newsfirstkannada.com

RRT ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬಂದ ಕಾಡಾನೆ.. ಈ ದೃಶ್ಯ ನೋಡಿದ್ರೆ ಭಯವಾಗುತ್ತೆ!

Share :

19-06-2023

    ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ

    ಕಾಡಾನೆಯಿಂದ ತಪ್ಪಿಸಿಕೊಳ್ಳುತ್ತಿರುವ ಸಿಬ್ಬಂದಿಯ ದೃಶ್ಯ ವೈರಲ್​

    ಕಾಡಾನೆ ಚಲನವಲನ ಗಮನಿಸುತ್ತಿದ್ದ ಸಮಯದಲ್ಲಿ ಎದುರಾಯ್ತು ಘಟನೆ

ಹಾಸನ: ಒಂಟಿ ಸಲಗವೊಂದು ಕ್ಷಿಪ್ರ ಪ್ರತಿಕ್ರಿಯೆ ತಂಡದ (RRT) ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಕಲೇಶಪುರ ತಾಲ್ಲೂಕಿನ ಕಿರೆಹಳ್ಳಿ ಗ್ರಾಮದಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ.

ಅರಣ್ಯ ಇಲಾಖೆಯ ಆರ್‌ಆರ್‌ಟಿ ಸಿಬ್ಬಂದಿ ಕಾಡಾನೆ ಚಲನವಲನ ಗಮನಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾಫಿ ತೋಟದೊಳಗಿಂದ ಬಂದ ಕಾಡಾನೆ ಕೂಡಲೇ ಆರ್‌ಆರ್‌ಟಿ ಸಿಬ್ಬಂದಿ ಪ್ರವೀಣ್ ಎಂಬಾತನನ್ನು ಅಟ್ಟಿಸಿಕೊಂಡು ಹೋಗುತ್ತದೆ.

ಪ್ರವೀಣ್ ತನ್ನತ್ತ ಬರುವ ಕಾಡಾನೆಯಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಾನೆ. ಅಂದಹಾಗೆಯೇ ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗುವ ದೃಶ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

RRT ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬಂದ ಕಾಡಾನೆ.. ಈ ದೃಶ್ಯ ನೋಡಿದ್ರೆ ಭಯವಾಗುತ್ತೆ!

https://newsfirstlive.com/wp-content/uploads/2023/06/Elephant-3.jpg

    ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ

    ಕಾಡಾನೆಯಿಂದ ತಪ್ಪಿಸಿಕೊಳ್ಳುತ್ತಿರುವ ಸಿಬ್ಬಂದಿಯ ದೃಶ್ಯ ವೈರಲ್​

    ಕಾಡಾನೆ ಚಲನವಲನ ಗಮನಿಸುತ್ತಿದ್ದ ಸಮಯದಲ್ಲಿ ಎದುರಾಯ್ತು ಘಟನೆ

ಹಾಸನ: ಒಂಟಿ ಸಲಗವೊಂದು ಕ್ಷಿಪ್ರ ಪ್ರತಿಕ್ರಿಯೆ ತಂಡದ (RRT) ಸಿಬ್ಬಂದಿಯನ್ನು ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಕಲೇಶಪುರ ತಾಲ್ಲೂಕಿನ ಕಿರೆಹಳ್ಳಿ ಗ್ರಾಮದಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ.

ಅರಣ್ಯ ಇಲಾಖೆಯ ಆರ್‌ಆರ್‌ಟಿ ಸಿಬ್ಬಂದಿ ಕಾಡಾನೆ ಚಲನವಲನ ಗಮನಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾಫಿ ತೋಟದೊಳಗಿಂದ ಬಂದ ಕಾಡಾನೆ ಕೂಡಲೇ ಆರ್‌ಆರ್‌ಟಿ ಸಿಬ್ಬಂದಿ ಪ್ರವೀಣ್ ಎಂಬಾತನನ್ನು ಅಟ್ಟಿಸಿಕೊಂಡು ಹೋಗುತ್ತದೆ.

ಪ್ರವೀಣ್ ತನ್ನತ್ತ ಬರುವ ಕಾಡಾನೆಯಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಾನೆ. ಅಂದಹಾಗೆಯೇ ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗುವ ದೃಶ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More