Breaking: ರೈಲು ಚಲಿಸುತ್ತಿದ್ದಾಗ ಭೀಕರ ಅಪಘಾತ.. ಪ್ರಯಾಣಿಕರು ನೆಲಕ್ಕುರುಳಿ ಬಿದ್ದು ಘೋರ ದುರಂತ..

author-image
Ganesh
Updated On
Breaking: ರೈಲು ಚಲಿಸುತ್ತಿದ್ದಾಗ ಭೀಕರ ಅಪಘಾತ.. ಪ್ರಯಾಣಿಕರು ನೆಲಕ್ಕುರುಳಿ ಬಿದ್ದು ಘೋರ ದುರಂತ..
Advertisment
  • ಐದು ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ
  • ಅನಾಹುತದಲ್ಲಿ ಅನೇಕರು ಆಸ್ಪತ್ರೆಗೆ ದಾಖಲಾಗಿದ್ದಾರೆ
  • ಕಿಕ್ಕಿರಿದು ಪ್ರಯಾಣಿಕರು ತುಂಬಿದ್ದರಿಂದ ಅನಾಹುತ

ಕಿಕ್ಕಿರಿದು ತುಂಬಿದ್ದ ರೈಲಿನಿಂದ ಬಿದ್ದು ಐವರು ಪ್ರಾಣ ಕಳೆದುಕೊಂಡ ಘಟನೆ ಮುಂಬೈನಲ್ಲಿ ಇಂದು ಬೆಳಗ್ಗೆ ನಡೆದಿದೆ. ದುರ್ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ದಿವ ಮತ್ತು ಕೊಪರ್ (Diva and Kopar) ರೈಲ್ವೇ ನಿಲ್ದಾಣದ ಮಧ್ಯೆ ಅನಾಹುತ ಸಂಭವಿಸಿದೆ. ಪುಷ್ಪಕ್ ಎಕ್ಸ್​ಪ್ರೆಸ್​ ರೈಲು (Pushpak express) ಕಾಸರಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಹನಿಮೂನ್​​ಗೆ ಬಂದ ಜೋಡಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್​.. ಭಾರೀ ಸಂಚಲನ ಸೃಷ್ಟಿಸಿದ್ದ ಕೇಸ್​ಗೆ ಪತ್ನಿಯೇ ವಿಲನ್..!

ಪ್ರಾಥಮಿಕ ವರದಿ ಪ್ರಕಾರ, ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಕಿಕ್ಕಿರಿದು ತುಂಬಿತ್ತು. ರೈಲಿನ ಬಾಗಿಲು ಬಳಿ ಪ್ರಯಾಣಿಕರು ಜೋತು ನಿಂತಿದ್ದರು. ಈ ವೇಳೆ ಕೆಲವು ಪ್ರಯಾಣಿಕರು ನೆಲಕ್ಕುರುಳಿ ಬಿದ್ದಿದ್ದಾರೆ. ಇದರಿಂದ ಐದು ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಇನ್ನು, ಗಾಯಗೊಂಡವರನ್ನು ಕಲ್ವಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕಾಲ್ತುಳಿತದಲ್ಲಿ RCB ಅಭಿಮಾನಿ ನಿಧನ.. ಮೊಮ್ಮಗನ ಅಗಲಿಕೆ ನೋವಿನಲ್ಲಿದ್ದ ಅಜ್ಜಿಯೂ ಕೊನೆಯುಸಿರು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment