/newsfirstlive-kannada/media/post_attachments/wp-content/uploads/2024/10/BIGG-BOSS17.jpg)
ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಂಡು 5ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗಳು ಹೊಂದಿಕೊಳ್ಳಲು ಕಷ್ಟ ಪಡುತ್ತಿದ್ದಾರೆ.
ಇದನ್ನೂ ಓದಿ:ಬಿಗ್ ಬಾಸ್ನಿಂದ ಚೈತ್ರಾರನ್ನು ಹೊರಗೆ ಹಾಕಿ, ಇಲ್ಲದಿದ್ರೆ ಕಾರ್ಯಕ್ರಮ ಸ್ಥಗಿತ ಮಾಡಿಸುತ್ತೇನೆ ಎಂದ ವಕೀಲ!
ಬಿಗ್ಬಾಸ್ ಮನೆಗೆ ಬಂದ ಮೊದಲ ದಿನವೇ ಜಗಳ ಮಾಡಿಕೊಂಡಿದ್ದಾರೆ. ಕಳೆದ ಸೀಸನ್ನಲ್ಲಿ ನಡೆದ ಗಲಾಟೆ ರೀತಿಯಲ್ಲೇ ಬಿಗ್ಬಾಸ್ ಸ್ಪರ್ಧಿಗಳು ಆಡುತ್ತಿದ್ದಾರೆ. ಸಣ್ಣ ಪುಟ್ಟ ವಿಚಾರಕ್ಕೆ ಜಗಳ ವಾದ ವಿವಾದ ಮಾಡಿಕೊಳ್ಳುತ್ತಿದ್ದಾರೆ.
ಆದರೆ ಇದರ ಮಧ್ಯೆ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಧನರಾಜ್ ಆಚಾರ್ಯ ಗೋಲ್ಡನ್ ಸ್ಟಾರ್ ಗಣೇಶ್ ಅವರ ಡೈಲಾಂಗ್ ಅನ್ನು ಹೇಳಿ ಎಲ್ಲಾ ಸ್ಪರ್ಧಿಗಳ ಮನಸ್ಸನ್ನು ಗೆದ್ದುಕೊಂಡಿದ್ದಾರೆ. ಹೌದು, ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಬಳಿಕ ಧನರಾಜ್ ಆಚಾರ್ಯ ಕೊಂಚ ಡಲ್ ಆಗಿದ್ದರು. ಬಳಿಕ ಬಿಗ್ಬಾಸ್ ಧೈರ್ಯ ತುಂಬಿದ ಬಳಿಕ ಧನರಾಜ್ ಅವರು ಮತ್ತೆ ಟ್ರಾಕ್ಗೆ ಬಂದಿದ್ದಾರೆ.
View this post on Instagram
ಈ ಬಾರಿಯ ಬಿಗ್ಬಾಸ್ ಮನೆಯಲ್ಲಿ ನಗುವೆ ಇಲ್ಲದಂತೆ ಆಗಿಬಿಟ್ಟಿದೆ. ಏಕೆಂದರೆ ಒಂದೇ ವಾರಕ್ಕೆ ಬಿಗ್ಬಾಸ್ ಮನೆಯಲ್ಲಿ ಗಲಾಟೆ, ಮನಸ್ಥಾಪ ಹೀಗೆ ಸಾಕಷ್ಟು ವಿಚಾರಗಳಿಂದ ಸ್ಪರ್ಧಿಗಳು ಬೇಸರ ಆಗಿದ್ದರು. ಇದೀಗ ಧನರಾಜ್ ಅವರ ಕಾಮಿಡಿಗೆ ಸ್ಪರ್ಧಿಗಳು ಬಿದ್ದು ಬಿದ್ದು ನಕ್ಕಿದ್ದಾರೆ. ಮುಂಗಾರು ಮಳೆ ಸಿನಿಮಾ ಗೋಲ್ಡನ್ ಸ್ಟಾರ್ ಗಣೇಶ್ ಅವರ ಫೇಮಸ್ ಡೈಲಾಗ್ ಅನ್ನು ಬಿಗ್ಬಾಸ್ ಮನೆಯಲ್ಲಿ ರೀಕ್ರಿಯೇಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ