newsfirstkannada.com

ಮಂಗಳೂರು, ಉಡುಪಿಯಲ್ಲಿ 5 ದಿನ ಭರ್ಜರಿ ಮಳೆ; ಮೀನುಗಾರರಿಗೆ ಖಡಕ್​ ಎಚ್ಚರಿಕೆ!

Share :

Published May 6, 2024 at 7:42pm

Update May 6, 2024 at 7:53pm

    ಕಳೆದ ಒಂದು ತಿಂಗಳಿನಿಂದ ರಣಬಿಸಿಲಿಗೆ ಕಂಗೆಟ್ಟ ರಾಜ್ಯದ ಜನ

    ಆದಷ್ಟು ಬೇಗ ಮಳೆಯಾಗಲಿ ಎಂದಿದ್ದ ಜನರಿಗೆ ಭರ್ಜರಿ ಗುಡ್​ನ್ಯೂಸ್​​

    ಮಳೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ಮಂಗಳೂರು: ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಕರಾವಳಿ ಮಂದಿಗೆ ರಾಜ್ಯ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಐದು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇಂದು ರಾತ್ರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿಯಲಿದೆ. ನಾಳೆ ಬೆಳಿಗ್ಗೆಯಿಂದ ಗಾಳಿ ಸಹಿತ ಭಾರಿ ಮಳೆ ಆರ್ಭಟಿಸಲಿದೆ. ಕಳೆದ ಒಂದು ವಾರದಿಂದ ಆಗಾಗ ಸಣ್ಣ ಪ್ರಮಾಣದಲ್ಲಿ ಸುರಿಯುತ್ತಿರೋ ಮಳೆ ಜೋರಾಗಿ ಇರಲಿದೆ. ಇಷ್ಟೇ ಅಲ್ಲ ಕರಾವಳಿ ಹಾಗೂ ಮಲೆನಾಡು ತಾಲ್ಲೂಕುಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಐದು ದಿನ ಮಳೆಯಾಗಲಿದೆ. ಹಾಗಾಗಿ ಕರಾವಳಿ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಮುನ್ಸೂಚನೆ ನೀಡಿರೋ ಹವಮಾನ ಇಲಾಖೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಿದೆ.

ಇದನ್ನೂ ಓದಿ: ಇಂದು ರಾತ್ರಿ ಬೆಂಗಳೂರಲ್ಲಿ ಭರ್ಜರಿ ಮಳೆ; ಈ ರಸ್ತೆಗಳಲ್ಲಿ ಭಾರೀ ಟ್ರಾಫಿಕ್​​ ಜಾಮ್!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಗಳೂರು, ಉಡುಪಿಯಲ್ಲಿ 5 ದಿನ ಭರ್ಜರಿ ಮಳೆ; ಮೀನುಗಾರರಿಗೆ ಖಡಕ್​ ಎಚ್ಚರಿಕೆ!

https://newsfirstlive.com/wp-content/uploads/2024/05/Rain.jpg

    ಕಳೆದ ಒಂದು ತಿಂಗಳಿನಿಂದ ರಣಬಿಸಿಲಿಗೆ ಕಂಗೆಟ್ಟ ರಾಜ್ಯದ ಜನ

    ಆದಷ್ಟು ಬೇಗ ಮಳೆಯಾಗಲಿ ಎಂದಿದ್ದ ಜನರಿಗೆ ಭರ್ಜರಿ ಗುಡ್​ನ್ಯೂಸ್​​

    ಮಳೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ಮಂಗಳೂರು: ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಕರಾವಳಿ ಮಂದಿಗೆ ರಾಜ್ಯ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಐದು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇಂದು ರಾತ್ರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿಯಲಿದೆ. ನಾಳೆ ಬೆಳಿಗ್ಗೆಯಿಂದ ಗಾಳಿ ಸಹಿತ ಭಾರಿ ಮಳೆ ಆರ್ಭಟಿಸಲಿದೆ. ಕಳೆದ ಒಂದು ವಾರದಿಂದ ಆಗಾಗ ಸಣ್ಣ ಪ್ರಮಾಣದಲ್ಲಿ ಸುರಿಯುತ್ತಿರೋ ಮಳೆ ಜೋರಾಗಿ ಇರಲಿದೆ. ಇಷ್ಟೇ ಅಲ್ಲ ಕರಾವಳಿ ಹಾಗೂ ಮಲೆನಾಡು ತಾಲ್ಲೂಕುಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಐದು ದಿನ ಮಳೆಯಾಗಲಿದೆ. ಹಾಗಾಗಿ ಕರಾವಳಿ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಮುನ್ಸೂಚನೆ ನೀಡಿರೋ ಹವಮಾನ ಇಲಾಖೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಿದೆ.

ಇದನ್ನೂ ಓದಿ: ಇಂದು ರಾತ್ರಿ ಬೆಂಗಳೂರಲ್ಲಿ ಭರ್ಜರಿ ಮಳೆ; ಈ ರಸ್ತೆಗಳಲ್ಲಿ ಭಾರೀ ಟ್ರಾಫಿಕ್​​ ಜಾಮ್!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More