ತಾಲೂಕಿನ ಮೊರಬ ಗ್ರಾಮದಲ್ಲಿ ಎರಡು ಮಕ್ಕಳು, ತಾಯಿ ಸಾವು
ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ
ಮಕ್ಕಳನ್ನು ಕೊಲೆ ಮಾಡಿ, ತಾಯಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ?
ಧಾರವಾಡ: ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆಯು ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.
ಮೊರಬ ಗ್ರಾಮದಲ್ಲಿ ದರ್ಶನ್ (4), ಸುಮಾ (5) ಹತ್ಯೆಯಾದ ಮಕ್ಕಳು. ತಾಯಿ ಸಾವಿತ್ರಿ ಸರಕಾರ (32) ಮೊದಲು ತನ್ನ ಇಬ್ಬರು ಮಕ್ಕಳನ್ನ ಹತ್ಯೆ ಮಾಡಿದ್ದಾಳೆ. ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ತನ್ನ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹೀಗೆ ಮಾಡಿದ್ದಾಳೆ ಎಂದು ಹೇಳಲಾಗುತ್ತಿದೆ. ಪೊಲೀಸರ ತನಿಖೆಯಿಂದಲೇ ಸತ್ಯ ಏನೆಂಬುವುದು ಗೊತ್ತಾಗಲಿದೆ. ಈ ಸಂಬಂಧ ಸ್ಥಳಕ್ಕೆ ನವಲಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ತಾಲೂಕಿನ ಮೊರಬ ಗ್ರಾಮದಲ್ಲಿ ಎರಡು ಮಕ್ಕಳು, ತಾಯಿ ಸಾವು
ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ
ಮಕ್ಕಳನ್ನು ಕೊಲೆ ಮಾಡಿ, ತಾಯಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ?
ಧಾರವಾಡ: ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆಯು ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.
ಮೊರಬ ಗ್ರಾಮದಲ್ಲಿ ದರ್ಶನ್ (4), ಸುಮಾ (5) ಹತ್ಯೆಯಾದ ಮಕ್ಕಳು. ತಾಯಿ ಸಾವಿತ್ರಿ ಸರಕಾರ (32) ಮೊದಲು ತನ್ನ ಇಬ್ಬರು ಮಕ್ಕಳನ್ನ ಹತ್ಯೆ ಮಾಡಿದ್ದಾಳೆ. ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ತನ್ನ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹೀಗೆ ಮಾಡಿದ್ದಾಳೆ ಎಂದು ಹೇಳಲಾಗುತ್ತಿದೆ. ಪೊಲೀಸರ ತನಿಖೆಯಿಂದಲೇ ಸತ್ಯ ಏನೆಂಬುವುದು ಗೊತ್ತಾಗಲಿದೆ. ಈ ಸಂಬಂಧ ಸ್ಥಳಕ್ಕೆ ನವಲಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ