ಅಸ್ಸಾಂನಲ್ಲಿ ರಾಹುಲ್ ಭಾರತ್ ಜೋಡೋ ನ್ಯಾಯಯಾತ್ರೆ
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ
ಬಿಜೆಪಿ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಎಂದ ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರಸ್ತುತ ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಗೆ ಗುವಾಹಟಿಯ ಕೆಲ ರಸ್ತೆಗಳಲ್ಲಿ ಱಲಿಗೆ ನಿಷೇಧ ಹೇರಲಾಗಿತ್ತು.
ಇದರಿಂದ ಆಕ್ರೋಶಗೊಂಡ ರಾಹುಲ್ ಗಾಂಧಿ ಹಾಗೂ ಬೆಂಬಲಿಗರು ಬ್ಯಾರಿಕೇಡ್ಗಳನ್ನು ಹತ್ತಿ ಪೊಲೀಸರ ಜೊತೆ ಘರ್ಷಣೆ ನಡೆಸಿದ್ದರು. ತಳ್ಳಾಟ-ನೂಕಾಟದಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಹಾಗೂ ಕೆಲವು ಬೆಂಬಲಿಗರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ಗೆ ಅಸ್ಸಾಂ ಸಿಎಂ ಸೂಚನೆ.. ಕರ್ನಾಟಕ ಕಾಂಗ್ರೆಸ್ನಿಂದ ಖಡಕ್ ಎಚ್ಚರಿಕೆ
ಈ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟ್ ಮಾಡಿರೋ ಸಿಎಂ, ಸಿದ್ದರಾಮಯ್ಯ, ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ ಎಂದು ಕಿಡಿಕಾರಿದ್ದಾರೆ.
ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು.
ನಮ್ಮ ನಾಯಕರಾದ @RahulGandhi ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ. ಗೂಂಡಾಗಳನ್ನು ಬಿಟ್ಟು ಕಲ್ಲು ಹೊಡೆಸಿ, ಬೆದರಿಕೆ ಒಡ್ಡುವ ಮೂಲಕ ಭಾರತೀಯರ ನ್ಯಾಯದ ಕೂಗನ್ನು ಅಡಗಿಸಬಹುದು ಎಂದು ಭಾವಿಸಿದ್ದರೆ ಅದು… pic.twitter.com/lmMx7iJXgE— Siddaramaiah (@siddaramaiah) January 23, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಸ್ಸಾಂನಲ್ಲಿ ರಾಹುಲ್ ಭಾರತ್ ಜೋಡೋ ನ್ಯಾಯಯಾತ್ರೆ
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ
ಬಿಜೆಪಿ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಎಂದ ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರಸ್ತುತ ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಗೆ ಗುವಾಹಟಿಯ ಕೆಲ ರಸ್ತೆಗಳಲ್ಲಿ ಱಲಿಗೆ ನಿಷೇಧ ಹೇರಲಾಗಿತ್ತು.
ಇದರಿಂದ ಆಕ್ರೋಶಗೊಂಡ ರಾಹುಲ್ ಗಾಂಧಿ ಹಾಗೂ ಬೆಂಬಲಿಗರು ಬ್ಯಾರಿಕೇಡ್ಗಳನ್ನು ಹತ್ತಿ ಪೊಲೀಸರ ಜೊತೆ ಘರ್ಷಣೆ ನಡೆಸಿದ್ದರು. ತಳ್ಳಾಟ-ನೂಕಾಟದಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಹಾಗೂ ಕೆಲವು ಬೆಂಬಲಿಗರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ಗೆ ಅಸ್ಸಾಂ ಸಿಎಂ ಸೂಚನೆ.. ಕರ್ನಾಟಕ ಕಾಂಗ್ರೆಸ್ನಿಂದ ಖಡಕ್ ಎಚ್ಚರಿಕೆ
ಈ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟ್ ಮಾಡಿರೋ ಸಿಎಂ, ಸಿದ್ದರಾಮಯ್ಯ, ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ ಎಂದು ಕಿಡಿಕಾರಿದ್ದಾರೆ.
ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು.
ನಮ್ಮ ನಾಯಕರಾದ @RahulGandhi ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ. ಗೂಂಡಾಗಳನ್ನು ಬಿಟ್ಟು ಕಲ್ಲು ಹೊಡೆಸಿ, ಬೆದರಿಕೆ ಒಡ್ಡುವ ಮೂಲಕ ಭಾರತೀಯರ ನ್ಯಾಯದ ಕೂಗನ್ನು ಅಡಗಿಸಬಹುದು ಎಂದು ಭಾವಿಸಿದ್ದರೆ ಅದು… pic.twitter.com/lmMx7iJXgE— Siddaramaiah (@siddaramaiah) January 23, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ