ಪ್ರಯಾಗರಾಜ್​ನಲ್ಲಿ ಮತ್ತೊಂದು ಬೆಂಕಿ ಅವಘಡ; ಹಲವು ಸಾಧುಗಳಿಗೆ ಸುಟ್ಟ ಗಾಯ

author-image
Gopal Kulkarni
Updated On
ಪ್ರಯಾಗರಾಜ್​ನಲ್ಲಿ ಮತ್ತೊಂದು ಬೆಂಕಿ ಅವಘಡ; ಹಲವು ಸಾಧುಗಳಿಗೆ ಸುಟ್ಟ ಗಾಯ
Advertisment
  • ಪ್ರಯಾಗರಾಜ್ ಕುಂಭಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ
  • ಜುನ್ನಾ ಅಖಾಡದಲ್ಲಿ ಟೆಂಟ್​ಗಳಿಗೆ ಏಕಾಏಕಿ ಹೊತ್ತಿಕೊಂಡ ಬೆಂಕಿ
  • ಬೆಂಕಿ ನಂದಿಸಿದ ಅಗ್ನಿಶಾಮಕ ದಳ, ಕೆಲುವ ಸಾಧುಗಳಿಗೆ ಸುಟ್ಟ ಗಾಯ

ಪ್ರಯಾಗರಾಜ್​ನ ಚಟ್ನಾಗ್ ಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಬೆಂಕಿಯ ಅವಘಡ ಸಂಭವಿಸಿದೆ. ತೆರೆದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಕೆಲವು ಟೆಂಟ್​ಗಳಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ ಆದ್ರೆ, ಕೆಲವು ಸಾಧುಗಳಿಗೆ ಸುಟ್ಟ ಗಾಯಗಳಾಗಿದ್ದು ವರದಿಯಾಗಿದೆ. ಜುನ್ನಾ ಅಖಾಡದಲ್ಲಿ ಈ ಒಂದು ಅವಘಢ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕೆಲವು ಟೆಂಟ್​ಗಳು ಸುಟ್ಟು ಕರಕಲಾಗಿವೆ.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದು ಯಾವುದೇ ರೀತಿಯ ಪ್ರಾಣಾಪಾಯ ಯಾರಿಗೂ ಆಗಿಲ್ಲ ಎಂದು ಹೇಳಿದೆ. ಕೆಲವು ದಿನಗಳ ಹಿಂದಷ್ಟೇ ಸಿಲಿಂಡರ್ ಬ್ಲಾಸ್ಟ್​ ಆಗಿ ಇದೇ ಕುಂಭಮೇಳದಲ್ಲಿ ದೊಡ್ಡ ಮಟ್ಟದ ಬೆಂಕಿ ಅವಘಢ ಸಂಭವಿಸಿತ್ತು. ಈಗ ಎರಡನೇ ಬಾರಿ ಇಂತಹ ಅವಘಢ ಸಂಭವಿಸಿದ್ದು ಯಾತ್ರಾರ್ಥಿಗಳು ಕೊಂಚ ಆತಂಕಕ್ಕೆ ಈಡಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment