/newsfirstlive-kannada/media/post_attachments/wp-content/uploads/2025/06/GOVINDARAJ-3.jpg)
ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೆ.ಗೋವಿಂದರಾಜ್ಗೆ ಸರ್ಕಾರ ಗೇಟ್ಪಾಸ್ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂ ಮುಂದೆ ಕಾಲ್ತುಳಿತ ಸಂಭವಿಸಿ 11 ಜನ ಜೀವ ಕಳೆದುಕೊಂಡ ಬೆನ್ನಲ್ಲೇ, ಸರ್ಕಾರ ಗೊವಿಂದರಾಜ್ಗೆ ಕೊಕ್ ನೀಡಿದೆ.
ಇದನ್ನೂ ಓದಿ: ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್ ಮೇಲೆ ತಿರಂಗ ಧ್ವಜ ಹಾರಿಸಿದ ಪ್ರಧಾನಿ; ಮೋದಿ ಸಂಭ್ರಮದ ಕ್ಷಣಗಳು ಇಲ್ಲಿದೆ!
ಆರೋಪ ಏನು..?
ಕೆಎಸ್ಸಿಎ ಪರವಾಗಿ ಸಿಎಂ ಮೇಲೆ ಒತ್ತಡ ಹಾಕಿ ಸನ್ಮಾನ ಕಾರ್ಯಕ್ರಮ ನಡೆಯಲು ಕಾರಣರಾಗಿದ್ದರೆಂಬ ಆರೋಪ ಕೆ.ಗೋವಿಂದರಾಜ್ ಮೇಲಿದೆ. ಜೂನ್ 3 ರಂದು ಐಪಿಎಲ್ ಫೈನಲ್ ಮ್ಯಾಚ್ ನಡೆದಿತ್ತು. ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ಬೆನ್ನಲ್ಲೇ ರಾಜ್ಯ ಸರ್ಕಾರದ ವತಿಯಿಂದ ಮಾರನೇಯ ದಿನ ಅಂದರೆ ಜೂನ್ 4ರ ಮಧ್ಯಾಹ್ನ ವಿಧಾನಸೌಧ ಮೆಟ್ಟಿಲುಗಳ ಮೇಲೆ ಸನ್ಮಾನ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಇಲ್ಲಿ ಆರ್ಸಿಬಿ ತಂಡ ಹಾಗೂ ಮ್ಯಾನೇಜ್ಮೆಂಟ್ಗೆ ಸರ್ಕಾರದ ವತಿಯಿಂದ ಸನ್ಮಾನ ಮಾಡಲಾಯಿತು.
ಇದನ್ನೂ ಓದಿ: ರಂಗಧಾಮ ಕೆರೆಯಲ್ಲಿ ದಾರುಣ ಘಟನೆ.. ಇಬ್ಬರು ಮುದ್ದಾದ ಮಕ್ಕಳನ್ನು ಕೆರೆಗೆ ತಳ್ಳಿ ತಾಯಿ ಆತ್ಮಹತ್ಯೆ
ಇತ್ತ ಆರ್ಸಿಬಿ ಮ್ಯಾನೇಜ್ಮೆಂಟ್ ಹಾಗೂ ಕೆಎಸ್ಸಿಎ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಕ್ಟರಿ ಮೆರವಣಿಗೆ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಆರ್ಸಿಬಿ ಅಭಿಮಾನಿಗಳನ್ನ ಆಹ್ವಾನಿಸಿತ್ತು. ಯಾವುದೇ ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಆಯೋಜನೆಗೊಂಡ ಪರಿಣಾಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಇದರಿಂದ 11 ಮಂದಿಯ ಜೀವ ಹೋಗಿದೆ. ಬೆನ್ನಲ್ಲೇ ಸರ್ಕಾರ ಹಾಗೂ ಆರ್ಸಿಬಿ, ಕೆಎಸ್ಸಿಎ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: 2 ವರ್ಲ್ಡ್ ಕಪ್ ವಿನ್ನರ್.. IPL ಸ್ಟಾರ್ ಪ್ಲೇಯರ್ ಪಿಯೂಷ್ ಚಾವ್ಲಾ ನಿವೃತ್ತಿ ಘೋಷಣೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ