ಮಾಜಿ ಸಿಎಂ, ಹಿರಿಯ ನಾಯಕ SM​​ ಕೃಷ್ಣ ಆರೋಗ್ಯದಲ್ಲಿ ದಿಢೀರ್​ ಏರುಪೇರು; ಆಸ್ಪತ್ರೆಗೆ ದಾಖಲು

author-image
Ganesh Nachikethu
Updated On
ಮಾಜಿ ಸಿಎಂ, ಹಿರಿಯ ನಾಯಕ SM​​ ಕೃಷ್ಣ ಆರೋಗ್ಯದಲ್ಲಿ ದಿಢೀರ್​ ಏರುಪೇರು; ಆಸ್ಪತ್ರೆಗೆ ದಾಖಲು
Advertisment
  • ಮಾಜಿ ಸಿಎಂ ಮತ್ತು ಹಿರಿಯ ಬಿಜೆಪಿ ನಾಯಕ ಎಸ್.ಎಮ್​ ಕೃಷ್ಣ
  • ಹಿರಿಯ ನಾಯಕ SM​ ಕೃಷ್ಣ ಆರೋಗ್ಯದಲ್ಲಿ ದಿಢೀರ್​​ ಏರುಪೇರು!
  • ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ

ಬೆಂಗಳೂರು: ಮಾಜಿ ಸಿಎಂ ಮತ್ತು ಹಿರಿಯ ಬಿಜೆಪಿ ನಾಯಕ ಎಸ್.ಎಮ್​ ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಹಾಗಾಗಿ ಹಿರಿಯ ನಾಯಕರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಎಸ್.ಎಮ್​ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ ಇವರು ಆರೋಗ್ಯದಲ್ಲಿ ದಿಢೀರ್​​ ಏರುಪೇರಾಗಿತ್ತು. ಈ ಕೂಡಲೇ ಎಸ್​​.ಎಮ್​ ಕೃಷ್ಣಾ ಅವರನ್ನು ಮಣಿಪಾಲ್​​ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.

ಇನ್ನು, ಮೂರು ದಿನಗಳ ಕಾಲ ಆರೋಗ್ಯದ ಮೇಲೆ ನಿಗಾವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಹಾಗಾಗಿ ಮೂರು ದಿನಗಳ ಕಾಲ ಎಸ್​​.ಎಮ್​ ಕೃಷ್ಣಾ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ.

ಈ ಹಿಂದೆ ಶ್ವಾಸಕೋಶ ಸಮಸ್ಯೆಯಿಂದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ 4 ತಿಂಗಳ ಕಾಲ ಸುದೀರ್ಘ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್​​ ಆಗಿದ್ರು.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment