/newsfirstlive-kannada/media/post_attachments/wp-content/uploads/2025/01/Kotekar-Bank.jpg)
ಮಂಗಳೂರು: ರಾಜ್ಯದಲ್ಲಿ ಒಂದರ ಮೇಲೋಂದರಂತೆ ಬ್ಯಾಂಕ್ ದರೋಡೆ ಕೇಸ್ಗಳು ನಡೆಯುತ್ತಿವೆ. ಗುರುವಾರ ಅಷ್ಟೇ ಬೀದರ್ನಲ್ಲಿ ಎಂಟಿಎಂಗೆ ಹಣ ತುಂಬಿಸೋ ಸಂದರ್ಭದಲ್ಲಿ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಮಂಗಳೂರಲ್ಲಿ ಎಂಬುದು ಅಚ್ಚರಿ.
ಸಿನಿಮಾ ಶೈಲಿಯಲ್ಲೇ ಕಳ್ಳತನ
ಥೇಟ್ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್ಗೆ ನುಗ್ಗಿ ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್ಗೆ ನುಗ್ಗಿದ ಐದು ಜನರ ಖತರ್ನಾಕ್ ಕಳ್ಳರ ಗ್ಯಾಂಗ್ ಸಿಬ್ಬಂದಿಗೆ ಬೆದರಿಸಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ ಕದ್ದು ಎಸ್ಕೇಪ್ ಆಗಿದೆ.
ಪಕ್ಕಾ ಪ್ಲಾನ್ ಮಾಡಿ ಕದ್ದ ಗ್ಯಾಂಗ್
ಸುಮಾರು 12 ಕೋಟಿ ಹಣದೊಂದಿಗೆ ಚಿನ್ನ ಕದ್ದು ಎಸ್ಕೇಪ್ ಆದ ಗ್ಯಾಂಗ್ ಕನ್ನಡದಲ್ಲೇ ಮಾತಾಡುತ್ತಿದ್ದರು ಎಂದು ತಿಳಿದು ಬಂದಿದೆ. ಫಿಯೆಟ್ ಕಾರಿನಲ್ಲಿ ಬಂದು ಪಿಸ್ತೂಲು, ತಲವಾರು ತೋರಿಸಿ ಲೂಟಿ ಮಾಡಲಾಗಿದೆ.
ಸಿಸಿಟಿವಿ ಕ್ಯಾಮೆರಾ ರಿಪೇರಿಗೆ!
ಇಂದು ಸಿಸಿಟಿವಿ ಕ್ಯಾಮೆರಾ ರಿಪೇರಿಗೆ ನೀಡಲಾಗಿತ್ತು. ಅಷ್ಟೇ ಅಲ್ಲ ಶುಕ್ರವಾರ ಮಧ್ಯಾಹ್ನ ಆದ ಕಾರಣ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಮಸೀದಿಗಾಗಿ ತೆರಳುತ್ತಿದ್ದರು. ಮಂಗಳೂರಲ್ಲಿ ಸಿಎಂ ಪ್ರೋಗ್ರಾಮ್ ಇದ್ದ ಕಾರಣ ಹೆಚ್ಚಿನ ಪೊಲೀಸ್ ಭದ್ರತೆ ಕೂಡ ಇತ್ತು. ಇದೇ ಒಳ್ಳೆಯ ಅವಕಾಶ ಎಂದು ಭಾವಿಸಿ ಪಕ್ಕಾ ಪ್ಲಾನ್ ಮಾಡಿ ಕದಿಯಲಾಗಿದೆ. ಸ್ಥಳೀಯರು ಬ್ಯಾಂಕ್ ಸಿಬ್ಬಂದಿ ಮೇಲೆ ಅನುಮಾನ ವ್ಯಪ್ತಡಿಸಿದ್ದಾರೆ.
ಇದನ್ನೂ ಓದಿ:ಆಟಗಾರರಿಗೆ BCCI ಮೂಗುದಾರ.. ‘10 ಪಾಯಿಂಟ್ಸ್ ಪಾಲಿಸಿ’ಗೆ ಬೆಚ್ಚಿಬಿದ್ದ ಸ್ಟಾರ್ಗಳು..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್