ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್
ಉಚಿತ ಪ್ರಯಾಣ ಶುರುವಾಗಿದ್ದೇ ತಡ ಮಹಿಳೆಯರು ಫುಲ್ ಖುಷ್
ಧರ್ಮಸ್ಥಳಕ್ಕೆ ಹೋಗಲು KSRTC ಅಡ್ವಾನ್ಸ್ ಬಸ್ ಟಿಕೆಟ್ ಬುಕ್ಕಿಂಗ್
ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಉಚಿತ ಪ್ರಯಾಣ ಶುರುವಾಗಿದ್ದೇ ಆಗಿದ್ದು, ಮಹಿಳೆಯರ ಪ್ರವಾಸ ಜೋರಾಗಿದೆ. ಸದ್ಯ ನಾಳೆ ಬೇರೆ ರಜೆ ಇರುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಹೋಗಲು KSRTC ಅಡ್ವಾನ್ಸ್ ಬಸ್ ಟಿಕೆಟ್ ಬುಕ್ಕಿಂಗ್ಗಾಗಿ ಮಹಿಳೆಯರು ಮುಗಿಬಿದ್ದಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಹಿಳೆಯರು ಸರದಿ ಸಾಲ್ಲಿನಲ್ಲಿ ನಾ ಮುಂದು ತಾ ಮುಂದು ಅಂತ ಟಕೆಟ್ ತಗೋಳೋಕೆ ನುಗ್ಗುತ್ತಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಮಂಗಳೂರು, ಶೃಂಗೇರಿ, ಹೊರನಾಡು, ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಬಸ್ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದ್ದು, ಜನದಟ್ಟಣೆಗೆ ಅನುಗುಣವಾಗಿ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ KSRTC ಸಿಬ್ಬಂದಿಗೆ ಪ್ರಯಾಣಿಕರು ಮನವಿ ಮಾಡಿಕೊಂಡಿದ್ದಾರೆ.
ಇನ್ನು, ಬಸ್ ನಿಲ್ದಾಣದಲ್ಲಿದ್ದ ಜನರನ್ನು ಕಂಟ್ರೋಲ್ ಮಾಡಲು ಕೆಎಸ್ಆರ್ಟಿಸಿ ಭರ್ಜರಿ ಪ್ಲಾನ್ವೊಂದು ಮಾಡಿದ್ದಾರೆ. ಧಾರ್ಮಿಕ ಸ್ಥಳಗಳಿಗೆ ತೆರಳುವವರಿಗಾಗಿಯೇ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಜನರ ಸಂಖ್ಯೆ ಅಧಿಕವಾಗುತ್ತಿದ್ದಂತೆ ಅಡ್ವಾನ್ಸ್ ಆಗಿ 10 ರೂಪಾಯಿ ನೀಡಿ ಟಿಕೆಟ್ ಪಡೆದರೆ ಬಸ್ ಟೈಮಿಂಗ್ ತಿಳಿಸಲಾಗುತ್ತೆ ಎಂದು ಕೆಎಸ್ಆರ್ಟಿಸಿ ಸಿಬ್ಬಂದಿ ತಿಳಿಸಿದ್ದಾರೆ. ಜನ ಟಿಕೆಟ್ ಬುಕ್ ಮಾಡಿದ ಆಧಾರದ ಮೇಲೆ ಹೆಚ್ಚುವರಿ ಬಸ್ ಬಿಡಲಾಗುತ್ತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನ ಧರ್ಮಸ್ಥಳಕ್ಕೆ ಒಟ್ಟು 45 ಬಸ್ಗಳನ್ನು ಬಿಡಲಾಗಿದೆ. ಈಗಾಗಲೇ ಬಹುತೇಕ ಪ್ರಯಾಣಿಕರು ಅಡ್ವಾನ್ಸ್ ಬಸ್ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡಿದ್ದಾರೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿದ ಕಾರಣ ಹೆಚ್ಚುವರಿಯಾಗಿ 17 ಬಸ್ಗಳನ್ನು ಬಿಡಲಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಟಿಕೆಟ್ ಬುಕ್ಕಿಂಗ್ಗೆ ಮಹಿಳೆಯರು ಮುಗಿಬಿದ್ದಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಮಂಗಳೂರು, ಶೃಂಗೇರಿ, ಹೊರನಾಡು, ಮಂಗಳೂರು, ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಬಸ್ಗಳಿಗೆ ಭಾರೀ ಡಿಮ್ಯಾಂಡ್ ಬಂದಿದೆ. ಮಹಿಳಾ ಪ್ರಯಾಣಿಕರಿಗೆ ಸೀಟ್ ವ್ಯವಸ್ಥೆ ಮಾಡಲು KSRTC ಸಿಬ್ಬಂದಿ ಹರಸಾಹಸ… pic.twitter.com/iAcC3FIa0b
— NewsFirst Kannada (@NewsFirstKan) June 17, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್
ಉಚಿತ ಪ್ರಯಾಣ ಶುರುವಾಗಿದ್ದೇ ತಡ ಮಹಿಳೆಯರು ಫುಲ್ ಖುಷ್
ಧರ್ಮಸ್ಥಳಕ್ಕೆ ಹೋಗಲು KSRTC ಅಡ್ವಾನ್ಸ್ ಬಸ್ ಟಿಕೆಟ್ ಬುಕ್ಕಿಂಗ್
ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಉಚಿತ ಪ್ರಯಾಣ ಶುರುವಾಗಿದ್ದೇ ಆಗಿದ್ದು, ಮಹಿಳೆಯರ ಪ್ರವಾಸ ಜೋರಾಗಿದೆ. ಸದ್ಯ ನಾಳೆ ಬೇರೆ ರಜೆ ಇರುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಹೋಗಲು KSRTC ಅಡ್ವಾನ್ಸ್ ಬಸ್ ಟಿಕೆಟ್ ಬುಕ್ಕಿಂಗ್ಗಾಗಿ ಮಹಿಳೆಯರು ಮುಗಿಬಿದ್ದಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಹಿಳೆಯರು ಸರದಿ ಸಾಲ್ಲಿನಲ್ಲಿ ನಾ ಮುಂದು ತಾ ಮುಂದು ಅಂತ ಟಕೆಟ್ ತಗೋಳೋಕೆ ನುಗ್ಗುತ್ತಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಮಂಗಳೂರು, ಶೃಂಗೇರಿ, ಹೊರನಾಡು, ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಬಸ್ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದ್ದು, ಜನದಟ್ಟಣೆಗೆ ಅನುಗುಣವಾಗಿ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ KSRTC ಸಿಬ್ಬಂದಿಗೆ ಪ್ರಯಾಣಿಕರು ಮನವಿ ಮಾಡಿಕೊಂಡಿದ್ದಾರೆ.
ಇನ್ನು, ಬಸ್ ನಿಲ್ದಾಣದಲ್ಲಿದ್ದ ಜನರನ್ನು ಕಂಟ್ರೋಲ್ ಮಾಡಲು ಕೆಎಸ್ಆರ್ಟಿಸಿ ಭರ್ಜರಿ ಪ್ಲಾನ್ವೊಂದು ಮಾಡಿದ್ದಾರೆ. ಧಾರ್ಮಿಕ ಸ್ಥಳಗಳಿಗೆ ತೆರಳುವವರಿಗಾಗಿಯೇ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಜನರ ಸಂಖ್ಯೆ ಅಧಿಕವಾಗುತ್ತಿದ್ದಂತೆ ಅಡ್ವಾನ್ಸ್ ಆಗಿ 10 ರೂಪಾಯಿ ನೀಡಿ ಟಿಕೆಟ್ ಪಡೆದರೆ ಬಸ್ ಟೈಮಿಂಗ್ ತಿಳಿಸಲಾಗುತ್ತೆ ಎಂದು ಕೆಎಸ್ಆರ್ಟಿಸಿ ಸಿಬ್ಬಂದಿ ತಿಳಿಸಿದ್ದಾರೆ. ಜನ ಟಿಕೆಟ್ ಬುಕ್ ಮಾಡಿದ ಆಧಾರದ ಮೇಲೆ ಹೆಚ್ಚುವರಿ ಬಸ್ ಬಿಡಲಾಗುತ್ತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನ ಧರ್ಮಸ್ಥಳಕ್ಕೆ ಒಟ್ಟು 45 ಬಸ್ಗಳನ್ನು ಬಿಡಲಾಗಿದೆ. ಈಗಾಗಲೇ ಬಹುತೇಕ ಪ್ರಯಾಣಿಕರು ಅಡ್ವಾನ್ಸ್ ಬಸ್ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡಿದ್ದಾರೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿದ ಕಾರಣ ಹೆಚ್ಚುವರಿಯಾಗಿ 17 ಬಸ್ಗಳನ್ನು ಬಿಡಲಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಟಿಕೆಟ್ ಬುಕ್ಕಿಂಗ್ಗೆ ಮಹಿಳೆಯರು ಮುಗಿಬಿದ್ದಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಮಂಗಳೂರು, ಶೃಂಗೇರಿ, ಹೊರನಾಡು, ಮಂಗಳೂರು, ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಬಸ್ಗಳಿಗೆ ಭಾರೀ ಡಿಮ್ಯಾಂಡ್ ಬಂದಿದೆ. ಮಹಿಳಾ ಪ್ರಯಾಣಿಕರಿಗೆ ಸೀಟ್ ವ್ಯವಸ್ಥೆ ಮಾಡಲು KSRTC ಸಿಬ್ಬಂದಿ ಹರಸಾಹಸ… pic.twitter.com/iAcC3FIa0b
— NewsFirst Kannada (@NewsFirstKan) June 17, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ