/newsfirstlive-kannada/media/post_attachments/wp-content/uploads/2025/07/cm-siddu2.jpg)
ದೆಹಲಿ: ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ಜೋರಾಗಿದೆ. ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ಸಿದ್ದರಾಮಯ್ಯರ ಈ ಹೇಳಿಕೆ ತುಂಬಾನೇ ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ: ಕುತೂಹಲ ಘಟ್ಟ ತಲುಪಿದ ಅಧಿಕಾರದ ಆಟ.. ರಾಹುಲ್ ಮುಂದೆ ಸಿದ್ದು, ಡಿಕೆಶಿ ಪ್ರತ್ಯೇಕ ವಾದ, ಏನು ಗೊತ್ತಾ..?
ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, 5 ವರ್ಷ ನಾನೇ ಸಿಎಂ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಚರ್ಚೆ ಅನ್ನೋದು ಸುಳ್ಳು. ಸಿಎಂ ಬದಲಾವಣೆ ಚರ್ಚೆ ಆಗುತ್ತಿದೆ ಅನ್ನೋದು ತಪ್ಪು ಮಾಹಿತಿ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್ಗೆ ಹೆಚ್ಚು ಶಾಸಕರ ಬೆಂಬಲ ಇಲ್ಲ. ಡಿ.ಕೆ. ಶಿವಕುಮಾರ್ಗೆ ಇರೋ ಬೆಂಬಲಿಗರ ಸಂಖ್ಯೆ ಕಡಿಮೆ ಇದೆ. ಅವರಿಗೆ ಕೆಲವರು ಬೆಂಬಲ ನೀಡಿದ್ದಾರೆ. ಸುರ್ಜೇವಾಲಾ ಯಾರಿಗೂ ಅಧಿಕಾರ ಬದಲಾವಣೆ ಪ್ರಶ್ನೆ ಕೇಳಿಲ್ಲ. ಕೆಲವು ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಬಾಗೇಪಲ್ಲಿ ಕಾಂಗ್ರೆಸ್ MLA ಸುಬ್ಬಾರೆಡ್ಡಿಗೆ ಇ.ಡಿ ಶಾಕ್.. ಅಧಿಕಾರಿಗಳಿಂದ ತೀವ್ರ ಪರಿಶೀಲನೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ