ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಸಿನಿಮಿಯ ರೀತಿಯಲ್ಲೇ ಕಳ್ಳತನ ಮಾಡಿದ ಗ್ಯಾಂಗ್
ಚಿನ್ನ ಕದ್ದು ಕಾರಿನಲ್ಲಿ ಎಸ್ಕೇಪ್ ಆದಾಗ ಸಿಕ್ಕಿಬಿದ್ರು!
ಚಾಮರಾಜನಗರ: ಚಿನ್ನದ ವ್ಯಾಪಾರಿಯನ್ನು ಸಿನಿಮಿಯ ರೀತಿಯಲ್ಲಿ ಕಾರು ಸಮೇತ ಅಪಹರಿಸಿರೋ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ನಡೆದಿದೆ.
ಕೇರಳ ಮೂಲದ ಚಿನ್ನದ ವ್ಯಾಪಾರಿ ಸುಖದೇವ್ ಕಾರಿನಲ್ಲಿ ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಬಳಿಕ ಕಾರಿನಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಕಾರಿನ ಸಮೇತ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳು ಸೋಮಹಳ್ಳಿ ಸಮೀಪ ಹೋಗುತ್ತಿದ್ದಾಗ ಅನುಮಾನಗೊಂಡ ಪೊಲೀಸ್ ಅಧಿಕಾರಿಗಳು ಕಾರನ್ನು ತಡೆಯಲು ಮುಂದಾಗಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಜಮೀನಿಗೆ ನುಗ್ಗಿದ್ದಾರೆ. ಈ ವೇಳೆ ಕಳ್ಳರು ಸ್ಥಳೀಯರ ಕೈಗೆ ಸಿಕ್ಕಿಬಿದಿದ್ದಾರೆ. ಬಳಿಕ ಐವರು ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಸಿನಿಮಿಯ ರೀತಿಯಲ್ಲೇ ಕಳ್ಳತನ ಮಾಡಿದ ಗ್ಯಾಂಗ್
ಚಿನ್ನ ಕದ್ದು ಕಾರಿನಲ್ಲಿ ಎಸ್ಕೇಪ್ ಆದಾಗ ಸಿಕ್ಕಿಬಿದ್ರು!
ಚಾಮರಾಜನಗರ: ಚಿನ್ನದ ವ್ಯಾಪಾರಿಯನ್ನು ಸಿನಿಮಿಯ ರೀತಿಯಲ್ಲಿ ಕಾರು ಸಮೇತ ಅಪಹರಿಸಿರೋ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ನಡೆದಿದೆ.
ಕೇರಳ ಮೂಲದ ಚಿನ್ನದ ವ್ಯಾಪಾರಿ ಸುಖದೇವ್ ಕಾರಿನಲ್ಲಿ ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಬಳಿಕ ಕಾರಿನಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಕಾರಿನ ಸಮೇತ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳು ಸೋಮಹಳ್ಳಿ ಸಮೀಪ ಹೋಗುತ್ತಿದ್ದಾಗ ಅನುಮಾನಗೊಂಡ ಪೊಲೀಸ್ ಅಧಿಕಾರಿಗಳು ಕಾರನ್ನು ತಡೆಯಲು ಮುಂದಾಗಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಜಮೀನಿಗೆ ನುಗ್ಗಿದ್ದಾರೆ. ಈ ವೇಳೆ ಕಳ್ಳರು ಸ್ಥಳೀಯರ ಕೈಗೆ ಸಿಕ್ಕಿಬಿದಿದ್ದಾರೆ. ಬಳಿಕ ಐವರು ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ