newsfirstkannada.com

‘ತಮಿಳುನಾಡಿಗೆ ಸಮಸ್ಯೆ ಆಗಿದೆ, ಹಾಗಾಗಿ ಕಾವೇರಿ ನೀರು ಬಿಟ್ಟಿದ್ದೇವೆ’- ಡಿಕೆಶಿ ಸಮರ್ಥನೆ

Share :

22-08-2023

    ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕಾಂಗ್ರೆಸ್​ ಸರ್ಕಾರ

    ಕಾಂಗ್ರೆಸ್​ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ..!

    ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್​​ ಹೇಳಿದ್ದೇನು ಗೊತ್ತಾ?

ಹಾಸನ: ಸುಪ್ರೀಂಕೋರ್ಟ್​​ ನಿರ್ದೇಶನದ ಮೇರೆಗೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದೇವೆ ಎಂದು ಡಿಸಿಎಂ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್​​​ ಹೇಳಿದ್ದಾರೆ. ಕಾವೇರಿ ನೀರು ಬಿಡುಗಡೆ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಕುರಿತು ಮಾತಾಡುವಾಗ ಡಿ.ಕೆ ಶಿವಕುಮಾರ್​​ ಹೀಗೆಂದರು.

ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ಮಾಡಲಾಗುತ್ತಿದೆ. ಇದು ಅವರ ಅಸ್ತಿತ್ವದ ಪ್ರಶ್ನೆ. ಅವರಿಗೆ ಸಮಸ್ಯೆ ಆಗಿದೆ ಎಂದೇ ತಮಿಳುನಾಡಿನವರು ಸುಪ್ರೀಂಕೋರ್ಟ್​ಗೆ ಹೋಗಿದ್ದಾರೆ. ಸುಪ್ರೀಂಕೋರ್ಟ್​​ ಆದೇಶದ ಮೇರೆಗೆ ಕಾವೇರಿ ನೀರು ಬಿಡುಗಡೆ ಮಾಡಿದ್ದೇವೆ ಎಂದು ನಾನು ಈಗಾಗಲೇ ರೈತರಿಗೆ ಹೇಳಿದ್ದೇನೆ ಎಂದರು.

ತಮಿಳುನಾಡಿಗೆ ಸಮಸ್ಯೆಯಾಗಿದೆ, ಅದಕ್ಕೆ ನೀರು ಬಿಟ್ಟಿದ್ದೇವೆ. ನಾಳೆ ಈ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದೇವೆ. ಎಲ್ಲರೂ ಸಹಕಾರ ನೀಡಲಿದ್ದಾರೆ ಅನ್ನೋ ಭರವಸೆ ಇದೆ ಎಂದರು.

ಜೆಡಿಎಸ್​​ ಶಾಸಕರಿಗೆ ಬೆದರಿಕೆ ಆರೋಪ

ಹಾಗೆಯೇ ನಮ್ಮ ಶಾಸಕರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಆರೋಪಕ್ಕೆ ಡಿ.ಕೆ ಶಿವಕುಮಾರ್​ ಉತ್ತರ ನೀಡಿದ್ರು. ನಾನು ಬೆದರಿಕೆ ಹಾಕಿದ್ರೆ, ಪೊಲೀಸ್​ ಕಂಪ್ಲೈಂಟ್​​​ ಕೊಡಲಿ ಎಂದರು.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

‘ತಮಿಳುನಾಡಿಗೆ ಸಮಸ್ಯೆ ಆಗಿದೆ, ಹಾಗಾಗಿ ಕಾವೇರಿ ನೀರು ಬಿಟ್ಟಿದ್ದೇವೆ’- ಡಿಕೆಶಿ ಸಮರ್ಥನೆ

https://newsfirstlive.com/wp-content/uploads/2023/07/DK_Shivkumar-2.jpg

    ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕಾಂಗ್ರೆಸ್​ ಸರ್ಕಾರ

    ಕಾಂಗ್ರೆಸ್​ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ..!

    ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್​​ ಹೇಳಿದ್ದೇನು ಗೊತ್ತಾ?

ಹಾಸನ: ಸುಪ್ರೀಂಕೋರ್ಟ್​​ ನಿರ್ದೇಶನದ ಮೇರೆಗೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದೇವೆ ಎಂದು ಡಿಸಿಎಂ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್​​​ ಹೇಳಿದ್ದಾರೆ. ಕಾವೇರಿ ನೀರು ಬಿಡುಗಡೆ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಕುರಿತು ಮಾತಾಡುವಾಗ ಡಿ.ಕೆ ಶಿವಕುಮಾರ್​​ ಹೀಗೆಂದರು.

ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ಮಾಡಲಾಗುತ್ತಿದೆ. ಇದು ಅವರ ಅಸ್ತಿತ್ವದ ಪ್ರಶ್ನೆ. ಅವರಿಗೆ ಸಮಸ್ಯೆ ಆಗಿದೆ ಎಂದೇ ತಮಿಳುನಾಡಿನವರು ಸುಪ್ರೀಂಕೋರ್ಟ್​ಗೆ ಹೋಗಿದ್ದಾರೆ. ಸುಪ್ರೀಂಕೋರ್ಟ್​​ ಆದೇಶದ ಮೇರೆಗೆ ಕಾವೇರಿ ನೀರು ಬಿಡುಗಡೆ ಮಾಡಿದ್ದೇವೆ ಎಂದು ನಾನು ಈಗಾಗಲೇ ರೈತರಿಗೆ ಹೇಳಿದ್ದೇನೆ ಎಂದರು.

ತಮಿಳುನಾಡಿಗೆ ಸಮಸ್ಯೆಯಾಗಿದೆ, ಅದಕ್ಕೆ ನೀರು ಬಿಟ್ಟಿದ್ದೇವೆ. ನಾಳೆ ಈ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದೇವೆ. ಎಲ್ಲರೂ ಸಹಕಾರ ನೀಡಲಿದ್ದಾರೆ ಅನ್ನೋ ಭರವಸೆ ಇದೆ ಎಂದರು.

ಜೆಡಿಎಸ್​​ ಶಾಸಕರಿಗೆ ಬೆದರಿಕೆ ಆರೋಪ

ಹಾಗೆಯೇ ನಮ್ಮ ಶಾಸಕರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಆರೋಪಕ್ಕೆ ಡಿ.ಕೆ ಶಿವಕುಮಾರ್​ ಉತ್ತರ ನೀಡಿದ್ರು. ನಾನು ಬೆದರಿಕೆ ಹಾಕಿದ್ರೆ, ಪೊಲೀಸ್​ ಕಂಪ್ಲೈಂಟ್​​​ ಕೊಡಲಿ ಎಂದರು.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Load More