ಬಿಬಿಎಂಪಿ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ
ಕಾಮಗಾರಿಗಳ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ನಡೆದ ಘಟನೆ..!
ಸದ್ಯ ಘಟನೆ ಬಗ್ಗೆ ಹೆಚ್ಚಿದ ಅನುಮಾನ, ಮುಂದಿನ ಕಥೆಯೇನು?
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಕಚೇರಿ ಆವರಣದ ಕಟ್ಟಡವೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಬಿಬಿಎಂಪಿ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊತ್ತಿ ಉರಿಯುತ್ತಿದೆ.
ಸದ್ಯ ಬೆಂಕಿ ಹತೋಟಿಗೆ ಬಂದಿದ್ದು, ಈ ಘಟನೆಯಲ್ಲಿ 8 ಮಂದಿ ಬಿಬಿಎಂಪಿ ನೌಕಕರಿಗೆ ತೀವ್ರ ಗಾಯಗಳಾಗಿವೆ. ಇಬ್ಬರು ಮಹಿಳೆಯರು, ಆರು ಪುರುಷ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸೆಂಟೆ್್್ ಮಾರ್ಥಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಅರ್ಧ ಗಂಟೆಯಾದ್ರೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿಲ್ಲ. ಈಗ ಸ್ಥಳಕ್ಕೆ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಹಣಕಾಸು ವಿಭಾಗದ ಆಯುಕ್ತ ಜಯರಾಮ್ ರಾಯ್ ಭೇಟಿ ನೀಡಿದ್ದಾರೆ. ಹಲವು ಮಹತ್ವದ ದಾಖಲೆಗಳು ಸುಟ್ಟು ಹೋಗಿವೆ ಎನ್ನಲಾಗಿದೆ.
ಬಿಬಿಎಂಪಿ ಕಾಮಗಾರಿಗಳ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಇನ್ನು, ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ದಾಖಲೆಗಳ ಸಂಗ್ರಹವಿದ್ದ ಕೊಠಡಿ ಆಗಿತ್ತು. ಹೀಗಾಗಿ ಇದರ ಸುತ್ತ ಹಲವು ಅನುಮಾನ ಹೆಚ್ಚಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಿಬಿಎಂಪಿ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ
ಕಾಮಗಾರಿಗಳ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ನಡೆದ ಘಟನೆ..!
ಸದ್ಯ ಘಟನೆ ಬಗ್ಗೆ ಹೆಚ್ಚಿದ ಅನುಮಾನ, ಮುಂದಿನ ಕಥೆಯೇನು?
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಕಚೇರಿ ಆವರಣದ ಕಟ್ಟಡವೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಬಿಬಿಎಂಪಿ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊತ್ತಿ ಉರಿಯುತ್ತಿದೆ.
ಸದ್ಯ ಬೆಂಕಿ ಹತೋಟಿಗೆ ಬಂದಿದ್ದು, ಈ ಘಟನೆಯಲ್ಲಿ 8 ಮಂದಿ ಬಿಬಿಎಂಪಿ ನೌಕಕರಿಗೆ ತೀವ್ರ ಗಾಯಗಳಾಗಿವೆ. ಇಬ್ಬರು ಮಹಿಳೆಯರು, ಆರು ಪುರುಷ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸೆಂಟೆ್್್ ಮಾರ್ಥಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಅರ್ಧ ಗಂಟೆಯಾದ್ರೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿಲ್ಲ. ಈಗ ಸ್ಥಳಕ್ಕೆ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಹಣಕಾಸು ವಿಭಾಗದ ಆಯುಕ್ತ ಜಯರಾಮ್ ರಾಯ್ ಭೇಟಿ ನೀಡಿದ್ದಾರೆ. ಹಲವು ಮಹತ್ವದ ದಾಖಲೆಗಳು ಸುಟ್ಟು ಹೋಗಿವೆ ಎನ್ನಲಾಗಿದೆ.
ಬಿಬಿಎಂಪಿ ಕಾಮಗಾರಿಗಳ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಇನ್ನು, ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ದಾಖಲೆಗಳ ಸಂಗ್ರಹವಿದ್ದ ಕೊಠಡಿ ಆಗಿತ್ತು. ಹೀಗಾಗಿ ಇದರ ಸುತ್ತ ಹಲವು ಅನುಮಾನ ಹೆಚ್ಚಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ