ಹೈದರಾಬಾದ್ ವಿರುದ್ಧ ಲಕ್ನೋ ತಂಡಕ್ಕೆ ಹೀನಾಯ ಸೋಲು
ಕ್ಯಾಪ್ಟನ್ ರಾಹುಲ್ ಮೇಲೆ ಲಕ್ನೋ ಟೀಮ್ ಮಾಲೀಕ ಕೂಗಾಟ
ಐಪಿಎಲ್ ಫೈನಲ್ಗೆ ಮುನ್ನವೇ ಕ್ಯಾಪ್ಟನ್ ರಾಹುಲ್ಗೆ ಬಿಗ್ ಶಾಕ್
2024ರ ಇಂಡಿಯನ್ ಪ್ರೀಮಿಯರ್ ಫೈನಲ್ಗೆ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕ್ಯಾಪ್ಟನ್ ಕೆ.ಎಲ್ ರಾಹುಲ್ಗೆ ಬಿಗ್ ಶಾಕ್ ಕಾದಿದೆ. ಮುಂದಿನ ವರ್ಷ ನಡೆಯಲಿರೋ ಐಪಿಎಲ್ಗೆ ಕ್ಯಾಪ್ಟನ್ ಕೆ.ಎಲ್ ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ರೀಟೈನ್ ಮಾಡಿಕೊಳ್ಳೋದು ಡೌಟ್ ಎನ್ನಲಾಗುತ್ತಿದೆ. ಹಾಗಾಗಿ ಕೆ.ಎಲ್ ರಾಹುಲ್ ಆರ್ಸಿಬಿಗೆ ಬರಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ ಫ್ಯಾನ್ಸ್.
ಎಷ್ಟು ಕೋಟಿ ಆದ್ರೂ ಪರ್ವಾಗಿಲ್ಲ ನಾವು ಕೊಡ್ತೀವಿ. ನಮ್ಮ ಕರ್ನಾಟಕದ ಹುಡುಗ ಆರ್ಸಿಬಿಗೆ ಬರಲಿ. ಅವರಿಗೆ ಆಗೋ ಅವಮಾನ ನಾವು ನೋಡಕ್ಕೆ ಆಗ್ತಿಲ್ಲ. ಕೆ.ಎಲ್ ರಾಹುಲ್ ಅವರೊಂದಿಗೆ ಗೋಯೆಂಕಾ ನಡೆಸಿಕೊಂಡ ರೀತಿ ಬಹಳ ಅಮಾನವೀಯ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇತ್ತೀಚೆಗೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಹೀನಾಯವಾಗಿ ಸೋಲನ್ನಪ್ಪಿತ್ತು.
ಟಾಸ್ ಗೆದ್ದು ಫಸ್ಟ್ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡ ಅದ್ಭುತ ಪ್ರದರ್ಶನ ತೋರಿ ಕೇವಲ 9.4 ಓವರ್ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಜಯಭೇರಿ ಬಾರಿಸಿತ್ತು.
ಹೈದರಾಬಾದ್ ಪರ ಅಗ್ರೆಸ್ಸಿವ್ ಬ್ಯಾಟಿಂಗ್ ಮಾಡಿದ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ 8 ಸಿಕ್ಸರ್, 8 ಫೋರ್ ಸಮೇತ 89 ರನ್ ಸಿಡಿಸಿದ್ರು. ಇನ್ನೊಂದೆಡೆ ಇವರಿಗೆ ಸಾಥ್ ನೀಡಿದ ಅಭಿಷೇಕ್ ಶರ್ಮಾ ಕೇವಲ 28 ಬಾಲ್ನಲ್ಲಿ 8 ಬೌಂಡರಿ, 6 ಸಿಕ್ಸರ್ ಸಮೇತ 75 ರನ್ ಚಚ್ಚಿದ್ರು.
ಪಂದ್ಯ ಸೋತ ಬಳಿಕ ಡ್ರೆಸ್ಸಿಂಗ್ ರೂಮ್ ಬಳಿ LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್ ಕೆ.ಎಲ್ ರಾಹುಲ್ ಮೇಲೆ ಕೂಗಾಡಿದ್ದರು. ರಾಹುಲ್ ತಾಳ್ಮೆಯಿಂದ ಉತ್ತರಿಸಲು ಯತ್ನಿಸಿದ್ರೂ ಗೋಯೆಂಕಾ ಅಸಭ್ಯ ವರ್ತನೆ ತೋರಿದ್ರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಆರ್ಸಿಬಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: T20 ವಿಶ್ವಕಪ್ಗೆ ಮುನ್ನವೇ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಜಡೇಜಾ ಬಿಗ್ ಶಾಕ್.. ಆಗಿದ್ದೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಹೈದರಾಬಾದ್ ವಿರುದ್ಧ ಲಕ್ನೋ ತಂಡಕ್ಕೆ ಹೀನಾಯ ಸೋಲು
ಕ್ಯಾಪ್ಟನ್ ರಾಹುಲ್ ಮೇಲೆ ಲಕ್ನೋ ಟೀಮ್ ಮಾಲೀಕ ಕೂಗಾಟ
ಐಪಿಎಲ್ ಫೈನಲ್ಗೆ ಮುನ್ನವೇ ಕ್ಯಾಪ್ಟನ್ ರಾಹುಲ್ಗೆ ಬಿಗ್ ಶಾಕ್
2024ರ ಇಂಡಿಯನ್ ಪ್ರೀಮಿಯರ್ ಫೈನಲ್ಗೆ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕ್ಯಾಪ್ಟನ್ ಕೆ.ಎಲ್ ರಾಹುಲ್ಗೆ ಬಿಗ್ ಶಾಕ್ ಕಾದಿದೆ. ಮುಂದಿನ ವರ್ಷ ನಡೆಯಲಿರೋ ಐಪಿಎಲ್ಗೆ ಕ್ಯಾಪ್ಟನ್ ಕೆ.ಎಲ್ ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ರೀಟೈನ್ ಮಾಡಿಕೊಳ್ಳೋದು ಡೌಟ್ ಎನ್ನಲಾಗುತ್ತಿದೆ. ಹಾಗಾಗಿ ಕೆ.ಎಲ್ ರಾಹುಲ್ ಆರ್ಸಿಬಿಗೆ ಬರಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ ಫ್ಯಾನ್ಸ್.
ಎಷ್ಟು ಕೋಟಿ ಆದ್ರೂ ಪರ್ವಾಗಿಲ್ಲ ನಾವು ಕೊಡ್ತೀವಿ. ನಮ್ಮ ಕರ್ನಾಟಕದ ಹುಡುಗ ಆರ್ಸಿಬಿಗೆ ಬರಲಿ. ಅವರಿಗೆ ಆಗೋ ಅವಮಾನ ನಾವು ನೋಡಕ್ಕೆ ಆಗ್ತಿಲ್ಲ. ಕೆ.ಎಲ್ ರಾಹುಲ್ ಅವರೊಂದಿಗೆ ಗೋಯೆಂಕಾ ನಡೆಸಿಕೊಂಡ ರೀತಿ ಬಹಳ ಅಮಾನವೀಯ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇತ್ತೀಚೆಗೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಹೀನಾಯವಾಗಿ ಸೋಲನ್ನಪ್ಪಿತ್ತು.
ಟಾಸ್ ಗೆದ್ದು ಫಸ್ಟ್ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡ ಅದ್ಭುತ ಪ್ರದರ್ಶನ ತೋರಿ ಕೇವಲ 9.4 ಓವರ್ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಜಯಭೇರಿ ಬಾರಿಸಿತ್ತು.
ಹೈದರಾಬಾದ್ ಪರ ಅಗ್ರೆಸ್ಸಿವ್ ಬ್ಯಾಟಿಂಗ್ ಮಾಡಿದ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ 8 ಸಿಕ್ಸರ್, 8 ಫೋರ್ ಸಮೇತ 89 ರನ್ ಸಿಡಿಸಿದ್ರು. ಇನ್ನೊಂದೆಡೆ ಇವರಿಗೆ ಸಾಥ್ ನೀಡಿದ ಅಭಿಷೇಕ್ ಶರ್ಮಾ ಕೇವಲ 28 ಬಾಲ್ನಲ್ಲಿ 8 ಬೌಂಡರಿ, 6 ಸಿಕ್ಸರ್ ಸಮೇತ 75 ರನ್ ಚಚ್ಚಿದ್ರು.
ಪಂದ್ಯ ಸೋತ ಬಳಿಕ ಡ್ರೆಸ್ಸಿಂಗ್ ರೂಮ್ ಬಳಿ LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್ ಕೆ.ಎಲ್ ರಾಹುಲ್ ಮೇಲೆ ಕೂಗಾಡಿದ್ದರು. ರಾಹುಲ್ ತಾಳ್ಮೆಯಿಂದ ಉತ್ತರಿಸಲು ಯತ್ನಿಸಿದ್ರೂ ಗೋಯೆಂಕಾ ಅಸಭ್ಯ ವರ್ತನೆ ತೋರಿದ್ರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಆರ್ಸಿಬಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: T20 ವಿಶ್ವಕಪ್ಗೆ ಮುನ್ನವೇ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಜಡೇಜಾ ಬಿಗ್ ಶಾಕ್.. ಆಗಿದ್ದೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್