/newsfirstlive-kannada/media/post_attachments/wp-content/uploads/2024/08/darshan.jpg)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಚಾಲೆಂಜಿಂಗ್​ ಸ್ಟಾರ್​​​ ದರ್ಶನ್​ ಜೈಲು ಸೇರಿ ಬರೋಬ್ಬರಿ 2 ತಿಂಗಳು ಕಳೆದಿವೆ. ನಟ ದರ್ಶನ್ ಅರೆಸ್ಟ್ ಆದ ಮೇಲೆ ಅಭಿಮಾನಿಗಳು ಭಾರೀ ಬೇಸರದಲ್ಲಿ ಇದ್ದಾರೆ. ನಿತ್ಯ ದರ್ಶನ್​ ರಿಲೀಸ್​ಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ಕೆಲವು ಅಭಿಮಾನಿಗಳು ಅಂತೂ ಹೋಮ ಮಾಡಿಸಿದ್ದು ಉಂಟು. ಈಗ ಮತ್ತೋರ್ವ ದರ್ಶನ್​ ಅಭಿಮಾನಿ ಪರಪ್ಪನ ಅಗ್ರಹಾರದ ಮುಂದೆಯೇ ಉರುಳು ಸೇವೆ ಮಾಡಲು ಮುಂದಾಗಿದ್ದಾರೆ.
ಈ ಸಂಬಂಧ ವಿಡಿಯೋ ಮಾಡಿ ಮಾತಾಡಿರೋ ನಮ್ಮ ಕರುನಾಡು ಯುವ ಸೇನೆ ರಾಜ್ಯಾಧ್ಯಕ್ಷ ರವಿಕುಮಾರ್​ ಎಂಬುವರು ನಾಳೆ ದರ್ಶನ್​ ಅವರನ್ನು ರಿಲೀಸ್​ ಮಾಡಬೇಕು ಎಂದು ಉರುಳು ಸೇವೆ ಮಾಡುತ್ತೇವೆ. 101 ತೆಂಗಿನ ಕಾಯಿ ಹೊಡೆದು ಪರಪ್ಪನ ಅಗ್ರಹಾರದ ಜೈಲು ಮುಂದೆಯೇ ಉರುಳು ಸೇವೆ ಮಾಡುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಡಿ ಬಾಸ್​ ಅಭಿಮಾನಿಗಳು ಭಾಗಿಯಾಗಬೇಕು ಎಂದು ಮನವಿ ಮಾಡಿದ್ದಾರೆ.
/newsfirstlive-kannada/media/post_attachments/wp-content/uploads/2024/08/darshan3.jpg)
ಇತ್ತೀಚೆಗಷ್ಟೇ ದರ್ಶನ್​ ರಿಲೀಸ್​ಗೆ ಪತ್ನಿ ವಿಜಯಲಕ್ಷ್ಮೀ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಹೋಮ ಮಾಡಿಸಿದ್ರು. ಇದಾದ ಬೆನ್ನಲ್ಲೇ ನಟ ದರ್ಶನ್ ಬಿಡುಗಡೆಗಾಗಿ ಕಲಾವಿದರ ಸಂಘದಲ್ಲಿ ಹೋಮ-ಹವನ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ, ಇದು ಇಂಡಸ್ಟ್ರಿಗಾಗಿ ಮಾಡಿದ ಹೋಮ ಎಂದು ಸ್ಪಷ್ಟನೆ ನೀಡಿದ್ದರು ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​​.
ಇದನ್ನೂ ಓದಿ:‘ದರ್ಶನ್ಗೆ ಹಾಲು, ಮೊಟ್ಟೆ, ಬ್ರೆಡ್ ಕೊಡುತ್ತಿದ್ದೇವೆ’- ಮನೆ ಊಟದ ಅರ್ಜಿಗೆ ಹೊಸ ಟ್ವಿಸ್ಟ್ ಕೊಟ್ಟ ಜೈಲಾಧಿಕಾರಿಗಳು!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us