ಹೆಚ್.ಡಿ.ದೇವೇಗೌಡ ವಿರುದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯ
ದೇವೇಗೌಡ ನೆರಳಿಗೆ ಹೋಗಿ ಬದುಕಿ ಚೆನ್ನಾಗಿ ಆದವರು ಯಾರೂ ಇಲ್ಲ!
ಪ್ರಧಾನಿ ಹೇಳೋ ಸುಳ್ಳು ಈ ಪ್ರಪಂಚದಲ್ಲೇ ಕೇಳಿರಲಿಲ್ಲ- ರಮೇಶ್ ಕುಮಾರ್
ಕೋಲಾರ: ಈ ದೇಶಕ್ಕೆ ಹಿಡಿದಿರುವ ಶನಿ ಎಂದರೆ ಅದು ಮೋದಿ. ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ ಅಂತಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಹರಿಬಿಟ್ಟಿದ್ದಾರೆ.
ಇದನ್ನೂ ಓದಿ: ಕತ್ತೆಗಳ ಹಾಲಿನಿಂದ ಲಕ್ಷ.. ಲಕ್ಷ ಹಣ ಸಂಪಾದನೆ.. ಈ ವ್ಯಕ್ತಿಗೆ ಕರ್ನಾಟಕ ಸೇರಿ ಹಲವು ರಾಜ್ಯಗಳಿಂದ ಡಿಮ್ಯಾಂಡ್
ಕೋಲಾರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಪರ ಪ್ರಚಾರ ಸಭೆಯಲ್ಲಿ ಮಾತಾಡಿದ ಅವರು, ದೇವೇಗೌಡ ನೆರಳಿಗೆ ಹೋಗಿ ಬದುಕಿ ಚೆನ್ನಾಗಿ ಆದವರು ಯಾರೂ ಇಲ್ಲ. ಚೆನ್ನಾಗಿ ಬದುಕಿದವರಿಗೇನು ಈ ಗತಿ ಬಂತು ಎಂದು ನನಗೆ ದುಃಖ. ಇರಲಿ ಅಂತ ರೈತನ ಮಗ ಎಂದು ಪ್ರಧಾನಿ ಮಾಡಿದ್ದೆವು. ಆತನ ಮಗ ಮುಖ್ಯಮಂತ್ರಿಯಾಗಿದ್ದ. ಇವರು ಸೇರಿದ್ದು ಬಿಜೆಪಿ ಜೊತೆಗೆ. ಒಬ್ಬ ಮಾಜಿ ಪ್ರಧಾನ ಮಂತ್ರಿ, ಒಬ್ಬ ಮಾಜಿ ಮುಖ್ಯಮಂತ್ರಿ, ಮೂರು ಸೀಟುಗಳನ್ನ ತೆಗೆದುಕೊಂಡಿದಾರೆ ಈ ಬಾರಿ. ಅದರಲ್ಲೂ ಒಂದು ಮಗನಿಗೆ ಇನ್ನೊಂದು ಮೊಮ್ಮಗನಿಗೆ. ಅಳಿಯನನ್ನ ನಿಮ್ಮ ಲೆಕ್ಕದಲ್ಲಿ ಕೊಡಿ ಎಂದು ಅಲ್ಲಿಗೆ ಕಳಿಸಿದ್ದರು. ಇವರ ಹಣೆಬರಹಕ್ಕೆ ಅವರ ಬಳಿ ಹೋಗಿ ಸಲಾಂ ಹೊಡೆಯುತ್ತಿದ್ದಾರೆ ಎಂದರು.
ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂನ್ 4ಕ್ಕೆ ನಾವು ಕಾಯುತ್ತಿದ್ದೇವೆ. ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು ಆ ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾ ಗಾಂಧಿ ಕೂತಿದ್ದ ಸೀಟಲ್ಲಿ ಬಂದು ಕೂತುಬಿಟ್ಟೆ. ಎಲ್ಲಾ ಜಾತಿ ಜನಾಂಗದವರಿಗೆ ಆತ್ಮಸ್ಥೈರ್ಯ ತುಂಬಿದ್ದರು ಇಂದಿರಾ ಗಾಂಧಿ. ಎಂತಹವರ ಜಾಗಕ್ಕೆ ಎಂತಹವನು ಬಂದು ಕೂತಿದ್ದಾನೆ. ಸಂತೆಯಲ್ಲಿ ಹಾವಾಡಿಗ ಸುಳ್ಳು ಹೇಳೋದು ಕೇಳಿದ್ದೆವು. ಪ್ರಧಾನಿ ಸುಳ್ಳು ಹೇಳೊದು ಈ ಪ್ರಪಂಚದಲ್ಲಿಯೇ ಕೇಳಿರಲಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಬರುತ್ತೆ ಗೌತಮ್ ಗೆದ್ದೆ ಗೆಲ್ಲುತ್ತಾನೆ ಎಂದು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೆಚ್.ಡಿ.ದೇವೇಗೌಡ ವಿರುದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯ
ದೇವೇಗೌಡ ನೆರಳಿಗೆ ಹೋಗಿ ಬದುಕಿ ಚೆನ್ನಾಗಿ ಆದವರು ಯಾರೂ ಇಲ್ಲ!
ಪ್ರಧಾನಿ ಹೇಳೋ ಸುಳ್ಳು ಈ ಪ್ರಪಂಚದಲ್ಲೇ ಕೇಳಿರಲಿಲ್ಲ- ರಮೇಶ್ ಕುಮಾರ್
ಕೋಲಾರ: ಈ ದೇಶಕ್ಕೆ ಹಿಡಿದಿರುವ ಶನಿ ಎಂದರೆ ಅದು ಮೋದಿ. ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ ಅಂತಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಾಲಿಗೆ ಹರಿಬಿಟ್ಟಿದ್ದಾರೆ.
ಇದನ್ನೂ ಓದಿ: ಕತ್ತೆಗಳ ಹಾಲಿನಿಂದ ಲಕ್ಷ.. ಲಕ್ಷ ಹಣ ಸಂಪಾದನೆ.. ಈ ವ್ಯಕ್ತಿಗೆ ಕರ್ನಾಟಕ ಸೇರಿ ಹಲವು ರಾಜ್ಯಗಳಿಂದ ಡಿಮ್ಯಾಂಡ್
ಕೋಲಾರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಪರ ಪ್ರಚಾರ ಸಭೆಯಲ್ಲಿ ಮಾತಾಡಿದ ಅವರು, ದೇವೇಗೌಡ ನೆರಳಿಗೆ ಹೋಗಿ ಬದುಕಿ ಚೆನ್ನಾಗಿ ಆದವರು ಯಾರೂ ಇಲ್ಲ. ಚೆನ್ನಾಗಿ ಬದುಕಿದವರಿಗೇನು ಈ ಗತಿ ಬಂತು ಎಂದು ನನಗೆ ದುಃಖ. ಇರಲಿ ಅಂತ ರೈತನ ಮಗ ಎಂದು ಪ್ರಧಾನಿ ಮಾಡಿದ್ದೆವು. ಆತನ ಮಗ ಮುಖ್ಯಮಂತ್ರಿಯಾಗಿದ್ದ. ಇವರು ಸೇರಿದ್ದು ಬಿಜೆಪಿ ಜೊತೆಗೆ. ಒಬ್ಬ ಮಾಜಿ ಪ್ರಧಾನ ಮಂತ್ರಿ, ಒಬ್ಬ ಮಾಜಿ ಮುಖ್ಯಮಂತ್ರಿ, ಮೂರು ಸೀಟುಗಳನ್ನ ತೆಗೆದುಕೊಂಡಿದಾರೆ ಈ ಬಾರಿ. ಅದರಲ್ಲೂ ಒಂದು ಮಗನಿಗೆ ಇನ್ನೊಂದು ಮೊಮ್ಮಗನಿಗೆ. ಅಳಿಯನನ್ನ ನಿಮ್ಮ ಲೆಕ್ಕದಲ್ಲಿ ಕೊಡಿ ಎಂದು ಅಲ್ಲಿಗೆ ಕಳಿಸಿದ್ದರು. ಇವರ ಹಣೆಬರಹಕ್ಕೆ ಅವರ ಬಳಿ ಹೋಗಿ ಸಲಾಂ ಹೊಡೆಯುತ್ತಿದ್ದಾರೆ ಎಂದರು.
ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂನ್ 4ಕ್ಕೆ ನಾವು ಕಾಯುತ್ತಿದ್ದೇವೆ. ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು ಆ ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಇಂದಿರಾ ಗಾಂಧಿ ಕೂತಿದ್ದ ಸೀಟಲ್ಲಿ ಬಂದು ಕೂತುಬಿಟ್ಟೆ. ಎಲ್ಲಾ ಜಾತಿ ಜನಾಂಗದವರಿಗೆ ಆತ್ಮಸ್ಥೈರ್ಯ ತುಂಬಿದ್ದರು ಇಂದಿರಾ ಗಾಂಧಿ. ಎಂತಹವರ ಜಾಗಕ್ಕೆ ಎಂತಹವನು ಬಂದು ಕೂತಿದ್ದಾನೆ. ಸಂತೆಯಲ್ಲಿ ಹಾವಾಡಿಗ ಸುಳ್ಳು ಹೇಳೋದು ಕೇಳಿದ್ದೆವು. ಪ್ರಧಾನಿ ಸುಳ್ಳು ಹೇಳೊದು ಈ ಪ್ರಪಂಚದಲ್ಲಿಯೇ ಕೇಳಿರಲಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಬರುತ್ತೆ ಗೌತಮ್ ಗೆದ್ದೆ ಗೆಲ್ಲುತ್ತಾನೆ ಎಂದು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ