ಜಮೀನಿನ ಬದುವಿನಲ್ಲಿದ್ದ ಒಣ ಹುಲ್ಲಿಗೆ ತಗುಲಿದ್ದ ದಿಢೀರ್ ಬೆಂಕಿ
ಸುಟ್ಟ ಗಾಯಗಳಿಂದ ಸ್ಥಳದಲ್ಲೇ ಕುಸಿದು ಬಿದ್ದ ರೈತ ಕೃಷ್ಣೇಗೌಡ
ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಘಟನೆ
ಹಾಸನ: ಜಮೀನಿಗೆ ಬಿದ್ದ ಬೆಂಕಿ ಆರಿಸಲು ಹೋದ ರೈತ ಸಾವನ್ನಪ್ಪಿರುವ ದಾರಣ ಘಟನೆ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ನಡೆದಿದೆ. ಕೃಷ್ಣೇಗೌಡ (62) ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ ರೈತ.
ಇದನ್ನು ಓದಿ: ಇಬ್ಬರು ಮಕ್ಕಳನ್ನು ಕತ್ತು ಸೀಳಿ ಕೊಂದ ಕ್ಷೌರಿಕ; ಪೊಲೀಸ್ ಎನ್ಕೌಂಟರ್ಗೆ ಬಲಿ
ಜಮೀನಿನ ಬದುವಿನಲ್ಲಿ ಏಕಾಏಕಿ ಒಣ ಹುಲ್ಲಿಗೆ ಬೆಂಕಿ ತಗುಲಿಕೊಂಡಿದೆ. ತೋಟಕ್ಕೆಲ್ಲಾ ಬೆಂಕಿ ವ್ಯಾಪಿಸುತ್ತದೆ ಎಂದು ಕೃಷ್ಣೇಗೌಡ ಬೆಂಕಿ ನಂದಿಸಲು ಹೋಗಿದ್ದಾರೆ. ಈ ವೇಳೆ ಜೋರಾಗಿ ಉರಿಯುತ್ತಿದ್ದ ಬೆಂಕಿಗೆ ಕೃಷ್ಣೇಗೌಡ ಸಿಲುಕಿಕೊಂಡಿದ್ದಾರೆ. ಸುಟ್ಟ ಗಾಯಗಳಿಂದ ಕೃಷ್ಣೇಗೌಡ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಗ್ರಾಮಸ್ಥರು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೊಳೆನರಸೀಪುರ ತಾಲೂಕಿನ ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಕೃಷ್ಣೇಗೌಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜಮೀನಿನ ಬದುವಿನಲ್ಲಿದ್ದ ಒಣ ಹುಲ್ಲಿಗೆ ತಗುಲಿದ್ದ ದಿಢೀರ್ ಬೆಂಕಿ
ಸುಟ್ಟ ಗಾಯಗಳಿಂದ ಸ್ಥಳದಲ್ಲೇ ಕುಸಿದು ಬಿದ್ದ ರೈತ ಕೃಷ್ಣೇಗೌಡ
ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಘಟನೆ
ಹಾಸನ: ಜಮೀನಿಗೆ ಬಿದ್ದ ಬೆಂಕಿ ಆರಿಸಲು ಹೋದ ರೈತ ಸಾವನ್ನಪ್ಪಿರುವ ದಾರಣ ಘಟನೆ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ನಡೆದಿದೆ. ಕೃಷ್ಣೇಗೌಡ (62) ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ ರೈತ.
ಇದನ್ನು ಓದಿ: ಇಬ್ಬರು ಮಕ್ಕಳನ್ನು ಕತ್ತು ಸೀಳಿ ಕೊಂದ ಕ್ಷೌರಿಕ; ಪೊಲೀಸ್ ಎನ್ಕೌಂಟರ್ಗೆ ಬಲಿ
ಜಮೀನಿನ ಬದುವಿನಲ್ಲಿ ಏಕಾಏಕಿ ಒಣ ಹುಲ್ಲಿಗೆ ಬೆಂಕಿ ತಗುಲಿಕೊಂಡಿದೆ. ತೋಟಕ್ಕೆಲ್ಲಾ ಬೆಂಕಿ ವ್ಯಾಪಿಸುತ್ತದೆ ಎಂದು ಕೃಷ್ಣೇಗೌಡ ಬೆಂಕಿ ನಂದಿಸಲು ಹೋಗಿದ್ದಾರೆ. ಈ ವೇಳೆ ಜೋರಾಗಿ ಉರಿಯುತ್ತಿದ್ದ ಬೆಂಕಿಗೆ ಕೃಷ್ಣೇಗೌಡ ಸಿಲುಕಿಕೊಂಡಿದ್ದಾರೆ. ಸುಟ್ಟ ಗಾಯಗಳಿಂದ ಕೃಷ್ಣೇಗೌಡ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಗ್ರಾಮಸ್ಥರು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೊಳೆನರಸೀಪುರ ತಾಲೂಕಿನ ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಕೃಷ್ಣೇಗೌಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ