ ಜಿದ್ದಿಗೆ ಬಿದ್ದಿದೆ. ಇದರ ಮಧ್ಯೆ ಟೀಮ್​ ಇಂಡಿಯಾಗೆ ಗಾಯದ ಸಮಸ್ಯೆ ಕಾಡುತ್ತಿದೆ. ಹಲವು ಆಟಗಾರರು ತೀವ್ರವಾಗಿ ಗಾಯಕ್ಕೆ ತುತ್ತಾಗಿದ್ದಾರೆ.

ಇನ್ನು, ಟೀಮ್​ ಇಂಡಿಯಾ ಕ್ಯಾಪ್ಟನ್​ ರೋಹಿತ್​ ಶರ್ಮಾ ಅವರು ವೈಯಕ್ತಿಕ ಕಾರಣಗಳಿಂದಾಗಿ ಮೊದಲ ಟೆಸ್ಟ್​​ ಆಡುತ್ತಿಲ್ಲ. ಹಾಗಾಗಿ ಇವರ ಅನುಪಸ್ಥಿತಿಯಲ್ಲಿ ಜಸ್ಪ್ರಿತ್ ಬುಮ್ರಾ ಟೀಮ್​ ಇಂಡಿಯಾವನ್ನು ಲೀಡ್​ ಮಾಡಲಿದ್ದಾರೆ. ಮಿಡಲ್​ ಆರ್ಡರ್​ ಬ್ಯಾಟರ್​​​ ಶುಭ್ಮನ್​​ ಗಿಲ್​​ ಬೆರಳಿಗೆ ಬಲವಾದ ಪೆಟ್ಟು ಬಿದ್ದ ಕಾರಣ ಇವರು ಮೊದಲ ಟೆಸ್ಟ್​ನಿಂದಲೇ ದೂರ ಉಳಿದಿದ್ದಾರೆ. ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಟೀಮ್​ ಇಂಡಿಯಾಗೆ ಸ್ಟಾರ್​ ಕನ್ನಡಿಗ ದೇವದತ್​ ಪಡಿಕ್ಕಲ್​​ ಎಂಟ್ರಿ ನೀಡಿದ್ದಾರೆ.

ದೇವದತ್​​ ಪಡಿಕ್ಕಲ್​ಗೆ ಸ್ಥಾನ

ಇತ್ತೀಚೆಗೆ ನಡೆದ ಅನಧಿಕೃತ ಟೆಸ್ಟ್​ನಲ್ಲಿ ಟೀಮ್​ ಇಂಡಿಯಾ ಪರ ದೇವದತ್​ ಪಡಿಕ್ಕಲ್​ ಸ್ಥಿರ ಪ್ರದರ್ಶನ ನೀಡಿದ್ರು. ಹಾಗಾಗಿ ಇವರಿಗೆ ಟೀಮ್​ ಇಂಡಿಯಾದಲ್ಲಿ ಸ್ಥಾನ ಸಿಕ್ಕಿದ್ದು, ಮೂರನೇ ಕ್ರಮಾಂಕದಲ್ಲಿ ಶುಭ್ಮನ್​​ ಗಿಲ್​​ ಬದಲಿಗೆ ಬ್ಯಾಟ್​ ಬೀಸಲಿದ್ದಾರೆ.

ಪಡಿಕ್ಕಲ್​ ಡೆಬ್ಯೂ ಮಾಡಿದ್ದು ಯಾವಾಗ?

ಕನ್ನಡಿಗ ದೇವದತ್​ ಪಡಿಕ್ಕಲ್​​ ಇಂಗ್ಲೆಂಡ್​​ ವಿರುದ್ಧ ಟೆಸ್ಟ್​ ಸರಣಿಯಲ್ಲಿ ಟೀಮ್​​ ಇಂಡಿಯಾ ಪರ ಡೆಬ್ಯೂ ಮಾಡಿದ್ರು. ಆದ್ರೆ, ಇಂಗ್ಲೆಂಡ್​ ವಿರುದ್ಧ ಟೆಸ್ಟ್​ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕಾರಣ ಇವರಿಗೆ ಟೀಮ್​ ಇಂಡಿಯಾದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇತ್ತೀಚಿಗೆ ಭಾರತ ಎ ತಂಡದ ಪರ ಅನಧಿಕೃತ ಟೆಸ್ಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ರು. ಹಾಗಾಗಿ ದೇವದತ್​ ಪಡಿಕ್ಕಲ್​​ ಅವರಿಗೆ ಸ್ಥಾನ ಸಿಕ್ಕಿದೆ.

publive-image

ಇತ್ತೀಚೆಗಷ್ಟೇ ಸುಮಾರು 24 ವರ್ಷಗಳ ಬಳಿಕ ಮಹತ್ವದ ಟೆಸ್ಟ್​ ಸರಣಿಯಲ್ಲಿ ತವರಿನಲ್ಲೇ ಭಾರತ ತಂಡವನ್ನು ನ್ಯೂಜಿಲೆಂಡ್​​ 3-0 ಅಂತರದಿಂದ ಸೋಲಿಸಿ ದಾಖಲೆ ನಿರ್ಮಿಸಿದೆ. 3 ಪಂದ್ಯಗಳಲ್ಲೂ ಹೀನಾಯವಾಗಿ ಸೋತ ಭಾರತ ಮೊದಲ ಬಾರಿಗೆ ವೈಟ್​ವಾಶ್​ ಆಗಿದೆ. 1969ರ ನಂತರ ಟೀಮ್ ಇಂಡಿಯಾ ತವರಿನಲ್ಲಿ ಒಂದೇ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್‌ ಪಂದ್ಯಗಳು ಸೋತಿರುವುದು ಇದೇ ಮೊದಲು.

ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲ್ಲಲೇಬೇಕು

ಹೀನಾಯ ಸೋಲಿನ ಬೆನ್ನಲ್ಲೇ ಬಿಸಿಸಿಐ ಸೆಲೆಕ್ಷನ್​ ಕಮಿಟಿ ಅಧ್ಯಕ್ಷ ಅಜಿತ್​ ಅಗರ್ಕರ್​​​, ಕ್ಯಾಪ್ಟನ್​ ರೋಹಿತ್​ ಶರ್ಮಾ, ಮುಖ್ಯ ಕೋಚ್​​ ಗೌತಮ್​ ಗಂಭೀರ್​​​ ಸಭೆ ನಡೆಸಿ ​ಸುದೀರ್ಘ ಚರ್ಚೆ ಮಾಡಿದ್ರು. ಹೇಗಾದ್ರೂ ಮಾಡಿ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾ ಅರ್ಹತೆ ಪಡೆಯಬೇಕು ಎಂದು ಚರ್ಚಿಸಿದ್ರು. ಟೀಮ್​ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 5 ಟೆಸ್ಟ್​​ ಪಂದ್ಯಗಳ ಸರಣಿ ಗೆಲ್ಲಲೇಬೇಕು. ಅದರಲ್ಲೂ 4 ಪಂದ್ಯ ಗೆದ್ರೆ ಮಾತ್ರ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶ ಸಿಗಲಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಸರಣಿಗೆ ಟೆಸ್ಟ್​ ಸ್ಪೆಷಲಿಸ್ಟ್​​ ಎಂಟ್ರಿ; ಟೀಮ್​ ಇಂಡಿಯಾದಲ್ಲಿ ಕೊಹ್ಲಿ ಆಪ್ತನಿಗೆ ಹೊಸ ಜವಾಬ್ದಾರಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment