newsfirstkannada.com

ಮತ್ತೊಂದು ಅಗ್ನಿ ದುರಂತ.. ಐವರು ಸಜೀವ ದಹನ.. 7 ಮಂದಿ ಗಂಭೀರ

Share :

Published January 19, 2024 at 8:05am

    ಎಂಟು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡು

    ಗಾಯಗೊಂಡವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

    ಬೆಂಕಿ ಹತೋಟಿಗೆ ತರಲಾಗಿದೆ, ಭಾರೀ ಹಾನಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಐವರು ಸಜೀವ ದಹನವಾದ ಘಟನೆ ಪಿತಾಂಪುರಿಯಲ್ಲಿ ಮನೆಯೊಂದರಲ್ಲಿ ನಡೆದಿದೆ.

7 ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಂಟು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರು. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಐದು ಜೀವಗಳ ಜೊತೆಗೆ ಕಟ್ಟಡದಲ್ಲಿದ್ದ ಲಕ್ಷಾಂತರ ಬೆಲೆ ಬಾಳುವ ವಸ್ತುಗಳು ಸಹ ಸುಟ್ಟು ಕರಕಲಾಗಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮತ್ತೊಂದು ಅಗ್ನಿ ದುರಂತ.. ಐವರು ಸಜೀವ ದಹನ.. 7 ಮಂದಿ ಗಂಭೀರ

https://newsfirstlive.com/wp-content/uploads/2024/01/DLH-FIRE.jpg

    ಎಂಟು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡು

    ಗಾಯಗೊಂಡವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

    ಬೆಂಕಿ ಹತೋಟಿಗೆ ತರಲಾಗಿದೆ, ಭಾರೀ ಹಾನಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಐವರು ಸಜೀವ ದಹನವಾದ ಘಟನೆ ಪಿತಾಂಪುರಿಯಲ್ಲಿ ಮನೆಯೊಂದರಲ್ಲಿ ನಡೆದಿದೆ.

7 ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಂಟು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರು. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಐದು ಜೀವಗಳ ಜೊತೆಗೆ ಕಟ್ಟಡದಲ್ಲಿದ್ದ ಲಕ್ಷಾಂತರ ಬೆಲೆ ಬಾಳುವ ವಸ್ತುಗಳು ಸಹ ಸುಟ್ಟು ಕರಕಲಾಗಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More