Advertisment

ದರ್ಶನ್ ಫ್ಯಾನ್ಸ್‌ಗಳಿಂದ ಕೊಲೆ ಬೆದರಿಕೆ.. ಪೊಲೀಸ್ ಮೊರೆ ಹೋದ ರಾಜ್‌ ಕುಮಾರ್‌ ಅಭಿಮಾನಿ; ಆಗಿದ್ದೇನು?

author-image
admin
Updated On
ದರ್ಶನ್ ಫ್ಯಾನ್ಸ್‌ಗಳಿಂದ ಕೊಲೆ ಬೆದರಿಕೆ.. ಪೊಲೀಸ್ ಮೊರೆ ಹೋದ ರಾಜ್‌ ಕುಮಾರ್‌ ಅಭಿಮಾನಿ; ಆಗಿದ್ದೇನು?
Advertisment
  • ಮೊಬೈಲ್‌ ನಂಬರ್‌ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ
  • ‘ಡಿ ಬಾಸ್ ಅಭಿಮಾನಿಗಳ ಕೈಗೆ ಸಿಕ್ಕರೆ ನಿನ್ನನ್ನು ಮುಗಿಸಿ ಬಿಡ್ತೀವಿ’
  • ಸೈಬರ್ ಠಾಣೆಗೆ ಭೇಟಿ ನೀಡಿ ದೂರು ಕೊಟ್ಟ ರಾಜ್‌ಕುಮಾರ್ ಅಭಿಮಾನಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆದ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ತಮ್ಮ ನೆಚ್ಚಿನ ನಟ ನ್ಯಾಯಾಂಗ ಬಂಧನದಲ್ಲಿರುವಾಗ ಅವರ ಅಭಿಮಾನಿ ಬಳಗಕ್ಕೆ ದಿಕ್ಕೇ ತೋಚದಂತಾಗಿದೆ. ಈ ಮಧ್ಯೆ ನಟ ದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆಯ ಆರೋಪ ಕೇಳಿ ಬಂದಿದೆ.

Advertisment

publive-image

ಡಾ. ರಾಜ್ ಕುಮಾರ್ ಅಭಿಮಾನಿ ಯೋಗಿ ಎಂಬುವವರು ದರ್ಶನ್ ಅಭಿಮಾನಿಗಳಿಂದ ತನಗೆ ಕೊಲೆ ಬೆದರಿಕೆ ಇದೆ ಎಂದು ಪೊಲೀಸರ ಮೊರೆ ಹೋಗಿದ್ದಾರೆ. ಪಶ್ಚಿಮ ವಿಭಾಗದ ಸೈಬರ್ ಠಾಣೆಗೆ ಭೇಟಿ ನೀಡಿದ ಯೋಗಿ ಅವರು ದೂರು ಕೂಡ ಸಲ್ಲಿಸಿದ್ದಾರೆ.

ಇದನ್ನೂ ಓದಿ: ದರ್ಶನ್​ರನ್ನ ಜೈಲಿಗೆ ಹಾಕಿದ ಕರ್ನಾಟಕ ಪೊಲೀಸರಿಗೆ ಅಭಿನಂದನೆ.. ಕಮಿಷನರ್​ಗೆ ಸ್ಪೆಷಲ್ ಥ್ಯಾಂಕ್ಸ್ 

ಮೊಬೈಲ್‌ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಅಲ್ಲದೇ ಫೇಸ್ ಬುಕ್‌ನಲ್ಲಿ ನಕಲಿ ಅಕೌಂಟ್‌ಗಳನ್ನ ತೆರೆದು ವಾರ್ನಿಂಗ್ ಕೊಡುತ್ತಿದ್ದಾರೆ. ಡಿ ಬಾಸ್ ಅಭಿಮಾನಿಗಳ ಕೈಗೆ ಸಿಕ್ಕರೆ ನಿನ್ನನ್ನು ಮುಗಿಸಿ ಬಿಡ್ತೀವಿ ಎಂದು ಮೆಸೇಜ್ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Advertisment

ಇದನ್ನೂ ಓದಿ: ರೇಣುಕಾಸ್ವಾಮಿ ಮನೆಯಲ್ಲೇ ದರ್ಶನ್ ಪರ ಮಾತು.. ಕೆಂಗಣ್ಣಿಗೆ ಗುರಿಯಾದ ಸ್ಯಾಂಡಲ್​ವುಡ್​ ನಟ..! 

ಕೊಲೆ ಬೆದರಿಕೆಯ ಜೊತೆಗೆ ಯೋಗಿ ಫೋಟೋ ಬಳಸಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಲಾಗುತ್ತಿದೆ. ರಂಗಾರೆಡ್ಡಿ, ನಾಗರಾಜ್ ದಚ್ಚು, ವಿಶ್ವಾಸ್ ವಿಶ್ವ ವಿಶು, ವೀರೇಶ್ ವೀರು, ಡಿ ಬಾಸ್ ಅಭಿಮಾನಿ, ಡಿ ಬಾಸ್ ಅಡ್ಡ, ಕಿಂಗ್ ಬಸವ ಎಂಬ ಫೇಸ್‌ಬುಕ್‌ ಖಾತೆಗಳಿಂದ ಬೆದರಿಕೆ ಮೆಸೇಜ್ ಬಂದಿದೆ ಎಂದು ಕನ್ನಡಿಗ ಯೋಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment