/newsfirstlive-kannada/media/post_attachments/wp-content/uploads/2025/02/bsy-3.jpg)
ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಇಂದು 82ನೇ ವಸಂತಕ್ಕೆ ಕಾಲಿಟ್ಟಿದ್ದು ಅವರ ಮನೆಯಲ್ಲಿ ಸಂಭ್ರಮ ಕಳೆಗಟ್ಟಿದೆ.
ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ತಮ್ಮ ಕುಟುಂಬ ಸಮೇತ ಬಿ.ಎಸ್ ಯಡಿಯೂರಪ್ಪ ಅವರು ಮಧ್ಯಾಹ್ನ 2 ಗಂಟೆಗೆ ಯಡಿಯೂರಿನಲ್ಲಿನ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ತಮ್ಮ ಕುಟುಂಬ ಸಮೇತ ಬಿ.ಎಸ್ ಯಡಿಯೂರಪ್ಪ ದೇವಾಲಯಕ್ಕೆ ತೆರಳುತ್ತಿದ್ದರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಇರಲಿದ್ದಾರೆ. ಈ ಸಮಯದಲ್ಲಿ ಮಾತ್ರ ಪಕ್ಷದ ಮುಖಂಡರು, ಆಪ್ತರು, ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ.
ತಂದೆಯ ಹುಟ್ಟು ಹಬ್ಬ ನಿಮಿತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಸಂಸದ ಬಿ.ವೈ ರಾಘವೇಂದ್ರ ಅವರು ಕುಟುಂಬ ಸಮೇತರಾಗಿ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ್ದಾರೆ. ತಂದೆಗೆ ಸಿಹಿ ತಿನಿಸಿ, ಶುಭ ಕೋರಿದ್ದಾರೆ.
ಇದಾದ ಮೇಲೆ ಬಿ.ವೈ ವಿಜಯೇಂದ್ರ ಹಾಗೂ ಪತ್ನಿ ಇಬ್ಬರು ಆಶೀರ್ವಾದ ಪಡೆದುಕೊಂಡಿದ್ದಾರೆ. ಪತ್ನಿ ಸಮೇತ ವಿಜಯೇಂದ್ರ ಅವರು ತಂದೆ ಯಡಿಯೂರಪ್ಪ ಅವರ ಕಾಲಿಗೆ ನಮಸ್ಕಾರ ಮಾಡಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಬರ್ತ್ಡೇ ಹಿನ್ನೆಲೆಯಲ್ಲಿ ದವಳಗಿರಿಯ ನಿವಾಸ ಹೂಗಳ ಅಲಂಕಾರದಿಂದ ಕಂಗೊಳಿಸುತ್ತಿದೆ. ಇದರ ಜೊತೆಗೆ ಹುಟ್ಟುಹಬ್ಬಕ್ಕೆ ಶುಭ ಕೋರುವ ಬ್ಯಾನರ್, ಫ್ಲೆಕ್ಸ್ಗಳ ಅಳವಡಿಕೆ ಜೋರಾಗಿದೆ.
ಇನ್ನು ಪಕ್ಷದ ಮುಖಂಡರು, ಆಪ್ತರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿವಾಸಕ್ಕೆ ಆಗಮಿಸಿ ಶುಭಶಯಗಳನ್ನು ತಿಳಿಸುತ್ತಿದ್ದಾರೆ. ಹುಟ್ಟು ಹಬ್ಬ ಇರುವುದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಇಡೀ ಕುಡುಂಬದೊಂದಿಗೆ ದವಳಗಿರಿ ನಿವಾಸದಲ್ಲಿ ಫೋಟೋ ತೆಗೆಸಿಕೊಂಡರು.
ಅಲ್ಲದೇ 82ನೇ ವರ್ಷದ ಜನ್ಮದಿನ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅಭಿಮಾನಿಗಳು 82 ಕೆ.ಜಿ ತೂಕದ ಕೇಕ್ ತಯಾರಿಸಿದ್ದು ವಿಶೇಷವಾಗಿತ್ತು.
ಹೀಗಾಗಿ ಯಡಿಯೂರಪ್ಪ ಅವರು 82ಕೆ.ಜಿ ತೂಕದ ಕೇಕ್ ಕತ್ತರಿಸೋ ಮೂಲಕ ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.
ಈ ವೇಳೆ ಕುಟುಂಬದವರೂ ಸಹ ಭಾಗಿಯಾಗಿ ಖುಷಿ ಪಟ್ಟಿದ್ದಾರೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ