ಬೈಕ್​ಗಳ ಮುಖಾಮುಖಿ ಡಿಕ್ಕಿ.. RCB ಖುಷಿಯಲ್ಲಿ ನಡೆಯುತ್ತಿದ್ದ ರ್ಯಾಲಿಯಲ್ಲಿ ಯುವಕ ಬಲಿ

author-image
Veena Gangani
Updated On
ಬೈಕ್​ಗಳ ಮುಖಾಮುಖಿ ಡಿಕ್ಕಿ.. RCB ಖುಷಿಯಲ್ಲಿ ನಡೆಯುತ್ತಿದ್ದ ರ್ಯಾಲಿಯಲ್ಲಿ ಯುವಕ ಬಲಿ
Advertisment
  • ಉಷಾ ನರ್ಸಿಂಗ್ ಹೋಂ ಬಳಿ ನಡೆದ ಘಟನೆ
  • ಶಿವಮೊಗ್ಗದ ವೆಂಕಟೇಶ ನಗರದ ನಿವಾಸಿ ಇನ್ನಿಲ್ಲ
  • ಸಂಚಾರಿ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗ: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೈಕ್ ಱಲಿಯಲ್ಲಿ ಯುವಕನೊರ್ವ ಮೃತಪಟ್ಟಿದ್ದ. ಮೃತಪಟ್ಟ ದುರ್ದೈವಿ ಹೆಸರು ಅಭಿಷೇಕ್ (21) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಆರ್​ಸಿಬಿ ಭಲೇ.. ಭೇಷ್..! ತಮಿಳುನಾಡು ಸಿಎಂ MK ಸ್ಟಾಲಿನ್ ಬೆಂಗಳೂರು ತಂಡಕ್ಕೆ, ಕೊಹ್ಲಿ ಬಗ್ಗೆ ಏನಂದ್ರು?

publive-image

ಮೃತ ಯುವಕ ಶಿವಮೊಗ್ಗದ ವೆಂಕಟೇಶ ನಗರದ ನಿವಾಸಿಯಾಗಿದ್ದ. ಈತ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದ. ಇನ್ನೂ, ನಿನ್ನೆ ಆರ್‌ಸಿಬಿ ಗೆದ್ದ ಖುಷಿಯಲ್ಲಿ ಬೈಕ್ ನಡೆಯುತ್ತಿತ್ತು. ಆದ್ರೆ ಇದೇ ಱಲಿಯ ವೇಳೆ ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಂ ವೃತ್ತದ ಬಳಿ ನಡೆದ ಘಟನೆಯಲ್ಲಿ ಯುವಕ ಬಲಿಯಾಗಿದ್ದಾನೆ. ಬೈಕ್​ಗಳ ನಡುವೆ ಸಂಭವಿಸಿದ ಡಿಕ್ಕಿಯಿಂದ ಯುವಕನ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ. ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ಸಂಚಾರಿ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment