newsfirstkannada.com

ಪೊಲೀಸ್​ ಜೀಪ್​ ಏರಿದ ಶಿರೂರು ಶ್ವಾನ.. ತಬ್ಬಲಿಗಳ ರೋದನೆಗೆ ಮರುಗಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ

Share :

Published August 15, 2024 at 9:40am

Update August 15, 2024 at 9:44am

    ಶಿರೂರು ಗುಡ್ಡ ಕುಸಿತ ಸಂಭವಿಸಿ ಇಂದಿಗೆ ಒಂದು ತಿಂಗಳು

    ಮಾಲೀಕನನ್ನು ಕಳೆದುಕೊಂಡು ರೋದಿಸುತ್ತಿದ್ದ ಎರಡು ಶ್ವಾನ

    ಶ್ವಾನಗಳ ರೋದನೆಗೆ ಮರುಗಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ

ಶಿರೂರು ಗುಡ್ಡ ಕುಸಿತ ಸಂಭವಿಸಿ ಇಂದಿಗೆ ಒಂದು ತಿಂಗಳು. ಆದರೂ ಭೀಕರತೆ ನೋವು ಜನರ ಮನದಲ್ಲಿ ಮಾಸದಂತ ಗಾಯ ಮಾಡಿಬಿಟ್ಟಿದೆ. ನಾಪತ್ತೆಯಾದ ಮೂರು ಮೃತದೇಹಗಳು ಇನ್ನೂ ಕೂಡ ಪತ್ತೆಯಾಗಿಲ್ಲ. ಇದರ ನಡುವೆ ತನ್ನವರನ್ನು ಕಳೆದುಕೊಂಡ ಶ್ವಾನಗಳು ರಸ್ತೆ ಬದಿಯಲ್ಲೇ ಬೀಡು ಬಿಟ್ಟಿದ್ದು, ಕಳೆದ ಒಂದು ತಿಂಗಳಿನಿಂದ ರೋದಿಸುತ್ತಿವೆ. ಆದರೀಗ ಈ ಶ್ವಾನಗಳ ರೋದನೆ ಕಂಡು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮರುಗಿದ್ದಾರೆ. ಅದಕ್ಕೊಂದು ನೆಲೆ ಕಲ್ಪಿಸಿದ್ದಾರೆ.

ಮಾಲೀಕನನ್ನು ಕಳೆದುಕೊಂಡ ಮರುಗುತ್ತಿದ್ದ ಶ್ವಾನಗಳ ರೋದನೆಯನ್ನು ಕಂಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ ನಾರಾಯಣರವರು ಅವುಗಳನ್ನು ತಮ್ಮ ಮನೆಗೆ ಕರೆದೊಯ್ದಿದ್ದಾರೆ. ಶ್ವಾನಗಳಿಗೆ ಚಿಕಿತ್ಸೆ ಕೊಡಿಸಿ ಅವುಗಳಿಗೆ ಅಗತ್ಯವಾದ ತರಬೇತಿ ನೀಡಿ ಸರ್ಕಾರಿ ಸೇವೆಗೆ ಬಳಸಿಕೊಳ್ಳಲಿದ್ದಾರಂತೆ.

ಇದನ್ನೂ ಓದಿ: ಮನೆಗೆ ನುಗ್ಗಿ ಶಿಕ್ಷಕಿಯ ಹ*ತ್ಯೆ.. ಕುತ್ತಿಗೆ ಕೊಯ್ದು ಪರಾರಿಯಾದ ಮೂವರು ಹಂತಕರು

ಪೊಲೀಸ್​ ಜೀಪ್​ ಏರಿದ ಶ್ವಾನಗಳು

ಶಿರೂರು ಹೈವೇನಲ್ಲಿ ಹೋಟೆಲ್​ ನಡೆಸುತ್ತಿದ್ದ ಲಕ್ಷಣ್​​ ಅವರ ಕುಟುಂಬ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದ್ದರು. ಮಾಲೀಕ ಮತ್ತು ಅವರ ಮನೆಯವರು ಸಾವನ್ನಪ್ಪಿದ ಬಳಿಕ 2 ಶ್ವಾನಗಳು ಅನಾಥವಾಗಿದ್ದವು. ಅಲ್ಲೇ ರಸ್ತೆ ಬದಿಯಲ್ಲೇ ಓಡಾಡುತ್ತಿದ್ದವು. ದಾರಿ ಹೋಕರು ನೀಡಿದ ಆಹಾರ ಸೇವಿಸಿ ಅಲ್ಲೇ ಇರುತ್ತಿದ್ದವು. ಆದರೀಗ ಆ ಶ್ವಾನವನ್ನು ಪೊಲೀಸ್​​ ಕುಟುಂಬ ಸಾಕಲು ಮುಂದಾಗಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ: ಬೆಚ್ಚಿಬಿದ್ದ ಧಾರವಾಡ! 3 ವರ್ಷಗಳ ಬಳಿಕ ಮನೆಯಲ್ಲಿ ಸಿಕ್ತು ಮೃತದೇಹ.. ಕೊಳೆತು ಅಸ್ಥಿಪಂಜರವಾಗಿತ್ತು ದೇಹ!

ಎರಡು ಶ್ವಾನಗಳ ಪೈಕಿ ಒಂದು ಶ್ವಾನದ ಕಾಲಿಗೆ ಪೆಟ್ಟಾಗಿದ್ದು, ಅದಕ್ಕೆ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಎರಡು ಶ್ವಾನಗಳಿಗೆ ಅಗತ್ಯವಾದ ತರಬೇತಿ ಕೊಟ್ಟು ಸರ್ಕಾರಿ ಸೇವೆಗೆ ಬಳಸಲು ಮುಂದಾಗಿದ್ದಾರೆ. ಸದ್ಯ ಶ್ವಾನಗಳು ಪೊಲೀಸ್​ ಜೀಪ್​ ಏರಿದ್ದು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ ನಾರಾಯಣರವರ ಮನೆ ಸೇರಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪೊಲೀಸ್​ ಜೀಪ್​ ಏರಿದ ಶಿರೂರು ಶ್ವಾನ.. ತಬ್ಬಲಿಗಳ ರೋದನೆಗೆ ಮರುಗಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ

https://newsfirstlive.com/wp-content/uploads/2024/08/Shirur-13.jpg

    ಶಿರೂರು ಗುಡ್ಡ ಕುಸಿತ ಸಂಭವಿಸಿ ಇಂದಿಗೆ ಒಂದು ತಿಂಗಳು

    ಮಾಲೀಕನನ್ನು ಕಳೆದುಕೊಂಡು ರೋದಿಸುತ್ತಿದ್ದ ಎರಡು ಶ್ವಾನ

    ಶ್ವಾನಗಳ ರೋದನೆಗೆ ಮರುಗಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ

ಶಿರೂರು ಗುಡ್ಡ ಕುಸಿತ ಸಂಭವಿಸಿ ಇಂದಿಗೆ ಒಂದು ತಿಂಗಳು. ಆದರೂ ಭೀಕರತೆ ನೋವು ಜನರ ಮನದಲ್ಲಿ ಮಾಸದಂತ ಗಾಯ ಮಾಡಿಬಿಟ್ಟಿದೆ. ನಾಪತ್ತೆಯಾದ ಮೂರು ಮೃತದೇಹಗಳು ಇನ್ನೂ ಕೂಡ ಪತ್ತೆಯಾಗಿಲ್ಲ. ಇದರ ನಡುವೆ ತನ್ನವರನ್ನು ಕಳೆದುಕೊಂಡ ಶ್ವಾನಗಳು ರಸ್ತೆ ಬದಿಯಲ್ಲೇ ಬೀಡು ಬಿಟ್ಟಿದ್ದು, ಕಳೆದ ಒಂದು ತಿಂಗಳಿನಿಂದ ರೋದಿಸುತ್ತಿವೆ. ಆದರೀಗ ಈ ಶ್ವಾನಗಳ ರೋದನೆ ಕಂಡು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮರುಗಿದ್ದಾರೆ. ಅದಕ್ಕೊಂದು ನೆಲೆ ಕಲ್ಪಿಸಿದ್ದಾರೆ.

ಮಾಲೀಕನನ್ನು ಕಳೆದುಕೊಂಡ ಮರುಗುತ್ತಿದ್ದ ಶ್ವಾನಗಳ ರೋದನೆಯನ್ನು ಕಂಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ ನಾರಾಯಣರವರು ಅವುಗಳನ್ನು ತಮ್ಮ ಮನೆಗೆ ಕರೆದೊಯ್ದಿದ್ದಾರೆ. ಶ್ವಾನಗಳಿಗೆ ಚಿಕಿತ್ಸೆ ಕೊಡಿಸಿ ಅವುಗಳಿಗೆ ಅಗತ್ಯವಾದ ತರಬೇತಿ ನೀಡಿ ಸರ್ಕಾರಿ ಸೇವೆಗೆ ಬಳಸಿಕೊಳ್ಳಲಿದ್ದಾರಂತೆ.

ಇದನ್ನೂ ಓದಿ: ಮನೆಗೆ ನುಗ್ಗಿ ಶಿಕ್ಷಕಿಯ ಹ*ತ್ಯೆ.. ಕುತ್ತಿಗೆ ಕೊಯ್ದು ಪರಾರಿಯಾದ ಮೂವರು ಹಂತಕರು

ಪೊಲೀಸ್​ ಜೀಪ್​ ಏರಿದ ಶ್ವಾನಗಳು

ಶಿರೂರು ಹೈವೇನಲ್ಲಿ ಹೋಟೆಲ್​ ನಡೆಸುತ್ತಿದ್ದ ಲಕ್ಷಣ್​​ ಅವರ ಕುಟುಂಬ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದ್ದರು. ಮಾಲೀಕ ಮತ್ತು ಅವರ ಮನೆಯವರು ಸಾವನ್ನಪ್ಪಿದ ಬಳಿಕ 2 ಶ್ವಾನಗಳು ಅನಾಥವಾಗಿದ್ದವು. ಅಲ್ಲೇ ರಸ್ತೆ ಬದಿಯಲ್ಲೇ ಓಡಾಡುತ್ತಿದ್ದವು. ದಾರಿ ಹೋಕರು ನೀಡಿದ ಆಹಾರ ಸೇವಿಸಿ ಅಲ್ಲೇ ಇರುತ್ತಿದ್ದವು. ಆದರೀಗ ಆ ಶ್ವಾನವನ್ನು ಪೊಲೀಸ್​​ ಕುಟುಂಬ ಸಾಕಲು ಮುಂದಾಗಿದ್ದಾರೆ. ಆ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ: ಬೆಚ್ಚಿಬಿದ್ದ ಧಾರವಾಡ! 3 ವರ್ಷಗಳ ಬಳಿಕ ಮನೆಯಲ್ಲಿ ಸಿಕ್ತು ಮೃತದೇಹ.. ಕೊಳೆತು ಅಸ್ಥಿಪಂಜರವಾಗಿತ್ತು ದೇಹ!

ಎರಡು ಶ್ವಾನಗಳ ಪೈಕಿ ಒಂದು ಶ್ವಾನದ ಕಾಲಿಗೆ ಪೆಟ್ಟಾಗಿದ್ದು, ಅದಕ್ಕೆ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಎರಡು ಶ್ವಾನಗಳಿಗೆ ಅಗತ್ಯವಾದ ತರಬೇತಿ ಕೊಟ್ಟು ಸರ್ಕಾರಿ ಸೇವೆಗೆ ಬಳಸಲು ಮುಂದಾಗಿದ್ದಾರೆ. ಸದ್ಯ ಶ್ವಾನಗಳು ಪೊಲೀಸ್​ ಜೀಪ್​ ಏರಿದ್ದು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ ನಾರಾಯಣರವರ ಮನೆ ಸೇರಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More