ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನಲೆ PSI ಈಶ್ವರಪ್ಪ ದೂರು
ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿ ಗ್ರಾಮ ಅಪರೂಪದ ಘಟನೆ
ನಾಗೇಶ್ ಮೇಲೆ ದಾಳಿ ಮಾಡುವ ಉದ್ದೇಶದಿಂದ ಜಮಾಯಿಸಿದ್ದ ಜನ!
ಕೋಲಾರ: ಸಾವಿರಕ್ಕೂ ಹೆಚ್ಚು ಜನರ ಮೇಲೆ ಎಫ್ಐಆರ್ ದಾಖಲಾಗಿರೋ ಅಪರೂಪದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ: KRS ಡ್ಯಾಂನಲ್ಲಿ ಇರೋ ನೀರು ಎಷ್ಟು? ಸಂಸದೆ ಸುಮಲತಾಗೆ ಟಾಂಗ್ ಕೊಟ್ಟ ಸಚಿವ ಚಲುವರಾಯಸ್ವಾಮಿ
ಪತ್ನಿಯನ್ನು ಹತ್ಯೆ ಮಾಡಿ ಹೋಟೆಲ್ವೊಂದರಲ್ಲಿ ಅವಿತುಕೊಂಡಿದ್ದ ಆರೋಪಿ ನಾಗೇಶ್..!
ನಂಬಿಹಳ್ಳಿ ಗ್ರಾಮದ ನಿವಾಸಿಯಾದ ಆರೋಪಿ ನಾಗೇಶ್ ಎಂಬಾತ, ತನ್ನ ಪತ್ನಿ ರಾಧಾಳನ್ನು ಬರ್ಬರವಾಗಿ ಕೊಲೆ ಮಾಡಿ ಹೋಟೆಲ್ನಲ್ಲಿ ಬಚ್ಚಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಹತ್ಯೆ ಮಾಡುವ ಉದ್ದೇಶದಿಂದಲೇ ಸಾವಿರಾರು ಗ್ರಾಮಸ್ಥರು ಹೋಟೆಲ್ ಬಳಿ ದೌಡಾಯಿಸಿದ್ದರು.
ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಪಿಎಸ್ಐ ಈಶ್ವರಪ್ಪ ಅವರು ಸೆಕ್ಷನ್ 143, 147, 148, 307, 353, 149 ಅಡಿ ದೂರು ದಾಖಲು ಮಾಡಿದ್ದಾರೆ. ಇದೀಗ ಬಂಧನ ಭೀತಿಯಲ್ಲಿ ಎಫ್ಐಆರ್ ದಾಖಲಾದ ಗ್ರಾಮದ ಜನರು ತಲೆಮರೆಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನಲೆ PSI ಈಶ್ವರಪ್ಪ ದೂರು
ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿ ಗ್ರಾಮ ಅಪರೂಪದ ಘಟನೆ
ನಾಗೇಶ್ ಮೇಲೆ ದಾಳಿ ಮಾಡುವ ಉದ್ದೇಶದಿಂದ ಜಮಾಯಿಸಿದ್ದ ಜನ!
ಕೋಲಾರ: ಸಾವಿರಕ್ಕೂ ಹೆಚ್ಚು ಜನರ ಮೇಲೆ ಎಫ್ಐಆರ್ ದಾಖಲಾಗಿರೋ ಅಪರೂಪದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ: KRS ಡ್ಯಾಂನಲ್ಲಿ ಇರೋ ನೀರು ಎಷ್ಟು? ಸಂಸದೆ ಸುಮಲತಾಗೆ ಟಾಂಗ್ ಕೊಟ್ಟ ಸಚಿವ ಚಲುವರಾಯಸ್ವಾಮಿ
ಪತ್ನಿಯನ್ನು ಹತ್ಯೆ ಮಾಡಿ ಹೋಟೆಲ್ವೊಂದರಲ್ಲಿ ಅವಿತುಕೊಂಡಿದ್ದ ಆರೋಪಿ ನಾಗೇಶ್..!
ನಂಬಿಹಳ್ಳಿ ಗ್ರಾಮದ ನಿವಾಸಿಯಾದ ಆರೋಪಿ ನಾಗೇಶ್ ಎಂಬಾತ, ತನ್ನ ಪತ್ನಿ ರಾಧಾಳನ್ನು ಬರ್ಬರವಾಗಿ ಕೊಲೆ ಮಾಡಿ ಹೋಟೆಲ್ನಲ್ಲಿ ಬಚ್ಚಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಹತ್ಯೆ ಮಾಡುವ ಉದ್ದೇಶದಿಂದಲೇ ಸಾವಿರಾರು ಗ್ರಾಮಸ್ಥರು ಹೋಟೆಲ್ ಬಳಿ ದೌಡಾಯಿಸಿದ್ದರು.
ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಪಿಎಸ್ಐ ಈಶ್ವರಪ್ಪ ಅವರು ಸೆಕ್ಷನ್ 143, 147, 148, 307, 353, 149 ಅಡಿ ದೂರು ದಾಖಲು ಮಾಡಿದ್ದಾರೆ. ಇದೀಗ ಬಂಧನ ಭೀತಿಯಲ್ಲಿ ಎಫ್ಐಆರ್ ದಾಖಲಾದ ಗ್ರಾಮದ ಜನರು ತಲೆಮರೆಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ