ಇಂದು ಬೂತ್ ಮಟ್ಟದ ಏಜೆಂಟರ್ ಸಭೆ ಕರೆಯಲಾಗಿತ್ತು
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎರಡು ತಂಡಗಳಿಂದ ಮಾರಾಮಾರಿ
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷನ ಮೇಲೆ ಕಾರ್ಯಕರ್ತರಿಂದ ಹಲ್ಲೆ
ಕೋಲಾರ: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ ನಡೆದಿದೆ. ಕಾಂಗ್ರೆಸ್ ನ ಎರಡು ಗುಂಪುಗಳು ಪರಸ್ಪರ ಬಡಿದಾಡಿಕೊಂಡಿದ್ದಾರೆ.
ಕೋಲಾರದ ಡಿಸಿಸಿ ಬ್ಯಾಂಕ್ ಪಕ್ಕದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಬೂತ್ ಮಟ್ಟದ ಏಜೆಂಟರ್ ಸಭೆ ಕರೆಯಲಾಗಿತ್ತು. ಚುನಾವಣಾ ದಿನದಂದು ಬೂತ್ ಗಳಿಗೆ ಏಜೆಂಟ್ ನೇಮಕ ಕುರಿತು ಕಾರ್ಯಕರ್ತರನ್ನು ಆಹ್ವಾನಿಸಲಾಗಿತ್ತು. ಕೆಪಿಸಿಸಿ ಕೋಲಾರ ಕಾಂಗ್ರೆಸ್ ಉಸ್ತುವಾರಿ ರಾಜ್ ಕುಮಾರ್ ನೇತ್ರತ್ವದಲ್ಲಿ ಸಭೆ ಕರೆಯಲಾಗಿತ್ತು. ಆದರೆ ಈ ವೇಳೆ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಎಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಫ್ಲೆಕ್ಸ್ ನಲ್ಲಿ ಯಾವುದೇ ನಾಯಕರ ಪೋಟೋ ಇಲ್ಲದಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ.
ಕೋಲಾರದ ಕಾಂಗ್ರೆಸ್ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರ್ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಅಳವಡಿಸಿದ್ದ ಬ್ಯಾನರ್ ನಲ್ಲಿ ನಾಯಕರ ಪೋಟೋ ಇಲ್ಲ ಎಂದು ಕಾಂಗ್ರೆಸ್ ನ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.#KothurGManjunatha #KHMuniyappa #Kolar @BJP4Karnataka @INCKarnataka #NewsFirstLive #NewsirstKannada pic.twitter.com/A1BfSdVABD
— NewsFirst Kannada (@NewsFirstKan) February 13, 2024
ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಈ ವೇಳೆ ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ ಮೇಲೆ ಹಲ್ಲೆ ನಡೆದಿದೆ.
ಗಲಾಟೆ ಬಳಿಕ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ ಸಭೆಯಿಂದ ಹೊರ ನಡೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ಬೂತ್ ಮಟ್ಟದ ಏಜೆಂಟರ್ ಸಭೆ ಕರೆಯಲಾಗಿತ್ತು
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎರಡು ತಂಡಗಳಿಂದ ಮಾರಾಮಾರಿ
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷನ ಮೇಲೆ ಕಾರ್ಯಕರ್ತರಿಂದ ಹಲ್ಲೆ
ಕೋಲಾರ: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ ನಡೆದಿದೆ. ಕಾಂಗ್ರೆಸ್ ನ ಎರಡು ಗುಂಪುಗಳು ಪರಸ್ಪರ ಬಡಿದಾಡಿಕೊಂಡಿದ್ದಾರೆ.
ಕೋಲಾರದ ಡಿಸಿಸಿ ಬ್ಯಾಂಕ್ ಪಕ್ಕದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಬೂತ್ ಮಟ್ಟದ ಏಜೆಂಟರ್ ಸಭೆ ಕರೆಯಲಾಗಿತ್ತು. ಚುನಾವಣಾ ದಿನದಂದು ಬೂತ್ ಗಳಿಗೆ ಏಜೆಂಟ್ ನೇಮಕ ಕುರಿತು ಕಾರ್ಯಕರ್ತರನ್ನು ಆಹ್ವಾನಿಸಲಾಗಿತ್ತು. ಕೆಪಿಸಿಸಿ ಕೋಲಾರ ಕಾಂಗ್ರೆಸ್ ಉಸ್ತುವಾರಿ ರಾಜ್ ಕುಮಾರ್ ನೇತ್ರತ್ವದಲ್ಲಿ ಸಭೆ ಕರೆಯಲಾಗಿತ್ತು. ಆದರೆ ಈ ವೇಳೆ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಎಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಫ್ಲೆಕ್ಸ್ ನಲ್ಲಿ ಯಾವುದೇ ನಾಯಕರ ಪೋಟೋ ಇಲ್ಲದಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ.
ಕೋಲಾರದ ಕಾಂಗ್ರೆಸ್ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರ್ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಅಳವಡಿಸಿದ್ದ ಬ್ಯಾನರ್ ನಲ್ಲಿ ನಾಯಕರ ಪೋಟೋ ಇಲ್ಲ ಎಂದು ಕಾಂಗ್ರೆಸ್ ನ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.#KothurGManjunatha #KHMuniyappa #Kolar @BJP4Karnataka @INCKarnataka #NewsFirstLive #NewsirstKannada pic.twitter.com/A1BfSdVABD
— NewsFirst Kannada (@NewsFirstKan) February 13, 2024
ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಈ ವೇಳೆ ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ ಮೇಲೆ ಹಲ್ಲೆ ನಡೆದಿದೆ.
ಗಲಾಟೆ ಬಳಿಕ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ ಸಭೆಯಿಂದ ಹೊರ ನಡೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ