Advertisment

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು.. ಬಟ್ಟೆ ಅಂಗಡಿ ಮಾಲೀಕ ಸಾವು

author-image
AS Harshith
Updated On
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು.. ಬಟ್ಟೆ ಅಂಗಡಿ ಮಾಲೀಕ ಸಾವು
Advertisment
  • ಇಂದು ಬೆಳಗ್ಗಿನ ಜಾವ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಿಯಾ ಕಾರು
  • ಕಾರಿನಲ್ಲಿದ್ದ ಓರ್ವ ಸಾವು, ಮತ್ತೋರ್ವ ದಡ ಸೇರಿ ಬಚಾವ್​
  • ಕಾರ್​ನೊಳಗೆ ಸಿಲುಕಿ ಸಾವನ್ನಪ್ಪಿದ ಬಟ್ಟೆ ಅಂಗಡಿ ಮಾಲೀಕ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್​ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್​​ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.

Advertisment

ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್​ ಅಲ್ಲೇ ಸಾವನ್ನಪ್ಪಿದ್ದಾರೆ.

publive-image

ದಿನೇಶ್ ಹಾಗೂ ಸಂತೋಷ್ ಅಂಬಳೆ ಮೂಲದವರು. ದಿನೇಶ್​​ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು.

publive-image

ಇದನ್ನೂ ಓದಿ: RCB: ಒಂದಲ್ಲಾ, ಎರಡಲ್ಲಾ.. ಆರ್​ಸಿಬಿಗೆ ಅರಗಿಸಿಕೊಳ್ಳಲಾಗದ 8 ಸತ್ಯಗಳಿವು

Advertisment

ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಸಂತೋಷ್​ ಮೃತದೇಹವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment