/newsfirstlive-kannada/media/post_attachments/wp-content/uploads/2025/06/DK-SURESH.jpg)
ಮಾಜಿ ಸಂಸದ ಡಿ.ಕೆ.ಸುರೇಶ್ಗೆ ಜಾರಿ ನಿರ್ದೇಶನಾಲಯದಿಂದ ಸಂಕಷ್ಟ ಎದುರಾಗಿದೆ. ಬಂಗಾರಿ ಐಶ್ವರ್ಯಾ ಗೌಡಳ ಕೋಟಿ, ಕೋಟಿ ವಂಚನೆ ಪ್ರಕರಣದಲ್ಲಿ ED ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಇಡಿ ಅಧಿಕಾರಿಗಳು ಜೂನ್ 19ರಂದು ಡಿ.ಕೆ.ಸುರೇಶ್ಗೆ ಇವತ್ತು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ಅಂತೆಯೇ ಬೆಳಗ್ಗೆ 11 ಗಂಟೆಗೆ ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಹಾಜರಾಗುವ ಸಾಧ್ಯತೆ ಇದೆ. ನಾನು ಡಿ.ಕೆ. ಸುರೇಶ್ ಅವರ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಕೋಟಿ ಕೋಟಿ ವಂಚನೆ ಮಾಡಿದ್ದಾಳೆ ಎಂಬ ಆರೋಪ ಇದೆ.
ಇದನ್ನೂ ಓದಿ: ಎತ್ತಿನ ಹೊಳೆ ಯೋಜನಾ ವೆಚ್ಚ ಡಬಲ್.. ಪದೇ ಪದೆ ಕಾಮಗಾರಿಗೆ ಡೆಡ್ಲೈನ್ ಕೊಡ್ತಿದ್ದರೂ ವಿಳಂಬ ಆಗ್ತಿರೋದ್ಯಾಕೆ..?
ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಐಶ್ವರ್ಯ ಗೌಡ ಜೊತೆಗೆ ಡಿ.ಕೆ.ಸುರೇಶ್ಗೆ ಆರ್ಥಿಕ ವ್ಯವಹಾರಗಳ ಸಂಬಂಧ ಇದೆಯಾ ಎಂಬ ಅನುಮಾನ EDಗೆ ಇದೆ. ಹೀಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಸುರೇಶ್, ನಾನು ಯಾವುದೇ ಅಕೌಂಟ್ ಟ್ರಾನ್ಸಾಕ್ಷನ್ ನಡೆಸಿರಲಿಲ್ಲ. ಅವರು ನಮ್ಮ ಕ್ಷೇತ್ರದವರು. ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಎನ್ನುವ ಹೆಸರಲ್ಲಿ ಹೀಗೆಲ್ಲ ಮಾಡಿದ್ದಾರೆಂಬುದು ತಿಳಿದ ಕೂಡಲೇ ಸ್ವತಃ ನಾನೇ ದೂರು ಕೊಟ್ಟಿದ್ದೇನೆ. ಇ.ಡಿ. 7 ರಿಂದ 8 ದಾಖಲೆಗಳನ್ನು ಕೇಳಿದೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಅದನ್ನ ಹೋದಾಗ ಅಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ದೆಹಲಿ ಪ್ರವಾಸದಲ್ಲಿ ಸಿದ್ದರಾಮಯ್ಯ ರಾಷ್ಟ್ರಪತಿಗಳ ಭೇಟಿ ಆಗಲು ನಿರ್ಧರಿಸಿದ್ದು ಏಕೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ